ONGC ಅನ್ವೇಷಿಸಿದ ಕಚ್ಚಾತೈಲದ ಮೊದಲ ಕಂತು; ಎಂಆರ್‌ಪಿಎಲ್‌ಗೆ “ದೇಶೀಯ’ ಕಚ್ಚಾತೈಲ


Team Udayavani, Mar 10, 2024, 1:09 AM IST

ONGC ಅನ್ವೇಷಿಸಿದ ಕಚ್ಚಾತೈಲದ ಮೊದಲ ಕಂತು; ಎಂಆರ್‌ಪಿಎಲ್‌ಗೆ “ದೇಶೀಯ’ ಕಚ್ಚಾತೈಲ

ಮಂಗಳೂರು: ಮಂಗ ಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್‌ ಲಿ. (ಎಂಆರ್‌ಪಿಎಲ್‌)ನ ಮಾತೃ ಸಂಸ್ಥೆ ಒಎನ್‌ಜಿಸಿ (ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಕಾರ್ಪೊ ರೇಶನ್‌) ಬಂಗಾಲಕೊಲ್ಲಿಯ ಕೃಷ್ಣ- ಗೋದಾವರಿ ಜಲಾನಯನ ಪ್ರದೇಶದಲ್ಲಿ ಹೊಸದಾಗಿ ಅನ್ವೇಷಿಸಿದ ಕಚ್ಚಾತೈಲವು ಮಂಗಳೂರಿಗೆ ಆಗಮಿಸಿದೆ.

60 ಸಾವಿರ ಮೆಟ್ರಿಕ್‌ ಟನ್‌ ಕಚ್ಚಾತೈಲ ತುಂಬಿದ ಮೊದಲ ಸರಕು ಹಡಗು “ಸ್ವರ್ಣ ಸಿಂಧು’ ಎನ್‌ಎಂಪಿಎ (ನವ ಮಂಗಳೂರು ಬಂದರು)ಗೆ ಆಗಮಿಸಿದ್ದು, ಶನಿವಾರ ನಡೆದ ಕಚ್ಚಾತೈಲ ಸ್ವೀಕಾರ ಕಾರ್ಯ ಕ್ರಮದಲ್ಲಿ ಒಎನ್‌ಜಿಸಿ, ಎಂಆರ್‌ಪಿಎಲ್‌ ಹಾಗೂ ಎನ್‌ಎಂಪಿಎ ಪ್ರಮುಖರು ಭಾಗವಹಿಸಿದ್ದರು.

ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರು ಶ್ಯಾಮಪ್ರಸಾದ್‌ ಕಾಮತ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಚ್ಚಾ ತೈಲವನ್ನು ಪೆಟ್ರೋಲ್‌, ಡೀಸೆಲ್‌ ಸಹಿತ ವಿವಿಧ ಪೆಟ್ರೋಲಿಯಂ ಉತ್ಪನ್ನಗಳಾಗಿ ಸಂಸ್ಕರಿಸಲಾಗುತ್ತದೆ ಎಂದರು.

ನಿರ್ದೇಶಕ (ಸಂಸ್ಕ ರಣೆ) ಸಂಜಯ್‌ ವರ್ಮ ಮಾತನಾಡಿ, ಕಚ್ಚಾತೈಲವನ್ನು ವಿವಿಧ ದೇಶಗಳಿಂದ ಸುಮಾರು ಶೇ. 70 ರಷ್ಟು ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಮುಂಬಯಿ ಸಹಿತ ಬೆರಳೆಣಿಕೆ ಕಡೆಗಳಲ್ಲಿ ಮಾತ್ರ ಆಂಶಿಕ ಪ್ರಮಾಣದಲ್ಲಿ ಕಚ್ಚಾತೈಲ ಸಿಗುತ್ತಿತ್ತು. ಆದರೆ ಮೊದಲ ಬಾರಿಗೆ ಭಾರೀ ಪ್ರಮಾಣದ ಕಚ್ಚಾತೈಲವು ಕೃಷ್ಣ-ಗೋದಾವರಿ ಜಲಾನಯನ ಪ್ರದೇಶದಲ್ಲಿ ದೊರಕಿದೆ ಎಂದರು.

