“ನೆರೆ ನಿಂದನೆ’ ಬದಲಿಗೆ ಬೇಕಿದೆ ನೀರು ಹಿಡಿದಿಡುವ ಮನಸ್ಥಿತಿ

ಜಲ ತಜ್ಞರ ಒಡಲಾಳದ ಮಾತು

Team Udayavani, Aug 22, 2019, 3:08 AM IST

nere-nindane

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮತ್ತು ನೆರೆ ಹಾವಳಿ ಇವೆರಡೂ ಈಗ ತಗ್ಗಿವೆ. ಆದರೆ, ಕೆಲವು ಪ್ರದೇಶಗಳಲ್ಲಿ ನೀರಿನ ಮಟ್ಟ ಮಾತ್ರ ಹಾಗೇ ಉಳಿದಿದೆ. ಸರ್ಕಾರ ಮನಸ್ಸು ಮಾಡಿದ್ದರೆ, ಇದನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಭವಿಷ್ಯದ ಬರವನ್ನು ನೀಗಿಸಲು ಅವಕಾಶ ಇದೆ. ವಿಚಿತ್ರವೆಂದರೆ ಈ ನಿಟ್ಟಿನಲ್ಲಿ ಯೋಚನೆ ಕೂಡ ಮಾಡಲಿಲ್ಲ!

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರವೇ ರಾಜ್ಯದ ಏಳು ಜಿಲ್ಲೆಗಳಲ್ಲಿ ಏಳು ದಿನಗಳಲ್ಲಿ 516 ಮಿ.ಮೀ.ಮಳೆ ಬಿದ್ದಿದೆ. ಇದರ ಜತೆಗೆ ಮಹಾರಾಷ್ಟ್ರದಿಂದಲೂ ಹತ್ತಾರು ಟಿಎಂಸಿ ನೀರು ಏಕಕಾಲದಲ್ಲಿ ರಾಜ್ಯಕ್ಕೆ ಹರಿದಿದೆ. ಪರಿಣಾಮ ಬರದ ನಾಡು ಬಹುತೇಕ ಜಲಾವೃತಗೊಂಡಿದೆ. ಆದರೆ, ಈಗಲೂ ಹಲವಾರು ಕೆರೆ-ಕುಂಟೆಗಳು, ಕೊಳವೆಬಾವಿಗಳು ಬರಿದಾಗಿವೆ. ಈ ಹಿನ್ನೆಲೆ ಯಲ್ಲಿ ಒಂದೆಡೆ ನೆರೆ ಪರಿಹಾರ ಕ್ರಮಗಳು ಸಮರೋಪಾದಿಯಲ್ಲಿ ನಡೆಯುತ್ತಿದ್ದರೆ, ಇಷ್ಟೇ ತೀವ್ರ ಗತಿಯಲ್ಲಿ ನೀರನ್ನು ಹಿಡಿದಿಡುವ ಕಾರ್ಯವೂ ಏಕಕಾಲದಲ್ಲಿ ಆಗಬೇಕಿತ್ತು. ಇದು ಆಗಲೇ ಇಲ್ಲ ಎಂಬ ಬೇಸರದ ಮಾತುಗಳು ತಜ್ಞರಿಂದ ಕೇಳಿ ಬರುತ್ತಿವೆ.

