ನೆರೆ ಪ್ರದೇಶ ಪರಿಶೀಲನೆ ಸಿಎಂ ಒಂಟಿ ಹೋರಾಟ


Team Udayavani, Aug 14, 2019, 6:00 AM IST

s-43

ಬೆಂಗಳೂರು: ಒಂದೆಡೆ ಎಡೆಬಿಡದೆ ಸುರಿದ ಮಳೆ, ಉಕ್ಕಿ ಹರಿದ ಜಲಾಶಯಗಳು, ಭೂಕುಸಿತ, ಕೊಚ್ಚಿ ಹೋದ ಮನೆ, ಬೆಳೆ, ಜನ, ಜಾನುವಾರು, ಸಾವು ನೋವು, ಸಾವಿರಾರು ಕೋಟಿ ರೂ. ಆಸ್ತಿಪಾಸ್ತಿ ನಷ್ಟ ಹೀಗೆ ಪ್ರಕೃತಿ ವೈಪರೀತ್ಯಕ್ಕೆ ರಾಜ್ಯದ ಅರ್ಧಕ್ಕೂ ಹೆಚ್ಚು ಪ್ರದೇಶದ ಲಕ್ಷಾಂತರ ಮಂದಿ ಸಂಕಷ್ಟದಲ್ಲಿದ್ದು, ಸರ್ಕಾರದ ಪರವಾಗಿ ಸದ್ಯ ಸ್ಪಂದಿಸುತ್ತಿರುವ ಏಕೈಕ ವ್ಯಕ್ತಿ ಎಂದರೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ. ಅವರ ಬೆನ್ನಿಗೆ ಅಧಿಕಾರಿಗಳು.

ಕಳೆದ 10 ದಿನಗಳಿಂದ ರಾಜ್ಯದ ಹಲವೆಡೆ ಭಾರಿ ಮಳೆ, ಭೂಕುಸಿತದಿಂದ ಜನ ಜೀವನ ಅಸ್ತವ್ಯಸ್ತವಾಗಿ ಲಕ್ಷಾಂತರ ಮಂದಿ ಬೀದಿಪಾಲಾಗಿ ಜೀವ ಕೈಯಲ್ಲಿಡಿದು ಬದುಕುಳಿದವರಿಗೆ ಸದ್ಯ ಸರ್ಕಾರವಾಗಿ ಯಡಿಯೂರಪ್ಪ ಅವರು ಸಾಂತ್ವನ ಹೇಳುವ ಜತೆಗೆ ಪರಿಹಾರ, ಪುನರುಜ್ಜೀವನದ ಭರವಸೆಯನ್ನೂ ನೀಡುತ್ತಿದ್ದಾರೆ.

ಕಳೆದ 10 ದಿನಗಳಲ್ಲಿ ಸಾವಿರಾರು ಕಿ.ಮೀ. ಪ್ರದೇಶದಲ್ಲಿ ಪ್ರಯಾಣ ಮಾಡಿರುವ ಯಡಿಯೂರಪ್ಪ ಅವರು ನೂರಾರು ಕಿ.ಮೀ. ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸರಣಿ ಸಭೆಗಳನ್ನೂ ನಡೆಸಿ ಪರಿಸ್ಥಿತಿ, ಸನ್ನಿವೇಶಕ್ಕೆ ತಕ್ಕಂತೆ ಸೂಚನೆ, ಆದೇಶಗಳನ್ನು ನೀಡಿ ಸ್ಪಂದಿಸುತ್ತಿದ್ದಾರೆ.

ಇಳಿ ವಯಸ್ಸಿನಲ್ಲೂ ಯಡಿಯೂರಪ್ಪ ಅವರ ಏಕವ್ಯಕ್ತಿ ಸರ್ಕಾರದ ಕಾರ್ಯ ವೈಖರಿ ಪ್ರತಿಪಕ್ಷಗಳು ಟೀಕೆ ಮಾಡಲಾಗದಷ್ಟರ ಮಟ್ಟಿಗೆ ವಿಶ್ವಾಸ ಮೂಡಿಸಿದಂತಿದೆ.

ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ, ಮಹಾರಾಷ್ಟ್ರದ ಹಲವು ಜಲಾಶಯಗಳಿಂದ ಏಕಕಾಲಕ್ಕೆ ಲಕ್ಷಾಂತರ ಕ್ಯೂಸೆಕ್ಸ್‌ ನೀರು ಹೊರ ಹರಿದ ಪ್ರಮಾಣ ಅತಿವೃಷ್ಟಿಯಿಂದಾಗ ಪ್ರವಾಹ ಉಂಟಾಗಿತ್ತು. ಈ ಬಗ್ಗೆ ಮಾಹಿತಿ ಪಡೆ ಯುತ್ತಿದ್ದಂತೆ ಯಡಿಯೂರಪ್ಪ ಅವರು ಮಹಾ ರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ಜಲಾಶಯಗಳಿಂದ ಹೊರಕ್ಕೆ ಹರಿಸುವ ನೀರಿನ ಪ್ರಮಾಣ ನಿಯಂತ್ರಣ ದತ್ತ ನಿಗಾ ವಹಿಸುವ ವ್ಯವಸ್ಥೆ ಮಾಡಿದರು.

