ಕೂಳೂರು-ಬೈಕಂಪಾಡಿ ಹೆದ್ದಾರಿಯಲ್ಲಿ ಫ್ಲೈಓವರ್‌ಗೆ ಒಲವು

ಸರಕು ವಾಹನಗಳ ಓಡಾಟಕ್ಕೆ ಪ್ರತ್ಯೇಕ ರಸ್ತೆ; ಪ್ರಯಾಣಿಕ ವಾಹನಗಳಿಗೆ ಅನುಕೂಲ

Team Udayavani, Oct 6, 2021, 6:44 AM IST

ಕೂಳೂರು-ಬೈಕಂಪಾಡಿ ಹೆದ್ದಾರಿಯಲ್ಲಿ ಫ್ಲೈಓವರ್‌ಗೆ ಒಲವು

ಮಹಾನಗರ: ಕೈಗಾರಿಕೆ ವ್ಯಾಪ್ತಿಯನ್ನೇ ಹೊಂದಿರುವ ಕೂಳೂರು ಸೇತುವೆ ಸಮೀಪದ ಕೆಐಒಸಿಎಲ್‌ ಜಂಕ್ಷನ್‌ನಿಂದ ಬೈಕಂಪಾಡಿ ಜಂಕ್ಷನ್‌ವರೆಗೆ ಸರಕು ವಾಹನಗಳ ಓಡಾಟಕ್ಕಾಗಿ ಪ್ರತ್ಯೇಕ ರಸ್ತೆ ಆವಶ್ಯಕವಿರುವ ಕಾರಣದಿಂದ ಪ್ರಯಾಣಿಕ ವಾಹನಗಳಿಗೆ ಅನುಕೂಲವಾಗುವಂತೆ ಫ್ಲೈಓವರ್‌ ನಿರ್ಮಾಣಕ್ಕೆ ಸ್ಥಳೀಯ ಕೈಗಾರಿಕೆ ಪ್ರಮುಖರು ಒಲವು ವ್ಯಕ್ತಪಡಿಸಿದ್ದಾರೆ.

ನವಮಂಗಳೂರು ಬಂದರು ಮಂಡಳಿಯು ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿ ತೋರಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಹಲವು ಕಂಪೆನಿಗಳ ನೆರವು ನೀಡುವ ನಿರೀಕ್ಷೆಯಿದೆ. ಈ ಸಂಬಂಧ ಮುಂದಿನ 3 ತಿಂಗಳೊಳಗೆ ಇಂಡಿಯನ್‌ ಪೋರ್ಟ್‌ ರೈಲ್‌ ಆ್ಯಂಡ್‌ ರೋಪ್‌ವೇ ಕಾರ್ಪೋರೆಷನ್‌ ಲಿ. (ಐಪಿಆರ್‌ಸಿಎಲ್‌) ವತಿಯಿಂದ ಡಿಪಿಆರ್‌ ಸಿದ್ಧಪಡಿಸಲು ಉದ್ದೇಶಿಸಲಾಗಿದೆ.

ಒಟ್ಟು 3.3 ಕಿ.ಮೀ. ಉದ್ದದ ಚತುಷ್ಪಥ ಫ್ಲೈಓವರ್‌ಗೆ ಚಿಂತನೆ ನಡೆಸಲಾಗಿದೆ. ಅಂದಾಜು 450 ಕೋ.ರೂ. ಅಂದಾಜು ವೆಚ್ಚದ ನಿರೀಕ್ಷೆಯಿದೆ. ಸದ್ಯದ ಪ್ರಕಾರ ಶೇ. 25ರಷ್ಟು ಮೊತ್ತ ಎನ್‌ಎಂಪಿಟಿ ನೀಡಿದರೆ, ಉಳಿದ ಮೊತ್ತವನ್ನು ವಿವಿಧ ಕೈಗಾರಿಕೆಗಳು, ಸಾಗರಮಾಲ ಯೋಜನೆಯಿಂದ ವಿನಿಯೋಗಿಸುವ ಬಗ್ಗೆ ಪ್ರಾರಂಭಿಕ ಮಾತುಕತೆ ನಡೆಯುತ್ತಿದೆ.

