ಪ್ರಥಮ ಪಿಯುಸಿ ಫಲಿತಾಂಶ: ದ.ಕ. ಶೇ. 91.36, ಉಡುಪಿ ಶೇ. 91

ಮೊಬೈಲ್‌, ಇಮೇಲ್‌ ಮೂಲಕ ಫ‌ಲಿತಾಂಶ ಪಡೆದ ವಿದ್ಯಾರ್ಥಿಗಳು

Team Udayavani, May 6, 2020, 6:35 AM IST

ಪ್ರಥಮ ಪಿಯುಸಿ ಫಲಿತಾಂಶ: ದ.ಕ. ಶೇ. 91.36, ಉಡುಪಿ ಶೇ. 91

ಸಾಂದರ್ಭಿಕ ಚಿತ್ರ.

ಉಡುಪಿ/ ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ಫೆಬ್ರವರಿಯಲ್ಲಿ ನಡೆಸಿದ ಪ್ರಥಮ ಪಿಯುಸಿ ಫ‌ಲಿತಾಂಶ ಮಂಗಳವಾರ ಪ್ರಕಟಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಗೆ 15,379 ಮಂದಿ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿ, ಅದರಲ್ಲಿ 15,201 ಮಂದಿ ಪರೀಕ್ಷೆ ಬರೆದಿದ್ದರು. 13,770 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 91 ಫ‌ಲಿತಾಂಶ ಬಂದಿದೆ.

ದ.ಕ. ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು 33,498 ವಿದ್ಯಾರ್ಥಿಗಳ ಪೈಕಿ 30,603 ಮಂದಿ ಉತ್ತೀರ್ಣರಾಗಿದ್ದು, 2,509 ಮಂದಿ ಅನುತ್ತೀರ್ಣ ಗೊಂಡಿದ್ದಾರೆ. ಶೇ. 91.36 ಫಲಿತಾಂಶ ದಾಖಲಾಗಿದೆ. ಬಾಲಕರ ಪೈಕಿ 14,941 ಮಂದಿ ಉತ್ತೀರ್ಣರಾದರೆ, 1,812 ಮಂದಿ ಅನುತ್ತೀರ್ಣ, ಬಾಲಕಿಯರ ಪೈಕಿ 15,662 ಮಂದಿ ಉತ್ತೀರ್ಣ, 697 ಮಂದಿ ಅನುತ್ತೀರ್ಣರಾಗಿದ್ದಾರೆ.

ಕೋವಿಡ್-19 ವೈರಸ್‌ ಹರಡುವ ಭೀತಿ ಇರುವುದರಿಂದ ಫ‌ಲಿತಾಂಶ ನೋಡಲು ವಿದ್ಯಾರ್ಥಿಗಳು ಕಾಲೇಜಿಗೆ ಬರ ಬಾರದು ಎಂದು ಕಟ್ಟುನಿಟ್ಟಿನ ಸೂಚನೆ ಯನ್ನು ಶಿಕ್ಷಣ ಇಲಾಖೆ ನೀಡಿತ್ತು. ಜಿಲ್ಲಾ ಪಿಯು ಉಪನಿರ್ದೇಶಕ ಕಚೇರಿ ಯಿಂದಲೇ ನೇರವಾಗಿ ವಿದ್ಯಾರ್ಥಿ ಗಳಿಗೆ ಫ‌ಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್‌ಗೆ ಹಾಗೂ ಇಮೇಲ್‌ಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿತ್ತು.

ಪೂರಕ ಪರೀಕ್ಷೆ ದಿನ ನಿಗದಿಯಾಗಿಲ್ಲ
ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲೆ ನಡೆಸಲು ಕಾಲೇಜು ಮಂಡಳಿ ನಿರ್ಧರಿಸಿದೆ, ಈ ಹಿಂದೆಲ್ಲ ತಾಲೂಕು ಮಟ್ಟದಲ್ಲಿ ಒಂದೆರಡು ಕೇಂದ್ರ ಗಳನ್ನು ತೆರೆದು ಪೂರಕ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡ ಲಾಗುತ್ತಿತ್ತು. ಈ ಬಾರಿ ಲಾಕ್‌ಡೌನ್‌ ಇರುವುದರಿಂದ ಒಂದಷ್ಟು ಮಾನದಂಡ ಬದಲಾಗಲಿವೆ. ಪರೀಕ್ಷೆಗೆ ದಿನ ನಿಗದಿಪಡಿಸಿ ಸರಕಾರ ಇನ್ನು ಸುತ್ತೋಲೆ ಹೊರಡಿಸಬೇಕಷ್ಟೆ.

ದ್ವಿತೀಯ ಪಿಯುಸಿ
ಒಂದು ಪರೀಕ್ಷೆ ಬಾಕಿ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಂಗ್ಲಿಷ್‌ ಪರೀಕ್ಷೆ ನಡೆಯಲು ಬಾಕಿ ಇದೆ. ಲಾಕ್‌ಡೌನ್‌ ತೆರವಾದ ಬಳಿಕ ನಡೆಯುವ ಸಾಧ್ಯತೆಯಿದೆ. ಈ ಬಗ್ಗೆ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ.

