ಕಳೆದ ವರ್ಷದ ಪರಿಹಾರವೇ ಬಂದಿಲ್ಲ, ಮತ್ತೆ ಅತಿವೃಷ್ಟಿ ಹಾನಿ


Team Udayavani, Oct 19, 2020, 6:47 PM IST

ಕಳೆದ ವರ್ಷದ ಪರಿಹಾರವೇ ಬಂದಿಲ್ಲ, ಮತ್ತೆ ಅತಿವೃಷ್ಟಿ ಹಾನಿ

ಚಿಕ್ಕೋಡಿ: ಕಳೆದ ವರ್ಷದ ಭೀಕರ ಪ್ರವಾಹದಲ್ಲಿ ಹಾನಿಯಾದ ಮನೆಗಳಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ. ತಾಲೂಕಿನ ಬಹುತೇಕ ಕಡೆಗಳಲ್ಲಿ ಸಂತ್ರಸ್ತರು ಇನ್ನೂ ಗ್ರಾಮದ ಸಮುದಾಯ ಭವನ ಹಾಗೂ ದನದ ಕೊಟ್ಟಿಗೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಸಂತ್ರಸ್ತರ ಸಂಕಷ್ಟ ನೋಡದ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಕೃಷ್ಣಾ ನದಿ ತೀರದ ಸಂತ್ರಸ್ತರು ಆಕ್ರೋಶ ಹೊರಹಾಕುತ್ತಿದ್ದಾರೆ.

ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಮಳೆಯಿಂದ ಕಳೆದ ವರ್ಷದ ಆಗಸ್ಟ್‌ ತಿಂಗಳಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಚಿಕ್ಕೋಡಿ ಉಪವಿಭಾಗ ತತ್ತರಿಸಿ ಹೋಗಿತ್ತು. ಪ್ರವಾಹ ಬಂದ ಸಮಯದಲ್ಲಿ ಸರ್ಕಾರ ಅಲ್ಪಸ್ವಲ್ಪ ಸಹಾಯ ಮಾಡಿದ್ದನ್ನು ಬಿಟ್ಟರೆ ಮತ್ತೆ ಮರಳಿ ನೋಡಲೇ ಇಲ್ಲ ಎನ್ನುವ ಆರೋಪಗಳು ಗಂಭೀರವಾಗಿವೆ. ಕಳೆದ ವರ್ಷದ ಪ್ರವಾಹದಿಂದ
ಸುಧಾರಿಸಿಕೊಳ್ಳುತ್ತಿದ್ದ ಜನರ ಬದುಕು ಪ್ರಸಕ್ತ ವರ್ಷದ ಅತಿವೃಷ್ಟಿಯಿಂದ ಮತ್ತೆ ಬೀಇಗೆ ಬಂದಿದೆ.

ಇದನ್ನೂ ಓದಿ :ಮೂಡುಬಿದಿರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಿ ಕಾಳಿ ಚರಣ್‌ ಮಹಾರಾಜ್

ಪ್ರವಾಹದಲ್ಲಿ ಸಂತ್ರಸ್ತರು ಕಳೆದುಕೊಂಡ ಮನೆಗಳು ಇನ್ನೂ ನಿರ್ಮಾಣವಾಗಿಲ್ಲ, ರಾಜ್ಯ ಸರಕಾರ ಘೋಷಣೆ ಮಾಡಿರುವ ಐದು ಲಕ್ಷ ರೂ ನಂಬಿ ಹೊಸ ಮನೆ ಕಟ್ಟಿಕೊಳ್ಳಲು ಆರಂಭಿಸಿರುವ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ, ಹೊಸ ಮನೆ ಕಟ್ಟಿಕೊಳ್ಳುವ ಸಂತ್ರಸ್ತರಿಗೆ ಸರ್ಕಾರದ ಮಂಜೂರಾತಿ ದೊರೆಯದೇ ಇರುವುದು ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ, ಯಡೂರ, ಇಂಗಳಿ, ಅಂಕಲಿ, ಮಾಂಜರಿ, ಯಡೂರವಾಡಿ, ಚೆಂದೂರ, ಚೆಂದೂರ ಟೇಕ, ಯಕ್ಸಂಬಾ, ಸದಲಗಾ, ಮಲಿಕವಾಡ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ ಒಕ್ಕರಿಸಿಕೊಂಡ ಪ್ರವಾಹ ಇಡೀ ಗ್ರಾಮಗಳನ್ನೇ ಆವರಿಸಿಬಿಟ್ಟಿತ್ತು.

