ಮೀನುಗಾರಿಕೆಯ ಪುನಶ್ಚೇತನಕ್ಕೆ ಬೇಕು ಭರಪೂರ ನೆರವು


Team Udayavani, Jul 11, 2020, 4:57 PM IST

ಮೀನುಗಾರಿಕೆಯ ಪುನಶ್ಚೇತನಕ್ಕೆ ಬೇಕು ಭರಪೂರ ನೆರವು

ಸ್ಥಳೀಯ ಆರ್ಥಿಕತೆಗೂ ಹೆಚ್ಚಿನ ಬೆಂಬಲ ನೀಡುವ ಕ್ಷೇತ್ರ ಮೀನುಗಾರಿಕೆ. ಆದರೆ ಕಳೆದ ಮೀನುಗಾರಿಕೆ ಋತುವಿನ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದ ಉತ್ಪಾದನೆಯಲ್ಲಿ ಇಳಿಕೆ ಕಂಡಿದ್ದರೆ ಆ ಬಳಿಕ ಕೊರೊನಾ ಬಲುದೊಡ್ಡ ಹೊಡೆತ ನೀಡಿದೆ. ನೇರ ಮತ್ತು ಪರೋಕ್ಷವಾಗಿ ಸುಮಾರು 65 ಸಾವಿರ ಮಂದಿಯ ಬದುಕು ಈ ಕ್ಷೇತ್ರವನ್ನು ಅವಲಂಬಿಸಿದೆ. ಪ್ರಧಾನಿಯವರು ಕೊರೊನಾ ಪ್ಯಾಕೇಜ್‌ ಘೋಷಿಸಿದ್ದರೂ ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿ ಈ ಕ್ಷೇತ್ರ ಹಾಗೂ ಮೀನುಗಾರ ಸಮುದಾಯವಿದೆ. ರಾಜ್ಯ ಸರಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇದರತ್ತ ಮುತುವರ್ಜಿ ತೋರಬೇಕೆಂಬುದು ಕ್ಷೇತ್ರದ ಆಗ್ರಹ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದ್ರ ಮೀನುಗಾರಿಕೆ ಪ್ರಮುಖ ಔದ್ಯೋಗಿಕ ಕ್ಷೇತ್ರ. ಸುಮಾರು 65 ಸಾವಿರ ಮಂದಿಗೆ ನೇರ ಮತ್ತು ಪರೋಕ್ಷವಾಗಿ ಉದ್ಯೋಗ ಕಲ್ಪಿಸಿದೆ. ಜಿಲ್ಲೆ ಮತ್ತು ರಾಜ್ಯದ ಆರ್ಥಿಕತೆಗೆ ಗಣನೀಯ ಕೊಡುಗೆಯನ್ನೂ ನೀಡುತ್ತಿದೆ. ಕಳೆದ ಬಾರಿ ಕೊರೊನಾ ಈ ಕ್ಷೇತ್ರವನ್ನೂ ಬಿಟ್ಟಿಲ್ಲ. ಮಾ.26ರಿಂದ ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಈ ಋತುವಿನಲ್ಲಿ ದೋಣಿಗಳು ದಡದಲ್ಲೇ ಉಳಿದದ್ದು ಹೆಚ್ಚು.

ಪ್ರತೀ ವರ್ಷ ಜೂ.1ರಿಂದ 60 ದಿನ ಮೀನುಗಾರಿಕೆಗೆ ನಿಷೇಧ ಇರುತ್ತದೆ. ಆದರೆ ಲಾಕ್‌ಡೌನ್‌ ಇದ್ದ ಹಿನ್ನೆಲೆಯಲ್ಲಿ ಸರಕಾರ ಜೂ.15ರ ವರೆಗೆ ಮೀನುಗಾರಿಕೆಗೆ ಅವಕಾಶ ನೀಡಿತ್ತು. ಆದರೆ ಕೊರೊನಾ ಮತ್ತು ಹವಾಮಾನ ವೈಪರೀತ್ಯದಿಂದ ಹೆಚ್ಚಿನ ಅನುಕೂಲವಾಗಿಲ್ಲ.

