FB ಇಂಡಿಯಾ ಅಧಿಕಾರಿ ವಿರುದ್ಧ ದೂರು
Team Udayavani, Aug 19, 2020, 5:40 AM IST
ರಾಯ್ಪುರ/ಹೊಸದಿಲ್ಲಿ: ಭಾರತದಲ್ಲಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲು ಫೇಸ್ಬುಕ್ ವೇದಿಕೆ ಕಲ್ಪಿಸಿದೆ ಎಂದು ಆರೋಪಿಸಿ ಭಾರತದ ಫೇಸ್ಬುಕ್ ಪಾಲಿಸಿ ಮುಖ್ಯಸ್ಥೆ ಅಂಖೀ ದಾಸ್ ವಿರುದ್ಧ ರಾಯ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್, “ಭಾರತದಲ್ಲಿ ದ್ವೇಷದ ಭಾಷಣ ಪೋಸ್ಟ್ ಮಾಡುವ ನಾಯಕರ ಮೇಲೆ ಫೇಸ್ಬುಕ್ ಮೃದುಧೋರಣೆ ಅನುಸರಿಸಿದೆ’ ಎಂದು ವಿವಾದಿತ ವರದಿ ಬಿತ್ತರಿಸಿತ್ತು. ಈ ವರದಿ ಆಧರಿಸಿ ಪತ್ರಕರ್ತ ಅವೇಶ್ ತಿವಾರಿ, ರಾಯ್ಪುರದ ಕಬೀರ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತನಿಖೆಗೆ ಒತ್ತಾಯ: ಫೇಸ್ಬುಕ್ ಇಂಡಿಯಾ ಭಾರತದ ಚುನಾವಣಾ ರಾಜಕೀಯದಲ್ಲಿ ಮಧ್ಯಪ್ರವೇಶಿಸಿದೆ. ಕೂಡಲೇ ಇಲ್ಲಿನ ತಂಡದ ನಾಯಕತ್ವದ ವಿರುದ್ಧ ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರ ಬರೆದಿದ್ದಾರೆ.
ಸಚಿವ ರವಿಶಂಕರ್ ತಿರುಗೇಟು: ರಾಜಕೀಯ ನೆಲೆ ಕಳೆದುಕೊಂಡವರು ಫೇಸ್ಬುಕ್ ಸಂಸ್ಥೆಗಳನ್ನು ತೆಗಳುವ ಮೂಲಕ ಪ್ರಚಾರ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ” ಬಿಜೆಪಿ ಬೆಂಬಲಿಗರ ನೂರಾರು ಪುಟಗಳನ್ನೂ ಫೇಸ್ಬುಕ್ ಡಿಲೀಟ್ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಏಕೆ ಮಾತಾಡುತ್ತಿಲ್ಲ?’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…