ತಾಲೂಕಿನಲ್ಲಿ ಸರ್ಕಾರ ಸರ್ವೇ ಮಾಡಿದ ಪ್ರಕಾರ ಒಟ್ಟು 4424 ಮನೆಗಳಿಗೆ ಪರಿಹಾರ ನೀಡಲು ಸರ್ಕಾರ ಸಮ್ಮತಿ ಸೂಚಿಸಿತ್ತು.
ಆದರೆ ತಾಲೂಕಿನಲ್ಲಿ ಇನ್ನೂ 1179 ಮನೆಗಳ ನಿರ್ಮಾಣವಾಗಬೇಕಿದೆ. ಎ ಕೆಟಗೆರಿಯಲ್ಲಿ 538 ಮನೆಗಳ ಪೈಕಿ 487 ಮನೆಗಳು ಪ್ರಗತಿಯಲ್ಲಿವೆ. ಬಿ ಕೆಟಗೆರಿಯಲ್ಲಿ 1227 ಮನೆಗಳ ಪೈಕಿ 796 ಮನೆಗಳು ಪ್ರಗತಿಯಲ್ಲಿವೆ. ಸಿ ಕೆಟಗೆರಿಯ 2709 ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಅಧಿ ಕಾರಿಗಳು ಮಾಹಿತಿ ನೀಡಿದ್ದಾರೆ.

ವಸತಿ ಲಾಗಿನ್‌ ಬಂದ್‌: ಪ್ರವಾಹ ಬಂದು ಒಂದೂವರೆ ವರ್ಷ ಕಳೆದರೂ ಅರ್ಹ ಫಲಾನುಭವಿಗಳಿಗೆ ಮನೆ ಸಿಕ್ಕಿಲ್ಲ. ಸರ್ವೇ
ಮಾಡಿದ ಫಲಾನುಭವಿಗಳ ದಾಖಲಾತಿಗಳು ರಾಜ್ಯ ಸರ್ಕಾರದ ಅಂಗಳಕ್ಕೆ ಹೋಗದೇ ಸ್ಥಳೀಯ ಪಂಚಾಯತಿಯಲ್ಲಿ ಧೂಳು ತಿನ್ನುತ್ತಿವೆ. ಪ್ರವಾಹ ಬಂದ ಎರಡು ತಿಂಗಳಲ್ಲಿಯೇ ವಸತಿ ಲಾಗಿನ್‌ ಬಂದ್‌ ಆಗಿದೆ. ಹೀಗಾಗಿ ಬಹಳಷ್ಟು ಸಂತ್ರಸ್ತರಿಗೆ ಮನೆಗಳ ಪರಿಹಾರ ದೊರಕಿಲ್ಲ, ಪರಿಹಾರ ಕೊಡಿ ಎಂದು ಸ್ಥಳೀಯ ಅಧಿಕಾರಿಗಳನ್ನು ಕೇಳಿದರೆ ಲಾಗಿನ್‌ ಬಂದ್‌ ಆಗಿದೆ. ಪುನಃ ಆರಂಭವಾದಾಗ ಮನೆಗಳಿಗೆ ಪರಿಹಾರ ಸಿಗುತ್ತದೆಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತರು ಅಳಲು
ವ್ಯಕ್ತಪಡಿಸುತ್ತಿದ್ದಾರೆ.

– ಮಹಾದೇವ ಪೂಜೇರಿ

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.