ಆ.1ರಿಂದ ಮೀನುಗಾರಿಕೆ ಮತ್ತೆ ಆರಂಭಗೊಳ್ಳಲಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಆಗಲೂ ಮೀನುಗಾರಿಕೆ ಆರಂಭಗೊಳ್ಳುವುದು ಅನುಮಾನ. ಮೀನುಗಾರಿಕೆಯಲ್ಲಿ ದುಡಿಯುವ ಕಾರ್ಮಿಕರಲ್ಲಿ ಶೇ.75 ಮಂದಿ ಹೊರರಾಜ್ಯಗಳವರು. ಐಸ್‌ಪ್ಲಾಂಟ್‌ ಮತ್ತು ಫಿಶ್‌ಮೀಲ್‌ಗ‌ಳಲ್ಲೂ ಇವರೇ ಹೆಚ್ಚು. ಇದರಲ್ಲಿ ಬಹುತೇಕ ಮಂದಿ ಊರಿಗೆ ತೆರಳಿದ್ದಾರೆ. ಅವರು ಮರಳಿ ಬರಬೇಕು, ಬಳಿಕ 14 ದಿನ ಕ್ವಾರೆಂಟೈನ್‌ನಲ್ಲಿ ಇರಬೇಕು. ಇದರಿಂದಾಗಿ ಕಾರ್ಮಿಕರ ಕೊರತೆ ಎದುರಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿದೆ. ಮೀನುಗಾರಿಕೆ ಆರಂಭಗೊಂಡ ಬಳಿಕ ಪ್ರತೀ ದಿನ ದಕ್ಕೆಯಲ್ಲಿ ಬೆಳಗಿನ ಅವಧಿಯಲ್ಲಿ ಮೀನು ಕಾರ್ಮಿಕರು, ವ್ಯಾಪಾರಿಗಳು, ಗ್ರಾಹಕರ ಸಹಿತ ಭಾರೀ ಜನದಟ್ಟಣೆ ಇರುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸವಾಲು.

ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದ ಒಟ್ಟು ಕರಾವಳಿಯಲ್ಲೇ ಕಳೆದ ಬಾರಿಯ ಮೀನುಗಾರಿಕೆ ಋತು ಅಡೆತಡೆಗಳೊಂದಿಗೆ ಆರಂಭಗೊಂಡಿತ್ತು. ಆರಂಭದಲ್ಲೇ ಎದುರಾದ ಚಂಡಮಾರುತ, ಹವಾಮಾನ ವೈಪರೀತ್ಯ ಆಗಾಗ ಮರುಕಳಿಸಿ ಮೀನುಗಾರಿಕೆಯನ್ನು ಬಾಧಿಸಿತ್ತು. ಡಿಸೆಂಬರ್‌ನಿಂದ ಜನವರಿವರೆಗೆ ಚಳಿಗಾಲದ ಅವಧಿಯಲ್ಲಿ ಮೀನುಗಳ ಲಭ್ಯತೆ ಕಡಿಮೆ ಇರುತ್ತದೆ. ಜನವರಿಯ ಬಳಿಕ ಮೇ ಅಂತ್ಯದವರೆಗೆ ಅನುಕೂಲಕರವಾದ ಅವಧಿ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ಋತುವಿನಲ್ಲಿ ಮೀನು ಲಭ್ಯತೆ ಪ್ರಮಾಣ ಜಾಸ್ತಿ ಇತ್ತು. ಆದರೆ ಬೋಟ್‌ಗಳ ಸಂಖ್ಯೆ ಹೆಚ್ಚಿ, ಹಿಡಿದ ಮೀನು ಹಂಚಿಹೋದ ಕಾರಣ ಪರಿಸ್ಥಿತಿ ಉತ್ತಮವಾಗಿರಲಿಲ್ಲ.