ಸುವಿದ್ಯಾ ಆ್ಯಪ್‌ನಲ್ಲಿ ಫ‌ಲಿತಾಂಶ
“ಸುವಿದ್ಯಾ’ https://result.dkpucpa.com ವೆಬ್‌ಸೈಟ್‌ನಲ್ಲಿ ಕೂಡ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ, ಹುಟ್ಟಿದ ದಿನಾಂಕವನ್ನು ನಮೂದಿಸಿ ಪರೀಕ್ಷೆಯ ಫ‌ಲಿತಾಂಶವನ್ನು ಪಡೆಯಲು ಅನುವು ಮಾಡಿಕೊಟ್ಟಿದ್ದರಿಂದ ಹೆಚ್ಚಿನ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ವೀಕ್ಷಿಸಿದರು. ಇದು ರಾಜ್ಯ ಮಟ್ಟದ ಸರಕಾರದ ಅಧಿಕೃತ ವೆಬ್‌ಸೈಟ್‌. ಇದೇ ವೆಬ್‌ ಮೂಲಕ ಉಭಯ ಜಿಲ್ಲೆಯ ವಿದ್ಯಾರ್ಥಿಗಳೂ ಮಾಹಿತಿ ಪಡೆದುಕೊಂಡರು. ಈ ವೆಬ್‌ಸೈಟ್‌ ಅಲ್ಲದೆ ಇನ್ನು ಕೆಲವು ವಿದ್ಯಾರ್ಥಿಗಳು ಕಾಲೇಜು ಮುಖ್ಯಸ್ಥರಿಗೆ ಮೊಬೈಲ್‌ ಕರೆ ಮಾಡಿ ತಮ್ಮ ಫ‌ಲಿತಾಂಶದ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಪಡೆಯಲು ಯಾವುದೇ ತೊಂದರೆಗಳು ಆಗಿರಲಿಲ್ಲ ಎಂದು ಉಡುಪಿ ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.

ಮುಂದಿನ ವರ್ಷದಿಂದ ಪ್ರತ್ಯೇಕ ವೆಬ್‌ಸೈಟ್‌
ಪ್ರಸ್ತುತ ರಾಜ್ಯ ಮಟ್ಟದ ಆ್ಯಪ್‌ನಿಂದಲೇ ಯಾವುದೇ ಸಮಸ್ಯೆ ಇಲ್ಲದೆ ಫ‌ಲಿತಾಂಶ ಸಿಗುತ್ತಿದೆ. ಇಲಾಖೆಯ ಅನುಮತಿ ಪಡೆದು ಆಯಾ ಜಿಲ್ಲೆಯ ವೆಬ್‌ ವಿಳಾಸ ರಚನೆಗೆ ಅವಕಾಶವಿದೆ. ಉಡುಪಿಯಲ್ಲಿ ಇದು ಪ್ರಕ್ರಿಯೆಯ ಹಂತದಲ್ಲಿದೆ. ಮುಂದಿನ ವರ್ಷದಿಂದ ಇಲ್ಲಿಗೂ ಪ್ರತ್ಯೇಕ ವೆಬ್‌ಸೈಟ್‌ ವಿಳಾಸ ಸಿಗಲಿದೆ.

ದ್ವಿತೀಯ ಪರೀಕ್ಷೆಗೆ ಪ್ರವೇ ಶಾತಿ ಪಡೆಯುವ ಮಾನ ದಂಡದ ಬಗ್ಗೆ ಸರಕಾರದ ಸುತ್ತೋಲೆ ಹೊರಡಿಸಿಲ್ಲ. ಹೊರಡಿಸಿದ ಬಳಿಕವೇ ಈ ಬಗ್ಗೆ ನಿರ್ಧಾರವಾಗಲಿದೆ. ಶೈಕ್ಷಣಿಕ ತರಗತಿ ಗಳು ಜೂನ್‌ 15ರ ಅನಂತರವೇ ತೆರೆದು ಕೊಳ್ಳುವ
ಸಾಧ್ಯತೆಗಳಿವೆ.
-ಭಗವಂತ ಕಟ್ಟಿಮನಿ,
ಉಪನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ, ಉಡುಪಿ

ಪ್ರಥಮ ಪಿಯುಸಿಯಲ್ಲಿ ದ.ಕ.ಜಿಲ್ಲೆಗೆ ಶೇ. 91.36 ಫಲಿತಾಂಶ ಬಂದಿದೆ. ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪ್ರವೇಶಾತಿ ಬಗ್ಗೆ ಸರಕಾರದ ನಿರ್ದೇಶ ಬಂದ ಬಳಿಕ  ವಷ್ಟೇ ಗೊತ್ತಾಗಲಿದೆ. ಈಗಲೇ ಏನನ್ನೂ ಹೇಳಲು ಬರುವುದಿಲ್ಲ.
– ಕಲ್ಲಯ್ಯ, ಜಂಟಿ ನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ, ದ.ಕ.

ಟಾಪ್ ನ್ಯೂಸ್

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.