ಕೂಳೂರು ಸೇತುವೆಯ ಸನಿಹದ ಕೆಐಒಸಿಎಲ್‌ ಜಂಕ್ಷನ್‌ನಿಂದ ಬೈಕಂಪಾಡಿ ಜಂಕ್ಷನ್‌ವರೆಗೆ ಕೆಐಒಸಿಎಲ್‌, ಎನ್‌ಎಂಪಿಟಿ, ಎಂಸಿಎಫ್‌, ಟೋಟಲ್‌ ಗ್ಯಾಸ್‌, ಚೆಟ್ಟಿನಾಡ್‌ ಸಿಮೆಂಟ್‌, ಗೈಲ್‌ ಸಹಿತ ಹಲವು ಕೈಗಾರಿಕೆ ಸಂಬಂಧಿತ ಸಂಸ್ಥೆಗಳಿವೆ. ಬೈಕಂಪಾಡಿ ಕೈಗಾರಿಕೆ ಪ್ರದೇಶ, ಎಸ್‌ಇಝಡ್‌, ಎಂಆರ್‌ಪಿಎಲ್‌ ಸಹಿತ ವಿವಿಧ ಕೈಗಾರಿಕೆ ಪ್ರದೇಶಕ್ಕೆ ಸಂಪರ್ಕ ಕೂಡ ಇದೇ ರಸ್ತೆ ಆಗಿರುವುದರಿಂದ ಇಲ್ಲಿ ನಿತ್ಯ 10 ಸಾವಿರಕ್ಕೂ ಅಧಿಕ ಸರಕು ತುಂಬಿದ ವಾಹನಗಳೇ ಸಂಚರಿಸುತ್ತಿವೆ. ಜತೆಗೆ ಹಲವು ಘನವಾಹನಗಳು ಈ ವ್ಯಾಪ್ತಿಯ ರಸ್ತೆಯ ಬದಿಯಲ್ಲಿ ನಿಂತಿರುವುದರಿಂದ ಖಾಸಗಿ ವಾಹನಗಳ ಓಡಾಟಕ್ಕೂ ಸಮಸ್ಯೆ ಆಗುತ್ತಿದೆ. ಈ ಕಾರಣದಿಂದ ಇಲ್ಲಿ ಫ್ಲೈಓವರ್‌ ನಿರ್ಮಾಣ ಅಗತ್ಯ ಎಂದು ಮನಗಂಡು ಹೊಸ ಯೋಜನೆಗೆ ಚಿಂತನೆ ನಡೆಸಲಾಗಿದೆ.

ಭಾರತೀಯ ಕೈಗಾರಿಕೆ ಒಕ್ಕೂಟದ ದ.ಕ. ಉಪಾಧ್ಯಕ್ಷ ಗೌರವ್‌ ಹೆಗ್ಡೆ ಪ್ರಕಾರ, ಬೈಕಂಪಾಡಿ ಪ್ರದೇಶದಲ್ಲಿ ಇದೀಗ ಘನ ವಾಹನಗಳ ಓಡಾಟ ಅಧಿಕವಾಗಿವೆ. ಮುಂದಿನ 5 ವರ್ಷಗಳಲ್ಲಿ ಇದರ ಸಂಖ್ಯೆ ದುಪ್ಪಟ್ಟಾಗಲಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಇಲ್ಲಿ ಫ್ಲೈಓವರ್‌ ಪರಿಕಲ್ಪನೆ ಭವಿಷ್ಯದ ದೃಷ್ಟಿಯಿಂದ ಅಗತ್ಯವಿದೆ ಎನ್ನುತ್ತಾರೆ.

ಇದನ್ನೂ ಓದಿ:ಪಿಲಿಕುಳದ ಹನುಮಾನ್‌ ಲಂಗೂರ್‌ “ರಾಜು’ ಸಾವು

ಸರಕು ಸಾಗಾಟಕ್ಕೆ ಅನುಕೂಲ
“ಆರು ಪಥಗಳ ಕೂಳೂರು ಸೇತುವೆ ಕಾರ್ಯಗತವಾದರೆ ಈ ಭಾಗದಲ್ಲಿ ಸರಕು ಸಾಗಾಟದ ತೊಂದರೆ ನೀಗಲಿದೆ. ಜತೆಗೆ, ಸಂಪಾಜೆ, ಶಿರಾಡಿ, ಚಾರ್ಮಾಡಿ ಘಾಟಿ ರಸ್ತೆ ಕಾಮಗಾರಿಗಳೂ ಮುಂದಿನ ಹಂತದಲ್ಲಿ ಪೂರ್ಣಗೊಳ್ಳುವ ಕಾರಣದಿಂದ ಮಂಗಳೂರಿಗೆ ಸರಕು ಸಾಗಾಟ ವಾಹನಗಳ ಆಗಮನಕ್ಕೆ ಉಪಕಾರವಾಗಲಿದೆ. ಹೀಗಿರುವಾಗ ಮಂಗಳೂರಿನ ಕೈಗಾರಿಕೆ ಕೇಂದ್ರದ ಭಾಗದಲ್ಲಿ ವಾಹನ ದಟ್ಟಣೆಯನ್ನು ನಿಭಾಯಿಸಲು ಫ್ಲೈಓವರ್‌ ಸೂತ್ರ ಅಗತ್ಯವಾಗಿದೆ’ ಎಂಬುದು ಎನ್‌ಎಂಪಿಟಿ ಅಭಿಪ್ರಾಯ.