ವಸ್ತುಸ್ಥಿತಿ : ಮಂಗಳೂರು ಭಾಗದಲ್ಲಿ ಟ್ರಾಲ್‌ ಬೋಟ್‌, ಪರ್ಸಿನ್‌, ನಾಡದೋಣಿಗಳ ಸಹಿತ ಸುಮಾರು 2,800 ಬೋಟ್‌ಗಳು ಮೀನುಗಾರಿಕೆಯಲ್ಲಿ ನಿರತವಾಗಿವೆ. ಪ್ರತ್ಯಕ್ಷವಾಗಿ ಸುಮಾರು 25 ಸಾವಿರ ಮಂದಿ ಮತ್ತು ಇದಕ್ಕೆ ಹೊಂದಿಕೊಂಡಿರುವ ಮೀನು ಮಾರಾಟ, ಸಾಗಾಟ, ಐಸ್‌ಪ್ಲಾಂಟ್‌, ರಫ್ತು, ಫಿಶ್‌ಮೀಲ್‌ ಮತ್ತಿತರ ಕ್ಷೇತ್ರಗಳಲ್ಲಿ ಸುಮಾರು 40 ಸಾವಿರ ಮಂದಿ ಸೇರಿದಂತೆ ಸುಮಾರು 65 ಸಾವಿರ ಮಂದಿ ದುಡಿಯುತ್ತಿದ್ದಾರೆ. ಮೀನುಗಾರಿಕೆ ಋತು ಆರಂಭದಲ್ಲಿ ಒಂದು ಟ್ರಾಲ್‌ಬೋಟನ್ನು ಮೀನುಗಾರಿಕೆಗೆ ಇಳಿಸಲು ಡೀಸೆಲ್‌, ನಿರ್ವಹಣೆ ಮತ್ತಿತರ ವೆಚ್ಚ ಸೇರಿ ಕನಿಷ್ಠ 8 ಲಕ್ಷ ರೂ. ಬೇಕು. ಇದನ್ನು ಬ್ಯಾಂಕ್‌ಗಳು, ಮೀನುಗಾರರ ಸಹಕಾರಿ ಸಂಘಗಳಿಂದ ಸಾಲವಾಗಿ ಪಡೆದು ಭರಿಸಲಾಗುತ್ತದೆ. ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಎರಡು ತಿಂಗಳ ನಿರ್ವಹಣೆಗೆ ಕನಿಷ್ಠ 30 ಸಾವಿರ ರೂ. ಬೇಕು. ಸಾಕಷ್ಟು ಪ್ರಮಾಣದಲ್ಲಿ ಮೀನು ಲಭಿಸಿದರೆ ಈ ವೆಚ್ಚಗಳನ್ನು ನಿಭಾಯಿಸಿ ಒಂದಷ್ಟು ಆದಾಯ ಸಿಗಬಹುದು. ಸಾಕಷ್ಟು ಪ್ರಮಾಣದಲ್ಲಿ ಮೀನು ಲಭಿಸದಿದ್ದರೆ ನಷ್ಟ ಖಚಿತ. ಕಳೆದ ಋತುವಿನ ಒಟ್ಟು 8 ತಿಂಗಳುಗಳಲ್ಲಿ ಆರಂಭದ ಎರಡು ತಿಂಗಳು ಹವಾಮಾನ ವೈಪರೀತ್ಯ, ಕರ್ಫ್ಯೂ, ಬಂದ್‌ನಿಂದಾಗಿ ಮೀನುಗಾರಿಕೆ ಸ್ಥಗಿತಗೊಂಡಿದ್ದರೆ, ಕೊನೆಯ ಅವಧಿಯ 2 ತಿಂಗಳು ಕೊರೊನಾದಿಂದ ಸ್ಥಗಿತಗೊಂಡಿತ್ತು. ಒಟ್ಟು 4 ತಿಂಗಳ ಮೀನುಗಾರಿಕೆ ಸ್ಥಾಗಿತ್ಯದಿಂದಾಗಿ ಈ ಕ್ಷೇತ್ರ ತೀವ್ರ ಆರ್ಥಿಕ ಹಿನ್ನಡೆ ಅನುಭವಿಸಿದೆ.

