ಮೊದಲು ಪಾಕಿಸ್ಥಾನ ಪಂದ್ಯದತ್ತ ಗಮನ: ಹರ್ಮನ್‌ಪ್ರೀತ್‌ ಕೌರ್‌


Team Udayavani, Feb 6, 2023, 8:10 AM IST

ಮೊದಲು ಪಾಕಿಸ್ಥಾನ ಪಂದ್ಯದತ್ತ ಗಮನ: ಕೌರ್‌

ಕೇಪ್‌ಟೌನ್‌: ಮೊದಲ ವನಿತಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಕ್ರಿಕೆಟ್‌ ಪಂದ್ಯಾವಳಿಗಾಗಿ ಹರಾಜು ಪ್ರಕ್ರಿಯೆ ಸಮೀಪಿ ಸುತ್ತಿದೆಯಾದರೂ ಮೊದಲು ನಮ್ಮ ಗಮನ ಪಾಕಿಸ್ಥಾನದೆದುರಿನ ವಿಶ್ವಕಪ್‌ ಪಂದ್ಯದತ್ತ ಎಂಬುದಾಗಿ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ಆತಿಥ್ಯದಲ್ಲಿ ಫೆ. 10ರಂದು ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಆರಂಭವಾಗಲಿದೆ. ಭಾರತ ಫೆ. 12ರಂದು ಪಾಕಿ ಸ್ಥಾನ ವಿರುದ್ಧ ಮೊದಲ ಪಂದ್ಯವಾಡಲಿದೆ. ಇದರ ಮರುದಿನವೇ ಮುಂಬಯಿಯಲ್ಲಿ ಡಬ್ಲ್ಯುಪಿಎಲ್‌ ಹರಾಜು ಪ್ರಕ್ರಿಯೆ ನಡೆಯಲಿದೆ.

“ನಮ್ಮ ಮೊದಲ ಆದ್ಯತೆ ವಿಶ್ವಕಪ್‌ ಪಂದ್ಯಾವಳಿ. ವಿಶ್ವಕಪ್‌ಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ಐಸಿಸಿ ಟ್ರೋಫಿಯ ಮೇಲೆ ನಮ್ಮೆಲ್ಲರ ಕಣ್ಣು ನೆಟ್ಟಿದೆ. ಇಲ್ಲಿ ಆರಂಭಿಕ ಪಂದ್ಯದಲ್ಲೇ ನಾವು ಪಾಕಿಸ್ಥಾನವನ್ನು ಎದುರಿಸಲಿದ್ದೇವೆ. ಈ ಪಂದ್ಯದತ್ತ ಹೆಚ್ಚಿನ ಗಮನ ಹರಿಸಬೇಕಿದೆ’ ಎಂದು ಕೌರ್‌ ಹೇಳಿದರು.

ಮೊನ್ನೆಯಷ್ಟೇ ಶಫಾಲಿ ವರ್ಮ ನೇತೃತ್ವದ ಅಂಡರ್‌-19 ತಂಡ ಭಾರತಕ್ಕೆ ಪ್ರಪ್ರಥಮ ವಿಶ್ವಕಪ್‌ ತಂದಿತ್ತು ಇತಿಹಾಸ ನಿರ್ಮಿಸಿದೆ. ಇದ ರೊಂದಿಗೆ ಇನ್ನೊಂದು ವಿಶ್ವಕಪ್‌ ಗೆಲ್ಲುವುದೂ ಭಾರತದ ಗುರಿ. ಈ ಕುರಿತು ಪ್ರತಿಕ್ರಿಯಿಸಿದ ಕೌರ್‌, “ನಮಗೆ ಕಿರಿಯರು ಸ್ಫೂರ್ತಿ ಆಗಿದ್ದಾರೆ. ಉತ್ತಮ ನಿರ್ವಹಣೆ ನೀಡಲು ಅವರೆಲ್ಲ ನಮಗೆ ಪ್ರೇರಣೆ ಆಗಿದ್ದಾರೆ. ಕಿರಿಯರು ಈವರೆಗೆ ಏನು ಸಾಧಿಸಿದ್ದಾರೋ ಅದನ್ನು ನಾವು ಈವರೆಗೆ ಸಾಧಿಸಿಲ್ಲ. ಇಲ್ಲಿನ ಅವಕಾಶವನ್ನು ಭರಪೂರ ಬಳಸಿಕೊಳ್ಳಬೇಕಿದೆ’ ಎಂದರು.

“ಐಪಿಎಲ್‌ ಮಾದರಿಯ ಚೊಚ್ಚಲ ವನಿತಾ ಪ್ರೀಮಿಯರ್‌ ಲೀಗ್‌ ಕೂಡ ಆಸ್ಟ್ರೇಲಿಯದ ಬಿಗ್‌ ಬಾಶ್‌ ಲೀಗ್‌, ಇಂಗ್ಲೆಂಡ್‌ನ‌ ದಿ ಹಂಡ್ರೆಡ್‌ ಪಂದ್ಯಾವಳಿಯಂತೆ ಭಾರತೀಯ ವನಿತಾ ಕ್ರಿಕೆಟ್‌ನ ಅಭ್ಯುದಯಕ್ಕೆ ಕಾರಣವಾಗಲಿದೆ. ಇಂಥದೊಂದು ಪಂದ್ಯಾವಳಿಗಾಗಿ ನಾವು ಅದೆಷ್ಟೋ ವರ್ಷದಿಂದ ಕಾಯುತ್ತಿದ್ದೆವು.

ಮುಂದಿನ 2-3 ತಿಂಗಳು ಭಾರತದ ವನಿತಾ ಕ್ರಿಕೆಟ್‌ ಪಾಲಿಗೆ ಬಹಳ ಮುಖ್ಯವಾದುದು’ ಎಂದು ಈಗಾಗಲೇ ವನಿತಾ ಬಿಗ್‌ ಬಾಶ್‌, ದಿ ಹಂಡ್ರೆಡ್‌, ಕಿಯಾ ಸೂಪರ್‌ ಲೀಗ್‌ನಲ್ಲಿ ಆಡಿರುವ ಹರ್ಮನ್‌ಪ್ರೀತ್‌ ಕೌರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.