“ನಮ್ಮಲ್ಲಿ ನೆರೆಯನ್ನು ಬರೀ ನಕಾರಾತ್ಮಕ ದೃಷ್ಟಿಕೋನದಿಂದ ದೂಷಿಸುವ ಕೆಲಸ ಈಗ ಆಗುತ್ತಿದೆ. ಅದಕ್ಕಿಂತ ಮುಖ್ಯವಾಗಿ ಈ ಪ್ರಮಾಣದಲ್ಲಿ ಹರಿದ ನೀರನ್ನು ಸಾಂಪ್ರದಾಯಿಕವಾಗಿ ಸಂಗ್ರಹಿಸಿಡುವತ್ತ ಗಮನ ಹರಿಸುವ ತುರ್ತು ಅವಶ್ಯಕತೆಯಿದೆ. ಇದು ಸಾಧ್ಯವಾದರೆ, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಆ ಭಾಗದ ನೀರಿನ ಬವಣೆ ನೀಗಿಸಬಹುದು. ಜತೆಗೆ, ಕೃಷಿ ಚಟುವಟಿಕೆಗಳು, ಅಂತರ್ಜಲ ಮಟ್ಟದ ಏರಿಕೆಗೂ ಇದು ಸಹಕಾರಿ ಆಗಲಿದೆ’ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ನೀರು ನಿಜವಾದ ರಿಸರ್ವ್‌ ಬ್ಯಾಂಕ್‌; ರಾಜೇಂದ್ರ ಸಿಂಗ್‌: “ನೆರೆಯನ್ನು ನಾವು ಸಕಾರಾತ್ಮಕ ದೃಷ್ಟಿಕೋನದಿಂದ ನೋಡುವ ಅವಶ್ಯಕತೆ ಇದೆ. ಉತ್ತರ ಕರ್ನಾಟಕದಲ್ಲಿ ಈ ಮೊದಲು ಮಳೆ ಕೊರತೆ ಇತ್ತು. ಈ ಬಾರಿ ಅಲ್ಲಿ ಒಳ್ಳೆಯ ಮಳೆ ಆಗಿದೆ. ಈಗ ಆ ನೀರು ವ್ಯರ್ಥವಾಗಿ ಹೋಗದಂತೆ ತಡೆಯುವ ಅವಶ್ಯಕತೆ ಇದೆ. ಅದನ್ನು ಅಂತರ್ಜಲ ಮರುಪೂರಣ ಆಗುವಂತೆ ಮಾಡಬೇಕು. ಇಲ್ಲವಾದರೆ, ನೀರು ವ್ಯರ್ಥವಾಗುವುದರ ಜತೆಗೆ ಮಣ್ಣಿನ ಸವಕಳಿಯೂ ಆಗುತ್ತದೆ. ಆಗ, ಫ‌ಲವತ್ತತೆ ಹೋಗುತ್ತದೆ. ಇದಕ್ಕಾಗಿ ಅಲ್ಲಲ್ಲಿ ಹಸಿರೀಕರಣ ಮಾಡಿ, ಹರಿವಿನ ವೇಗಕ್ಕೆ ಕೊಂಚ ತಡೆಯೊಡ್ಡಬೇಕು. ಚೆಕ್‌ ಡ್ಯಾಂಗಳನ್ನು ನಿರ್ಮಿಸಬೇಕು. ಭೂಮಿಯು ಗಟ್ಟಿಕಲ್ಲಿನಿಂದ ಕೂಡಿದ್ದರೆ, ರಬ್ಬರ್‌ ಡ್ಯಾಂಗಳನ್ನು ನಿರ್ಮಿಸಿ, ನೀರನ್ನು ತಡೆ ಹಿಡಿಯಬೇಕು. ಅದು ನಿಜವಾದ ಭಾರತೀಯ ರಿಸರ್ವ್‌ ಬ್ಯಾಂಕ್‌ ಆಗಲಿದೆ’ ಎಂದು ಭಾರತೀಯ ಜಲ ತಜ್ಞ, ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್‌ “ಉದಯವಾಣಿ’ಗೆ ತಿಳಿಸಿದರು.

150 ಟಿಎಂಸಿ ಸಂಗ್ರಹಿಸಬಹುದು: ಖಂಡಿತವಾಗಿಯೂ ವ್ಯರ್ಥವಾಗಿ ಹೋಗುವ ಈ ನೆರೆಯ ನೀರನ್ನು ಸಂಗ್ರಹಿಸಬಹುದು. ಆದರೆ, ಇದಕ್ಕೆ ಪೂರ್ವಯೋಜನೆ ಇರಬೇಕಾಗುತ್ತದೆ. ಕುಡಿಯುವ ನೀರು ಯೋಜನೆ ಸೇರಿ ಹಲವು ಕಾರ್ಯಕ್ರಮಗಳಡಿ ಕೆರೆಗಳ ಜೋಡಣೆ, ಹೆಚ್ಚುವರಿ ನೀರು ಬಂದಾಗ ಶೇಖರಿಸುವ ವ್ಯವಸ್ಥೆಯನ್ನು ಮೊದಲೇ ಮಾಡಬೇಕು. ಈಗ ಏಕಾಏಕಿ ಇದು ಕಷ್ಟ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ನಿರ್ದೇಶಕ ಡಾ.ಜಿ.ಎಸ್‌. ಶ್ರೀನಿವಾಸ ರೆಡ್ಡಿ ಅಭಿಪ್ರಾಯಪಡುತ್ತಾರೆ.

ಕಳೆದ ಹತ್ತು ದಿನಗಳಲ್ಲಿ ರಾಜ್ಯದಲ್ಲಿ ಸರಿ ಸುಮಾರು ಸಾವಿರ ಟಿಎಂಸಿ ನೀರು ಹರಿದಿದೆ. ಇನ್ನೊಂದೆಡೆ, ನಮ್ಮಲ್ಲಿ 35 ಸಾವಿರಕ್ಕೂ ಅಧಿಕ ಕೆರೆಗಳಿವೆ. ಅಬ್ಬಬ್ಟಾ ಎಂದರೆ, ಇವುಗಳನ್ನು ತುಂಬಿಸಲು 150 ಟಿಎಂಸಿ ನೀರು ಬೇಕಾಗುತ್ತದೆ. ಜಲಾಶಯಗಳಿಗೆ 400 ಟಿಎಂಸಿ ಹೋಗುತ್ತದೆ ಎಂದರೂ ಉಳಿದ ಸಾಕಷ್ಟು ನೀರನ್ನು ಹಿಡಿದಿಡಬಹುದಿತ್ತು. ಬಹುಶಃ ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಕೆಲಸ ಆಗುತ್ತಿದೆ ಎಂದು ಅವರು ಹೇಳುತ್ತಾರೆ.