ಭಾಗೀದಾರರ ಸಭೆ
ಕೆಐಒಸಿಎಲ್‌ ಜಂಕ್ಷನ್‌ನಿಂದ ಬೈಕಂಪಾಡಿವರೆಗೆ ಫ್ಲೈಓವರ್‌ ನಿರ್ಮಾಣ ಸಂಬಂಧ ಎನ್‌ಎಂಪಿಟಿ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿದೆ. ಸ್ಥಳೀಯ ಭಾಗೀದಾರರಾದ ಮಂಗಳೂರು ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ, ಎಂಆರ್‌ಪಿಎಲ್‌, ರಾ.ಹೆದ್ದಾರಿ ಪ್ರಾಧಿಕಾರ, ಕೆಐಓಸಿಎಲ್‌, ಎಂಸಿಎಫ್‌, ಕೆಸಿಸಿಐ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಫ್ಲೈಓವರ್‌ ಜಾರಿಗೆ ಮಾತುಕತೆ
ಕೆಐಒಸಿಎಲ್‌ ಜಂಕ್ಷನ್‌ನಿಂದ ಬೈಕಂಪಾಡಿವರೆಗೆ ಫ್ಲೈಓವರ್‌ ನಿರ್ಮಾಣದ ಅಗತ್ಯದ ಬಗ್ಗೆ ಎನ್‌ಎಂಪಿಟಿ ವತಿಯಿಂದ ಸಭೆ ನಡೆದಿದೆ. ಯೋಜನೆಯ ಸಾಧ್ಯಸಾಧ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಸ್ಥಳೀಯ ಭಾಗೀದಾರರನ್ನು ಸೇರಿಸಿಕೊಂಡು ಯೋಜನೆ ಜಾರಿಗೆ ಅಲ್ಲಿ ಮಾತುಕತೆ ನಡೆದಿದ್ದು, ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂಬ ಬಗ್ಗೆ ಅಭಿಪ್ರಾಯವಿದೆ.
-ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮಂಗಳೂರು ಪಾಲಿಕೆ

ಘನ ವಾಹನಗಳಿಗೆ ಅನುಕೂಲ
ಕೈಗಾರಿಕೆಗಳಿಗೆ ಸಂಬಂಧಿಸಿದ ಘನ ವಾಹನಗಳ ಸಂಚಾರಕ್ಕೆ ಅನುಕೂಲವಾಗುವ ನೆಲೆಯಲ್ಲಿ ಕೂಳೂರು-ಬೈಕಂಪಾಡಿ ಮಧ್ಯೆ 3.3 ಕಿ.ಮೀ. ಉದ್ದ ಫ್ಲೈಓವರ್‌ ನಿರ್ಮಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. 8.35 ಮೀ. ಎತ್ತರದಲ್ಲಿ ಫ್ಲೆ$çಓವರ್‌ ಬಗ್ಗೆ ಚರ್ಚೆ ನಡೆಸಲಾಗಿದೆ. ಐಪಿಆರ್‌ಸಿಎಲ್‌ ವತಿಯಿಂದ ಡಿಪಿಆರ್‌ ಆಗಲಿದೆ. ಇದು ಸಾಧ್ಯವಾದರೆ ಘನ ವಾಹನಗಳು ಈಗಿನ ರಸ್ತೆಯಲ್ಲಿ ಹಾಗೂ ಸಾರ್ವಜನಿಕರ ವಾಹನಗಳು ಫ್ಲೈಓವರ್‌ನಲ್ಲಿ ಸಂಚರಿಸಬಹುದಾಗಿದೆ.
-ಜೀವನ್‌ ಸಲ್ಡಾನ್ಹಾ, ಅಧ್ಯಕ್ಷರು, ಭಾರತೀಯ ಕೈಗಾರಿಕೆ ಒಕ್ಕೂಟ, ದ.ಕ.

– ದಿನೇಶ್‌ ಇರಾ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.