ಎಂಆರ್‌ಪಿಎಲ್‌ ವಿಸ್ತರಣೆಯಿಂದ ಹಸುರು ವಲಯ ಹೆಚ್ಚಿಸಲು ಭೂಮಿ ಕೊರತೆ ಉಂಟಾಗಿದ್ದು, ಹೆಚ್ಚುವರಿ 27 ಎಕರೆ ಭೂಮಿ ಸ್ವಾಧೀನ ಪಡಿಸಿ ಕೊಳ್ಳಲಾ ಗುವುದು ಎಂದರು.

ಬಗ್ಗುಂಡಿ ಕೆರೆ ಮತ್ತು ಫಲ್ಗುಣಿ (ಗುರು ಪುರ) ನದಿಯ ನಡುವಿನ ಕುಡುಂಬೂರು ನದಿ ಬದಿ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆ ಯ ಅನುಮತಿ ಕೇಳಲಾಗಿದೆ ಎಂದರು. ಸಂಸ್ಥೆಯ ಗ್ರೂಪ್‌ ಮ್ಯಾನೇಜರ್‌ ಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಪೊ ರೇಟ್‌ ಕಮ್ಯುನಿಕೇಶನ್‌ನ ಜನರಲ್‌ ಮ್ಯಾನೇಜರ್‌ ರುಡಾಲ್ಫ್ ನೊರೊನ್ಹಾ ನಿರೂಪಿಸಿದರು.

ತ್ಯಾಜ್ಯ ಹೊರಬಿಡುತ್ತಿಲ್ಲ
ಎಂಆರ್‌ಪಿಎಲ್‌ ಸಂಸ್ಥೆ ತನ್ನ ವ್ಯಾಪ್ತಿಯ ಮಳೆನೀರು ಚರಂಡಿಗಳಿಗೆ ತ್ಯಾಜ್ಯ ಬಿಡುತ್ತಿಲ್ಲ ಎಂದು ಮುಂಡ್ಕೂರು ಶ್ಯಾಮಪ್ರಸಾದ್‌ ಕಾಮತ್‌ ತಿಳಿಸಿದರು. “ಫಲ್ಗುಣಿ ನದಿಯು ಎಂಆರ್‌ಪಿಎಲ್‌ ಮತ್ತಿತರ ಕೈಗಾರಿಕೆಗಳಿಂದ ಕಲು ಷಿತವಾಗುತ್ತಿದೆ’ ಎಂಬ ಆರೋಪದ ಬಗೆಗಿನ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ನಮ್ಮ ಪ್ರದೇಶಕ್ಕೆ ಭೇಟಿ ನೀಡಿ ಸುತ್ತಲಿನ ಎಲ್ಲ ಮಳೆನೀರು ಚರಂಡಿಗಳನ್ನು ಪರಿಶೀಲಿಸಿದ್ದು, ಯಾವುದೇ ತ್ಯಾಜ್ಯ ಹೊರಸೂಸುವಿಕೆ ಕಂಡುಬಂದಿಲ್ಲ. ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನ ಸಂಸ್ಥೆ (ನೀರಿ) ಕೂಡ ಸಂಸ್ಕರಣಾಗಾರದ 5 ಮತ್ತು 10 ಕಿ.ಮೀ. ವ್ಯಾಪ್ತಿಯಲ್ಲಿ ಗಾಳಿ, ನೀರಿನ ಮಾದರಿಗಳನ್ನು ಸ್ವೀಕರಿಸಿ ಎಂಆರ್‌ಪಿಎಲ್‌ನ ಗ್ರಿಡ್‌ ವಿಶ್ಲೇಷಣೆ ನಡೆಸುತ್ತದೆ. ಪರಿಸರ ಕಾಳಜಿ ವಿಚಾರದಲ್ಲಿ ಎಂಆರ್‌ಪಿಎಲ್‌ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.