ಇದೊಂದು ಒಳ್ಳೆಯ ಆಲೋಚನೆ. ವ್ಯವಸ್ಥಿತವಾಗಿ ಯೋಜನೆ ರೂಪಿಸಿದರೆ, ಖಂಡಿತವಾಗಿಯೂ ಬೇಸಿಗೆ ನೀಗಿಸುವ ಮಟ್ಟಿಗಾದರೂ ನೀರು ಸಂಗ್ರಹಿಸಬಹುದು. 30ರಿಂದ 31 ಸಾವಿರ ಸಣ್ಣ ಕೆರೆಗಳು (40 ಹೆಕ್ಟೇರ್‌ ಒಳಗಿರುವ) ಮತ್ತು 3,600 ಕೆರೆಗಳು (40ರಿಂದ 2 ಸಾವಿರ ಹೆಕ್ಟೇರ್‌) ರಾಜ್ಯದಲ್ಲಿವೆ. ಇವುಗಳಲ್ಲಿ ನೂರಕ್ಕೂ ಹೆಚ್ಚು ಟಿಎಂಸಿ ನೀರನ್ನು ಸಂಗ್ರಹಿಸಿಡಬಹುದು. ಬರಿದಾದ ಬಾವಿಗಳು, ಕೊಳವೆಬಾವಿಗಳ ಮರುಪೂರಣ, ಜಮೀನುಗಳಲ್ಲಿ ಸಾಂಪ್ರದಾಯಿಕ ನೀರಾವರಿ ವ್ಯವಸ್ಥೆ, ಗಟ್ಟಿಭೂಮಿ ಇರುವ ಕಡೆಗಳಲ್ಲಿ ಕೃತಕವಾಗಿ ಅಂತರ್ಜಲ ಮರುಪೂರಣ ಮತ್ತಿತರ ಕ್ರಮಗಳಿಂದ ನೀರನ್ನು ಹಿಡಿದಿಡಬಹುದು. ಆದರೆ, ಇದು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಇದಕ್ಕಾಗಿ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಎಂದು ಸಣ್ಣ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಅವಕಾಶಗಳು ಕಡಿಮೆ: ಕಡಿಮೆ ವಿಸ್ತೀರ್ಣವುಳ್ಳ ಪ್ರದೇಶದಲ್ಲಿ ಅತ್ಯಧಿಕ ಮಟ್ಟದಲ್ಲಿ ನೀರು ಏಕಕಾಲದಲ್ಲಿ ನುಗ್ಗಿದಾಗ, ಸಂಗ್ರಹಿಸುವ ಸಾಧ್ಯತೆಗಳು ವಿರಳ. ಅದರಲ್ಲೂ ಕರ್ನಾಟಕದಂತಹ ಭೌಗೋಳಿಕ ಪ್ರದೇಶದಲ್ಲಿ ಭೂಮಿಯ ಒಳಗೆ ನೀರು ಇಂಗುವಿಕೆ ಪ್ರಮಾಣ ಇನ್ನೂ ಕಡಿಮೆ ಇರುತ್ತದೆ. ದಿನಕ್ಕೆ 50ರಿಂದ 60 ಮಿ.ಮೀ.ನಷ್ಟು ನೀರು ಮಾತ್ರ ಭೂಮಿಯೊಳಗೆ ಇಳಿಯುತ್ತದೆ ಎಂದು “ಅಶೋಕ ಟ್ರಸ್ಟ್‌ ಫಾರ್‌ ರಿಸರ್ಚ್‌ ಇನ್‌ ಎಕಾಲಜಿ ಆ್ಯಂಡ್‌ ದಿ ಎನ್ವಿರಾನ್‌ಮೆಂಟ್‌’ ಪ್ರೊಫೆಸರ್‌ ಹಾಗೂ “ಸೆಂಟರ್‌ ಫಾರ್‌ ಎನ್ವಿರಾನ್‌ಮೆಂಟಲ್‌ ಆ್ಯಂಡ್‌ ಡೆವಲಪ್‌ಮೆಂಟ್‌’ ಫೆಲೊ ಡಾ.ಶ್ರೀನಿವಾಸ ಬಡಿಗೇರ ಅಭಿಪ್ರಾಯಪಡುತ್ತಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.