ಆ. 5ರಿಂದ ವೈಮಾನಿಕ ಸಮೀಕ್ಷೆ: ಆ.5ರಂದು ಯಡಿಯೂರಪ್ಪ ಅವರು ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಹಾನಿಗೆ ಒಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಅಥಣಿಯ ಪ್ರವಾಹಪೀಡಿತ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಆ. 6ರಂದು ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನರೇಂದ್ರ ಸಿಂಗ್‌ ತೋಮರ್‌, ನಿತಿನ್‌ ಗಡ್ಕರಿ, ರಾಜನಾಥ ಸಿಂಗ್‌, ನಿರ್ಮಲಾ ಸೀತಾರಾಮನ್‌ ಇತರರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದರು. ಆ ದಿನ ರಾತ್ರಿ ರಾಜ್ಯದ ಸಂಸದರೊಂದಿಗೆ ಸಭೆಯನ್ನೂ ನಡೆಸಿ ರಾಜ್ಯದ ಜನರ ಕಲ್ಯಾಣಕ್ಕೆ ಪೂರಕವಾಗಿ ದೆಹಲಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.

ಮರುದಿನ ಅಂದರೆ ಆ.7ರಂದು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪ ಅವರು ಸಂಜೆ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ತೆರಳಿ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಸಾಂತ್ವನ ನೀಡಿದರು. ಮರುದಿನ ಬೆಳಗಾವಿ, ಬಾಗಲಕೋಟೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ನಂತರ ಚಿಕ್ಕೋಡಿ, ನಿಪ್ಪಾಣಿ, ಮುಧೋಳದಲ್ಲಿ ಸಂತ್ರಸ್ತರ ಅಳಲು ಆಲಿಸಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ಆ. 9ರಂದು ಮುಧೋಳ, ಬಾಗಲಕೋಟೆ ಪ್ರವಾಸ ನಡೆಸಿದರು. ಈ ಮಧ್ಯೆ ತುರ್ತು ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಬಿಡುಗಡೆ ಮಾಡಿದರು.

ಆ. 10ರಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ ಅವರು ಪ್ರವಾಹಪೀಡಿತರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜತೆಗೆ 6000 ಕೋಟಿ ರೂ. ನಷ್ಟವಾಗಿದ್ದು, ತುರ್ತಾಗಿ 3000 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಧಾನಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಪ್ರಸ್ತಾವ ಸಲ್ಲಿಸಿದರು. ಈ ನಡುವೆ, ಗೃಹ ಸಚಿವ ಅಮಿತ್‌ ಶಾ ಅವರ ಜತೆ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸೋಮವಾರ ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರೆ, ಮಂಗಳವಾರ ಶಿವಮೊಗ್ಗ ಪ್ರವಾಸ ನಡೆಸಿದರು.

ಅಧಿಕಾರಿಗಳ ಜತೆಗೆ ಸಭೆ: ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಿ ಪರಿಹಾರ ಕಾರ್ಯದ ಮೇಲ್ವಿಚಾರಣೆ ನಡೆಸುತ್ತಿರುವ ಯಡಿಯೂರಪ್ಪ ಅವರು, ಪರಿಹಾರ ಕಾರ್ಯಗಳು ಸಮರೋಪಾದಿ ಯಲ್ಲಿ ನಡೆಯುವ ಸಿದ್ಧತಾ ಕಾರ್ಯಗಳತ್ತಲೂ ಗಮನ ನೀಡಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಿಲುಕಿವರ ಪುನರ್ವಸತಿಗಾಗಿ ದೇಣಿಗೆ ಸಂಗ್ರಹಕ್ಕೂ ಒತ್ತು ನೀಡಿರುವ ಯಡಿಯೂರಪ್ಪ ಅವರು ಸಚಿವ ಸಂಪುಟವಿಲ್ಲದ ಕೊರತೆಯೇ ಕಾಡದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಪ್ರತಿಪಕ್ಷಗಳು ಕೂಡ ಯಡಿಯೂರಪ್ಪ ಅವರ ವಿರುದ್ಧ ಚಕಾರ ತೆಗೆಯುತ್ತಿಲ್ಲ. ಬದಲಿಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಲಾರಂಭಿಸಿದ್ದಾರೆ.

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.