ಮೊದಲ ಬಾರಿಗೆ ಮೊಬೈಲ್‌ ಆ್ಯಪ್ ಮೂಲಕ ಆರ್ಥಿಕ ಗಣತಿ


Team Udayavani, Jun 30, 2019, 3:08 AM IST

modala

ಮಂಗಳೂರು: ಉದ್ಯಮ, ಕೃಷಿ ಮತ್ತು ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಜನರ ವಿವರಗಳನ್ನು ದಾಖಲಿಸುವ 7ನೇ ಆರ್ಥಿಕ ಗಣತಿಯನ್ನು ಇದೇ ಮೊದಲ ಬಾರಿಗೆ ಮೊಬೈಲ್‌ ಆ್ಯಪ್‌ ಮೂಲಕ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದ ಗಣತಿಯ ಸಮೀಕ್ಷಾ ವರದಿ ಶೀಘ್ರ ಲಭ್ಯವಾಗಲಿದೆ. ಜತೆಗೆ, ಈ ಗಣತಿಯನ್ನು “ಡಿಜಿಟಲ್‌ ಸೇವಾ ಕೇಂದ್ರ’ಗಳ ಮೂಲಕ ಕೈಗೊಳ್ಳುವುದು ಕೂಡ ಇದೇ ಪ್ರಥಮ.

ಇಲ್ಲಿಯವರೆಗೆ ಅಂಗನವಾಡಿ-ಆಶಾ ಕಾರ್ಯಕರ್ತೆಯರನ್ನು ಈ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಇಲ್ಲಿಯವರೆಗೆ ಗಣತಿದಾರರು ಮನೆ, ಕಟ್ಟಡಗಳಿಗೆ ಭೇಟಿ ನೀಡಿ ಕಾಗದದಲ್ಲಿ ಬರೆದು ಬಳಿಕ ಕಂಪ್ಯೂಟರ್‌ಗೆ ಅಪ್‌ಲೋಡ್‌ ಮಾಡುತ್ತಿದ್ದರು. ಹೀಗಾಗಿ, ಸಮೀಕ್ಷೆಯ ವರದಿ ಲಭ್ಯವಾಗುವಾಗ ಹಲವು ವರ್ಷಗಳು ಕಳೆಯುತ್ತಿದ್ದವು. ಈ ಸಲ ಮೊದಲ ಬಾರಿಗೆ ಗಣತಿದಾರರಿಗೆ ಮೊಬೈಲ್‌ ಆ್ಯಪ್‌ ನೀಡಲಾಗಿದೆ. 2011ರ ಗಣತಿ ಬ್ಲಾಕ್‌ಗಳು ಮತ್ತು ನಕ್ಷೆಗಳನ್ನು ಜನಗಣತಿ ನಿರ್ದೇಶನಾಲಯದಿಂದ ಒದಗಿಸಲಾಗುತ್ತದೆ.

ಭಾರತ ಸರಕಾರದ ಸಾಂಖ್ಯೀಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯವು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ “ಡಿಜಿಟಲ್‌ ಸೇವಾ ಕೇಂದ್ರ’ಗಳ ಮೂಲಕ 7ನೇ ಆರ್ಥಿಕ ಗಣತಿ ಕೈಗೊಳ್ಳಲಿದೆ. ನಗರ, ಗ್ರಾಮ ಭಾಗದಲ್ಲಿ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಯಡಿ ಕೆಲಸ ಮಾಡುತ್ತಿರುವ ಡಿಜಿಟಲ್‌ ಸೇವಾ ಕೇಂದ್ರದವರು ಈ ಬಾರಿ ಗಣತಿ ನಡೆಸಲಿದ್ದಾರೆ.

ಗ್ರಾ.ಪಂ. ಪಿಡಿಒ, ನಗರ ವ್ಯಾಪ್ತಿಯ ಅಧಿಕಾರಿಗಳು ಇದಕ್ಕೆ ಸಹಕರಿಸಲಿದ್ದಾರೆ. ಗಣತಿದಾರರು ತಮಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಇರುವ ಮನೆ, ಕಟ್ಟಡಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುವ ಉದ್ಯಮ ಅಥವಾ ವ್ಯಾಪಾರ ಘಟಕದ ಗಣತಿ ಮಾಡಲಿದ್ದಾರೆ. ಸಂತೆ, ಬೀದಿ ಬದಿ ವ್ಯಾಪಾರ, ಮನೆಯಲ್ಲಿಯೇ ನಿರ್ವಹಿಸುವ ಟೈಲರಿಂಗ್‌ ಮತ್ತು ವಿವಿಧ ಸ್ವ ಉದ್ಯೋಗಗಳು, ಸಣ್ಣ ಪ್ರಮಾಣದ ಹೈನುಗಾರಿಕೆ ಇತ್ಯಾದಿಗಳನ್ನು ಮಾಲಿಕರ ಮನೆಯಲ್ಲಿಯೇ ಎಣಿಕೆ ಮಾಡಲಾಗುತ್ತದೆ.

ಮಾಲಿಕರ ಲಿಂಗವಾರು, ಸಾಮಾಜಿಕ ಗುಂಪುವಾರು, ಗಂಡು -ಹೆಣ್ಣು ಕೆಲಸಗಾರರು, ಉದ್ದಿಮೆಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳನ್ನು ಕೂಡ ಸಂಗ್ರಹಿಸಲಾಗುತ್ತದೆ. ಸುಗಮ ಆರ್ಥಿಕ ಗಣತಿಯ ಉಸ್ತುವಾರಿಗಾಗಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ಸರಕಾರ ರಚಿಸಿದೆ.

ಯಾಕಾಗಿ ಆರ್ಥಿಕ ಗಣತಿ?: ಈ ಗಣತಿಯ ಮೂಲಕ ದೇಶ-ರಾಜ್ಯದಲ್ಲಿ ಸಂಘಟಿತ, ಅಸಂಘಟಿತ ವಲಯದ ಕೃಷಿ ಮತ್ತು ಕೃಷಿಯೇತರ ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರ ಸಂಗ್ರಹಿಸುವುದು ಕೇಂದ್ರ ಸರಕಾರದ ಉದ್ದೇಶ.

ಇದರಿಂದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದು. ರಾಜ್ಯದ ಆಂತರಿಕ ಉತ್ಪಾದನೆಯಂತಹ ಮುಖ್ಯವಾದ ಅಂಶಗಳನ್ನು ತಿಳಿಯಲು ಇದು ಮುಖ್ಯ ಮಾಹಿತಿ ಮೂಲ. ಸಂಗ್ರಹಿತ ಮಾಹಿತಿ ಮುಂದೆ ಮಹತ್ವದ ಯೋಜನೆಗಳ ರೂಪುರೇಷೆ, ಅನುಷ್ಠಾನದ ಸಂದರ್ಭದಲ್ಲಿ ಉಪಯೋಗವಾಗುತ್ತದೆ.

1977ರಲ್ಲಿ ಮೊದಲ ಗಣತಿ: ದೇಶದಲ್ಲಿ ಈವರೆಗೆ 6 ಆರ್ಥಿಕ ಗಣತಿಗಳು ನಡೆದಿವೆ. 1977ರಲ್ಲಿ ಮೊದಲ ಆರ್ಥಿಕ ಗಣತಿ, ಬಳಿಕ 1980, 1990, 1998, 2005, 2013ರಲ್ಲಿ ನಂತರದ ಗಣತಿಗಳು ನಡೆದಿವೆ.

* ದಿನೇಶ್‌ ಇರಾ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.