ಕೂಡಲಸಂಗಮ ಮತ್ತೆ ಜಲಾವೃತ :ತ್ರಿವೇಣಿ ಸಂಗಮಕ್ಕೆ 2ನೇ ಬಾರಿ ಪ್ರವಾಹ
ಸಂಗಮನಾಥನ ದೇವಾಲಯಕ್ಕೆ ನುಗ್ಗಿದ ನೀರು
Team Udayavani, Sep 9, 2019, 2:54 PM IST
ಬಾಗಲಕೋಟೆ : ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಿದ್ದು, ಜಿಲ್ಲೆಯ ಹುನಗುಂದ ತಾಲೂಕಿನ ಐತಿಹಾಸಿಕ ತ್ರಿವೇಣಿ ಸಂಗಮವಾದ ಕೂಡಲಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಸೋಮವಾರ ಸಂಗಮದ ಸಂಗಮೇಶ್ವರ ದೇವಾಲಯಕ್ಕೆ ಒಂದು ಅಡಿಯಷ್ಟು ನೀರು ನುಗ್ಗಿದೆ. ಇದರಿಂದ ಸಂಗಮನಾಥನ ದೇವಾಲಯಕ್ಕೆ ಹೋಗಬೇಕಾದ ಭಕ್ತರು, ಒಂದಡಿ ನೀರಿನಲ್ಲಿಯೇ ತೆರಳುತ್ತಿದ್ದಾರೆ.
ನಾರಾಯಣಪುರ ಜಲಾಶಯದ ಹಿನ್ನೀರ ವ್ಯಾಪ್ತಿ ಹಾಗೂ ಕೃಷ್ಣೆ, ಮಲಪ್ರಭೆ, ಘಟಪ್ರಭಾ ನದಿಗಳ ತ್ರಿವೇಣಿ ಸಂಗಮ ಸ್ಥಳವಾಗಿದ್ದು, ನಿತ್ಯವೂ ನೂರಾರು ಭಕ್ತರು ಬರುತ್ತಾರೆ. ಕಳೆದ ಆಗಸ್ಟ 8 ರಿಂದ ಸುಮಾರು ಒಂದು ವಾರಗಳ ಕಾಲ ಕೂಡಲಸಂಗಮ, ಸಂಗಮನಾಥ ದೇವಾಲಯ ಸಂಪೂರ್ಣ ಜಲಾವೃತವಾಗಿತ್ತು. ಆಗ 8 ಅಡಿಗೂ ಹೆಚ್ಚು ನೀರು, ದೇವಾಲಯದಲ್ಲಿ ಆವರಿಸಿಕೊಂಡಿತ್ತು. ಇದೀಗ ಮತ್ತೊಮ್ಮೆ ಸಂಗಮನಾಥ ದೇವಾಲಯಕ್ಕೆ ಒಂದಡಿ ನೀರು ಹೊಕ್ಕಿದೆ.
ಕೃಷ್ಣಾ ಮತ್ತು ಘಟಪ್ರಭಾ ನದಿಗಳು, ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲಿ ಸಂಗಮಗೊಂಡು, ಆಲಮಟ್ಟಿ ಜಲಾಶಯದ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಯುತ್ತವೆ. ಕೂಡಲಸಂಗಮದಲ್ಲಿ ಮಲಪ್ರಭಾ, ಕೃಷ್ಣಾ ನದಿ ಸಂಗಮಗೊಳ್ಳುತ್ತಿದ್ದು, ಮೂರು ನದಿಗಳ ನೀರಿನ ಹರಿವು ಕೂಡಲಸಂಗಮಕ್ಕೆ ಅಪಾರ ಪ್ರಮಾಣದಲ್ಲಿ ಬರುತ್ತದೆ. ಹೀಗಾಗಿ ಪ್ರವಾಹ ಪರಿಸ್ಥಿತಿ, ಕೂಡಲಸಂಗಮದಲ್ಲಿ ಹೆಚ್ಚುತ್ತದೆ.
ನಾರಾಯಣಪುರ ಜಲಾಶಯಕ್ಕೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಿಂದ ಒಟ್ಟು 2,60,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 2,62,280ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರಿನ ಒತ್ತಡ ಹೆಚ್ಚಾಗಿದ್ದರಿಂದ ಕೂಡಲಸಂಗಮ, ತಿಂಗಳಲ್ಲಿ 2 ನೇ ಬಾರಿ ಜಲಾವೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಸಹೋದರಿಯ ಮದುವೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು : ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ
ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ
ಬೇಡರಶಿವನಕೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ : ಅರಣ್ಯ ಸಿಬಂದಿಗಳಿಂದ ಕಾರ್ಯಾಚರಣೆ
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