ಕಿಷ್ಕಿಂದಾದಲ್ಲಿ ಮೊದಲ ಯೋಗ ವಿವಿ!


Team Udayavani, Sep 9, 2019, 3:08 AM IST

kishkinda

ಗಂಗಾವತಿ: ಭಾರತದ ಪುರಾತನ ಯೋಗವನ್ನು ಇನ್ನಷ್ಟು ಜನಪ್ರಿಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ತಾಲೂಕಿನ ಆನೆಗೊಂದಿ ಹತ್ತಿರದ ಏಳುಗುಡ್ಡದ ಪ್ರದೇಶದಲ್ಲಿ ದೇಶದ ಪ್ರಥಮ ಯೋಗ ವಿಶ್ವವಿದ್ಯಾಲಯ ಶೀಘ್ರವೇ ತಲೆ ಎತ್ತಲಿದೆ.

ಗಂಗಾವತಿ ತಾಲೂಕಿನ ಆನೆಗೊಂದಿ ಹನುಮನಹಳ್ಳಿ ಸಾಣಾಪೂರ ಜಂಗ್ಲಿ ರಂಗಾಪೂರ ಪ್ರದೇಶದಲ್ಲಿರುವ ಏಳು ಗುಡ್ಡದ ಪ್ರದೇಶದಲ್ಲಿ ಕಂದಾಯ ಇಲಾಖೆಯ ಸುಮಾರು 100 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ಪಡೆದು ಹಂಪಿ ಕನ್ನಡ ವಿವಿ ಮಾದರಿಯಲ್ಲಿ ಪ್ರಕೃತಿ ದತ್ತವಾಗಿ ವಿವಿ ಕಟ್ಟಡ ವಿನ್ಯಾಸ ಮಾಡಲು ಯೋಜಿಸಲಾಗಿದೆ. ಸರ್ವೇ ನಂ.4ರಲ್ಲಿ ಕಂದಾಯ ಇಲಾಖೆ 340 ಎಕರೆ, ಅರಣ್ಯ ಇಲಾಖೆಯ 227 ಎಕರೆ ಭೂಮಿ ಲಭ್ಯವಿದ್ದು ತಹಶೀಲ್ದಾರ್‌ ಹಾಗೂ ತಾಲೂಕು ಅರಣ್ಯಾಧಿಕಾರಿಗಳು ವಿವಿಗೆ ಭೂಮಿ ಇರುವ ಕುರಿತು ಪ್ರಮಾಣ ಪತ್ರ ಸಲ್ಲಿಸಲಿದ್ದು, ವಿವಿಗೆ ಬೇಕಾಗುವ ವಾತಾವರಣ ಬಗ್ಗೆ ವಿವರವಾದ ಮಾಹಿತಿ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ.

ತುಂಗಭದ್ರಾ ನದಿ ಎಡದಂಡೆ ಕಾಲುವೆ, ಬೆಟ್ಟದ ಮಧ್ಯೆ ವಿಶಾಲವಾದ ಭೂಮಿ ಇರುವುದರಿಂದ ಮೊದಲ ಯೋಗ ವಿವಿ ಸ್ಥಾಪನೆಗೆ ಸೂಕ್ತ ಸ್ಥಳವಾಗಿದೆ. ಇಲ್ಲಿ ಯೋಗ ವಿವಿ ಸ್ಥಾಪನೆಯಾದರೆ ಹಂಪಿ, ಆನೆಗೊಂದಿ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರು ವಿವಿಗೆ ಭೇಟಿ ನೀಡಿ ಯೋಗ ಕುರಿತು ಮಾಹಿತಿ ಪಡೆಯುತ್ತಾರೆ ಎಂದು ಚಿಂತಿಸಲಾಗಿದೆ.