ಪ್ಯಾಕೇಜ್‌ನತ್ತ ನಿರೀಕ್ಷೆ
ಸಂಕಷ್ಟದಲ್ಲಿರುವ ಮೀನುಗಾರಿಕೆ ಕ್ಷೇತ್ರಕ್ಕೆ ಕೆಲವು ಚೇತೋಹಾರಿ ಕ್ರಮಗಳು ಅವಶ್ಯವಿದೆ. ಇಲ್ಲದಿದ್ದರೆ ಮುಂದಿನ ಋತುವಿನಲ್ಲಿ ಕೇವಲ ಶೇ.30ರಷ್ಟು ಬೋಟ್‌ಗಳು ಮಾತ್ರ ಮೀನುಗಾರಿಕೆಗೆ ಇಳಿಯಬಹುದು ಎಂಬುದು ಮೀನುಗಾರರ ಅಭಿಪ್ರಾಯ.
ಕೊರೊನಾದಿಂದ ಹಿನ್ನಡೆ ಕಂಡಿರುವ ಆರ್ಥಿಕ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಮೀನುಗಾರಿಕೆಗೆ ಕೆಲವು ಉತ್ತೇಜನಕಾರಿ ಕ್ರಮಗಳಿವೆ. ಸದ್ಯದಲ್ಲೇ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಜಾರಿ ಮಾಡಿ, ಇದರಡಿ ಸಮುದ್ರ ಮತ್ತು ಒಳನಾಡು ಮೀನುಗಾರಿಕೆಗೆ 11 ಸಾವಿರ ಕೋ.ರೂ. ಹಾಗೂ ಮೀನುಗಾರಿಕಾ ಕೇಂದ್ರಗಳು, ಮಾರುಕಟ್ಟೆ ಮತ್ತು ಸಂಸ್ಕರಣ ಸರಪಳಿಗೆ ಉತ್ತೇಜನ ಮುಂತಾದವುಗಳಿಗೆ 9 ಸಾವಿರ ಕೋ.ರೂ. ಸೇರಿದಂತೆ 20 ಸಾವಿರ ಕೋ.ರೂ. ನೀಡುವುದಾಗಿ ತಿಳಿಸಲಾಗಿದೆ. ಮೀನುಗಾರಿಕೆ ದೋಣಿಗಳಿಗೆ ವಿಮೆ, ಮೀನು ರಫ¤ನ್ನು 1 ಲಕ್ಷ ಕೋ.ರೂ.ಗಳಿಗೇರಿಸುವುದು, ಮೀನು ಉತ್ಪಾದನೆ ಹೆಚ್ಚಳ ಸಹಿತ ಕೆಲವು ಉತ್ತೇಜನಗಳನ್ನು ಪ್ರಕಟಿಸಲಾಗಿದೆ. ಇವು ಸಮರ್ಪಕವಾಗಿ ಜಾರಿಯಾಗಿ ಮೀನುಗಾರರಿಗೆ ಪ್ರಯೋಜನ ಸಿಗಬೇಕಿದೆ ಎಂಬುದು ಮೀನುಗಾರ ಸಮುದಾಯದ ಆಗ್ರಹ.

ಸರಕಾರದಿಂದ ಏನನ್ನು ನಿರೀಕ್ಷಿಸುತ್ತಿದ್ದೇವೆ?
ಯಾಂತ್ರೀಕೃತ ಮೀನುಗಾರಿಕೆ ಬೋಟ್‌ಗಳಿಗೆ ಸರಕಾರದಿಂದ ಬಾಕಿ ಇರುವ ಡೀಸೆಲ್‌ ಸಹಾಯಧನದಲ್ಲಿ ಸ್ವಲ್ಪ ಭಾಗವನ್ನು ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನೂ ಕೂಡಲೇ ಬಿಡುಗಡೆ ಮಾಡಬೇಕು. ಪ್ರಸ್ತುತ ಕೊರೊನಾದಿಂದಾಗಿ ಮೀನುಗಾರಿಕೆ ಸ್ಥಗಿತಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಮೀನುಗಾರರಿಗೆ ಚೇತರಿಸಿಕೊಳ್ಳಲು ಇದು ನೆರವಾಗುತ್ತದೆ.
ಮೀನುಗಾರರು ಈಗಾಗಲೇ ಬ್ಯಾಂಕ್‌, ಸಹಕಾರಿ ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಮರುಪಾವತಿಸಲಾಗದೆ ಸಾಲದ ಹೊರೆಯಲ್ಲಿದ್ದಾರೆ. ಆದುದರಿಂದ ಸಾಲದ ಮೇಲಣ ಬಡ್ಡಿಯನ್ನು ಸರಕಾರ ಮನ್ನಾ ಮಾಡಬೇಕು. ಬ್ಯಾಂಕ್‌ಗಳು ಅನುತ್ಪಾದಕ ಆಸ್ತಿಗಳೆಂದು ಪರಿಗಣಿಸುವುದನ್ನು ಕನಿಷ್ಠ ಆರು ತಿಂಗಳುಗಳವರೆಗಾದರೂ ಮುಂದೂಡಬೇಕು. ಸಾಲ ಮರುಪಾವತಿ ಅವಧಿ ವಿಸ್ತರಿಸಬೇಕು.

