ಮೀನು ಫ್ಯಾಕ್ಟರಿಯಲ್ಲಿ ದುರಂತ : ಮೂವರ ಸಾವು, ಇಬ್ಬರು ಗಂಭೀರ
Team Udayavani, Apr 17, 2022, 11:43 PM IST
ಬಜಪೆ: ಬಜಪೆಯಲ್ಲಿರುವ ವಿಶೇಷ ಆರ್ಥಿಕ ವಲಯದಲ್ಲಿರುವ ಮೀನು ಫ್ಯಾಕ್ಟರಿಯೊಂದರಲ್ಲಿ ರವಿವಾರ ಸಂಜೆ ದುರಂತ ಸಂಭವಿಸಿದ್ದು ಮೂವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂಜೆ 7 ಗಂಟೆಗೆ ನಡೆದಿದೆ.
ವಿವಿಧೆಡೆಗಳಿಂದ ಬರುವ ಮೀನುಗಳನ್ನು ಶುದ್ಧೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದ ಪಶ್ಚಿಮ ಬಂಗಾಲದ ಮೂವರು ಕಾರ್ಮಿಕರು ಮೃತಪಟ್ಟರೆ ರಾಜ್ಯದ ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಒಟ್ಟು ಎಂಟು ಮಂದಿಯಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ಮೃತಪಟ್ಟ ಕಾರ್ಮಿಕರನ್ನು ನಿಜಾಮುದ್ದಿನ್ (19), ಉಮ್ಮರ್ ಫಾರೂಕ್ ಮತ್ತು ಸಮೀವುಲ್ಲಾ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ಶರಪ ತಲಿ, ಮೀರಾದುಲ್ಲಾ ಇಸ್ಲಾಂ ಎಂದು ಗುರುತಿಸಲಾಗಿದೆ. ಹಸನ್ ಅಲಿ, ಮೊಹಮ್ಮದ್ ಕರಿಮುಲ್ಲಾ ಮತ್ತು ಅಭಿದುಲಾ ಮಲಿಕ್ ಅಪಾಯದಿಂದ ಪಾರಾದ ಕಾರ್ಮಿಕರಾಗಿದ್ದಾರೆ.
ಎಂದಿನಂತೆ ಮೀನು ಶುದ್ಧೀಕರಣಗೊಳಿಸುವ ಟ್ಯಾಂಕಿಗೆ ಇಳಿದ 8 ಮಂದಿ ಕಾರ್ಮಿಕರು ಸ್ವತ್ಛಗೊಳಿಸಿದ ಮೀನನ್ನು ತೆಗೆಯುವ ಸಂದರ್ಭ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪಣಂಬೂರು ಮತ್ತು ಬಜಪೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೀನು ಸಂಸ್ಕರಣ ಫ್ಯಾಕ್ಟರಿಯನ್ನು ಇದೀಗ ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