ಕಿಷ್ಕಿಂದಾದಲ್ಲೇ ಏಕೆ?: ಈಗಾಗಲೇ ಹಂಪಿ, ಆನೆಗೊಂದಿ, ವಿರೂಪಾಪೂರಗಡ್ಡಿ ಪ್ರದೇಶದಲ್ಲಿ ಹಲವು ಯೋಗ ನ್ಯಾಚುರೋಪಥಿ ಚಿಕಿತ್ಸಾ ಕೇಂದ್ರಗಳು ದಶಕಗಳಿಂದ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿಗೆ ಬರುವ ದೇಶ, ವಿದೇಶ ಪ್ರವಾಸಿಗರಿಗೆ ಯೋಗ ಹಾಗೂ ಇತರೆ ಚಿಕಿತ್ಸೆ ನೀಡುವ ಪದ್ಧತಿ ಜಾರಿಯಲ್ಲಿದ್ದು, ಇಲ್ಲಿ ಯೋಗ ವಿವಿ ಸ್ಥಾಪನೆಯಿಂದ ಸ್ಥಳೀಯರಿಗೆ ಹಲವು ಮಾಹಿತಿ ಲಭ್ಯವಾಗಲಿವೆ. ಏಳು ಗುಡ್ಡದ ಪ್ರದೇಶದಲ್ಲಿ ಹಲವಾರು ವನಸ್ಪತಿ ಗಿಡಮೂಲಿಕೆಗಳಿದ್ದು, ಆಯುರ್ವೇದ ಚಿಕಿತ್ಸೆ ನೀಡುವ ನೂರಾರು ಜನ ಪ್ರತಿವರ್ಷ ಇಲ್ಲಿಗೆ ಆಗಮಿಸಿ ಗಿಡಮೂಲಿಕೆ ಸಂಗ್ರಹಿಸುತ್ತಾರೆ. ವಿವಿ ಸ್ಥಾಪನೆಯಿಂದ ಇಲ್ಲಿರುವ ಗಿಡಮೂಲಿಕೆಗಳನ್ನು ಸಂರಕ್ಷಣೆ ಮಾಡಲು ಅನುಕೂಲವಾಗುತ್ತದೆ.

ಕಿಷ್ಕಿಂದಾ ಏಳುಗುಡ್ಡದ ಪ್ರದೇಶದ ಪ್ರಕೃತಿಯಲ್ಲಿ ಕೇಂದ್ರ ಯೋಗ ವಿವಿ ಸ್ಥಾಪಿಸುವ ಪ್ರಸ್ತಾಪ ಅತ್ಯುತ್ತಮವಾದದ್ದು. ಪ್ರಧಾನಿ ಮೋದಿ ಜೂ.21 ಯೋಗದಿನ ಘೋಷಣೆ ಮಾಡಿದ ನಂತರ ದೇಶ, ವಿದೇಶದವರು ಯೋಗ ಮಾಡಲು ಆರಂಭಿಸಿದ್ದು, ತರಬೇತಿದಾರರ ಅಗತ್ಯ ಹೆಚ್ಚಾಗಿದೆ. ಹೀಗಾಗಿ ಯೋಗ ವಿವಿ ಸ್ಥಾಪನೆ ಮಾಡಲಿ, ಪತಂಜಲಿ ಯೋಗ ಸಮಿತಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಸಲಹೆ- ಸೂಚನೆ-ಮಾರ್ಗದರ್ಶನ ಮಾಡಲಿದೆ.
-ಭವರಲಾಲ್‌ ಆರ್ಯ, ರಾಜ್ಯ ಪ್ರಭಾರಿ, ಪತಂಜಲಿ ಯೋಗ ಸಮಿತಿ

ವಿವಿ ಸ್ಥಾಪನೆ ಕುರಿತು ಕೇಂದ್ರ ಸಚಿವ ಶ್ರೀಪಾದ ಯಸ್ಸೋ ನಾಯಕ್‌ ತಮ್ಮ ಜತೆ ಚರ್ಚೆ ನಡೆಸಿದ್ದು, ಸುಮಾರು 100 ಎಕರೆ ಪ್ರದೇಶದ ಭೂಮಿ ಸರ್ಕಾರ ಕಲ್ಪಿಸಿದರೆ ವಿವಿ ಸ್ಥಾಪನೆಗೆ ಹಣಕಾಸು ನೆರವು ನೀಡಲಾಗುತ್ತದೆ. ಅಗತ್ಯ ದಾಖಲೆಗಳ ಕಡತ ವನ್ನು ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ವರದಿ ನೀಡುವಂತೆ ತಹಶೀಲ್ದಾರ್‌ ಹಾಗೂ ಅರಣ್ಯ ಅಧಿ ಕಾರಿಗಳಿಗೆ ಸೂಚಿಸಲಾಗಿದೆ.
-ಕರಡಿ ಸಂಗಣ್ಣ, ಸಂಸದ

* ಕೆ.ನಿಂಗಜ್ಜ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.