ನಾಡದೋಣಿಗಳ ಮಾಲಕರು ಮಾತ್ರ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸೌಲಭ್ಯಕ್ಕೆ ಒಳಪಡುತ್ತಾರೆ. ಒಂದು ಬೋಟ್‌ನಲ್ಲಿ ಕನಿಷ್ಠ 4ರಿಂದ 5 ಮಂದಿ ದುಡಿಯುತ್ತಿದ್ದು, ಈ ಎಲ್ಲರಿಗೂ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸೌಲಭ್ಯ ವಿಸ್ತರಿಸಬೇಕು.

ಸರಕಾರ ಕೆಲವು ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರಿಗೆ, ವೃತ್ತಿದಾರರಿಗೆ ನೆರವು ಘೋಷಿಸಿದೆ. ಇದೇ ರೀತಿ ಮೀನುಗಾರಿಕೆಯಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಠ 5 ಸಾವಿರ ರೂ. ನೆರವು ಘೋಷಿಸಿದರೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತದೆ.
ಮೀನುಗಾರಿಕೆ ಬೋಟ್‌ಗಳಿಗೆ ಸಬ್ಸಿಡಿ ಡೀಸೆಲ್‌ ಪ್ರಮಾಣವನ್ನು ಪ್ರಸ್ತುತ ಇರುವ 9 ಸಾವಿರ ಲೀ.ಗಳಿಂದ 15 ಸಾವಿರ ಲೀ.ಗಳಿಗೇರಿಸಬೇಕು ಮತ್ತು ಇದರ ಮೇಲಿನ ರಸ್ತೆ ತೆರಿಗೆಯನ್ನು ತೆಗೆದುಹಾಕಬೇಕು.

ಪುನಶ್ಚೇತನಕ್ಕೆ ನೆರವು ಅಗತ್ಯ
ಕಳೆದ ಮೀನುಗಾರಿಕೆ ಋತು ಆರಂಭದಿಂದಲೇ ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದು, ಈಗ ಕೊರೊನಾ ಇನ್ನಷ್ಟು ಹೊಡೆತ ನೀಡಿದೆ. ಪುನಶ್ಚೇತನದ ನಿಟ್ಟಿನಲ್ಲಿ ಹೆಚ್ಚಿನ ಪ್ರೋತ್ಸಾಹಕ ಕ್ರಮಗಳ ಅಗತ್ಯವಿದೆ. ಕೇಂದ್ರ ಸರಕಾರ ಈಗಾಗಲೇ ಕ್ಷೇತ್ರಕ್ಕೆ ಕೆಲವು ಸೌಲಭ್ಯಗಳನ್ನು ಘೋಷಿಸಿದ್ದು, ಇದು ಪೂರ್ಣ ಪ್ರಮಾಣದಲ್ಲಿ ಮೀನುಗಾರರಿಗೆ ತಲುಪುವಂತಾಗಬೇಕು. ಜತೆಗೆ ಸಾಲದ ಮರುಪಾವತಿ ಅವಧಿಯನ್ನು ಹೆಚ್ಚಿಸಬೇಕು.
– ನಿತಿನ್‌ ಕುಮಾರ್‌, ಮಂಗಳೂರು ಟ್ರಾಲ್‌ಬೋಟ್‌ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.