Malpe ಬಲೆ ಎಳೆಯುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Team Udayavani, Aug 14, 2023, 8:00 PM IST
ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಮೀನುಗಾರರೋರ್ವರು ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಮಟ ತಾಲೂಕಿನ ಹೊಸಕೇರಿಯ ಸುಬ್ರಹ್ಮಣ್ಯ ಜಟ್ಟಿ ಅಂಬಿಗ (37) ಮೃತಪಟ್ಟಿದ್ದು, ಕಳೆದ 10 ವರ್ಷದಿಂದ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಬಾಲಕೃಷ್ಣ ಎಂಬವರ ಶ್ರೀ ಶಿವಪಾವನಿ ಬೋಟಿನಲ್ಲಿ ದುಡಿಯುತ್ತಿದ್ದ ಅವರು ಆ. 11ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು.
ಆ. 13ರಂದು ಮಧ್ಯಾಹ್ನ ಸಮುದ್ರದಲ್ಲಿ ಬಲೆ ಎಳೆಯುತ್ತಿರುವಾಗ ಅಲೆಯ ಅಬ್ಬರಕ್ಕೆ ಸುಬ್ರಹ್ಮಣ್ಯ ಅವರು ಆಯತಪ್ಪಿ ನೀರಿಗೆ ಬಿದ್ದು ಮುಳುಗಡೆಗೊಂಡರು.
ಸುಮಾರು 4 ಗಂಟೆಯ ವೇಳೆಗೆ ಅವರ ಮೃತದೇಹವು ಪತ್ತೆಯಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