ಕುರಿಗಾಹಿಗೆ ಸೋಂಕು: ಕ್ವಾರಂಟೈನ್‌ಗೆ 40 ಕುರಿ


Team Udayavani, Jun 30, 2020, 6:47 AM IST

sheeper

ತುಮಕೂರು: ಜಿಲ್ಲೆಯಲ್ಲಿ ಕುರಿಗಾಹಿಗೆ ಕೋವಿಡ್‌ 19 ಸೋಂಕು ಹರಡಿರುವ ಹಿನ್ನೆಲೆ ಆತ ಕಾಯುತ್ತಿದ್ದ 40 ಕುರಿಗಳನ್ನೂ ಕ್ವಾರಂ ಟೈನ್‌ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಈ ಕುರಿಗಳನ್ನು ಸಮೂಹದಲ್ಲಿ ಮೇಯಲು  ಬಿಡದಂತೆ ಕ್ರಮ ವಹಿಸ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆ ಯಲ್ಲಿ ಮಾತನಾಡಿ, ಜಿಲ್ಲೆಯ  ಚಿಕ್ಕನಾಯಕನ ಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ವ್ಯಕ್ತಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ ಎಂದರು.

ಕುರಿ ಗಂಟಲು ದ್ರವ ಪರೀಕ್ಷೆ: ಈತ ಮೇಯಿ ಸುತ್ತಿದ್ದ 40 ಕುರಿಗಳನ್ನು ಪ್ರತ್ಯೇಕವಾಗಿರಿಸಲಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುರಿಗಾಹಿಗೆ ಕೋವಿಡ್‌ 19 ಸೋಂಕು ಹಿನ್ನೆಲೆ ಕುರಿಗಳನ್ನೂ ಕ್ವಾರಂಟೈನ್‌ ಮಾಡಲು  ಜಿಲ್ಲಾಡಳಿತ ನಿರ್ಧರಿಸಿದೆ. ಈಗ ಕೋವಿಡ್‌ 19 ಯಾವರೀತಿ ಬರುತ್ತಿದೆ ಎನ್ನುವುದು ತಿಳಿಯುತ್ತಿಲ್ಲ.

ಕೋವಿಡ್‌ 19 ವೈರಸ್‌ ವಿಭಿನ್ನ ಸ್ವರೂಪದಲ್ಲಿ ಇರುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಕುರಿಗಳ ಗಂಟಲು ದ್ರವ ಸಂಗ್ರಹಿಸಿ  ಭೂಪಾಲ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸುವಂತೆ ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಅಧಿಕಾರಿಗಳಿಗೆ ಸೂಚನೆ: ನಾವು ಕೇಳಿರು ವಂತೆ ಇಲ್ಲಿಯವರೆಗೂ ಕೋವಿಡ್‌ 19 ಕುರಿಗಳ ಮೂಲಕ ಹರಡಿದೆ ಎಂಬುದಕ್ಕೆ ಸಾಕ್ಷ್ಯವಿಲ್ಲ. ಆದರೂ ಕೋವಿಡ್‌ 19 ವಿಭಿನ್ನ ಸ್ವರೂಪದಲ್ಲಿರು ವುದರಿಂದ ಕುರಿಗಳ ದ್ರವವನ್ನು ತೆಗೆದು  ಪರೀಕ್ಷಿಸಲು ಸೂಚಿಸಲಾಗಿದೆ. ವರದಿ ಬರುವ ವರೆಗೆ ಕುರಿಗಳನ್ನು ಗುಂಪಿನಲ್ಲಿ ಮೇಯಲು ಬಿಡಬಾರದು, ಕುರಿಗಳ ಗಂಟಲು ದ್ರವದ ಮಾದರಿ ವರದಿ ಬಂದ ಮೇಲೆ ಅದರ ವರದಿ ನೋಡಿ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ  ಸೂಚಿಸಿದರು.

ಪ್ರತಿಯೊಬ್ಬರನ್ನು ಪರೀಕ್ಷಿಸಿ: ತುಮಕೂರು ಜಿಲ್ಲೆಯಲ್ಲಿ ಕೋವಿಡ್‌-19ರ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಕಂಟೈನ್‌ಮೆಂಟ್‌ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾ ಸಣೆಗೆ ಒಳಪಡಿಸಿ ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಪ್ರಯೋಗಾಲಯವಿರು  ವುದರಿಂದ ಹೆಚ್ಚಿನ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.

ಮೆಡಿಕಲ್‌ಗ‌ಳ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ಫೀವರ್‌ ಕ್ಲಿನಿಕ್‌ಗಳನ್ನು ಜಾಸ್ತಿ ಮಾಡಿ, μàವರ್‌ ಕ್ಲಿನಿಕ್‌ಗೆ ಬಂದ ಪ್ರತಿಯೊಬ್ಬರಿಗೂ ಚೆಕ್‌ ಮಾಡಿ ಎಂದ ಅವರು, ಜಿಲ್ಲೆಯಲ್ಲಿರುವ ನಕಲಿ ವೈದ್ಯರು ಹಾಗೂ ಚೀಟಿಯಿಲ್ಲದೆ ಜ್ವರ, ನೆಗಡಿ, ಶೀತ,  ಉಸಿರಾಟ ತೊಂದರೆಗೆ ಔಷಧಿಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಯನ್ನು ಮತ್ತೂಮ್ಮೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಅವರಿಗೆ  ಸೂಚನೆ ನೀಡಿದರು.

ಸೋಂಕಿತರ ಸ್ಥಳಾಂತರ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖ ಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ. ಈ ಪೈಕಿ 8 ಮಂದಿಗೆ ಮಾತ್ರ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಿಸಲು ಅವಕಾಶ ವಿದ್ದು, ತುಮಕೂರು ನಗರದ ಹೊರ ವಲಯದಲ್ಲಿರುವ ಟ್ರಕ್‌ಟರ್ಮಿಲ್‌ ಸಮೀ ಪದ ಕಟ್ಟಡಕ್ಕೆ ಎರಡೂ¾ರು ದಿನಗಳಲ್ಲಿ  ಸ್ಥಳಾಂತರಿಸಲು ವ್ಯವಸ್ಥೆ  ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಸಭೆಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.