Delhi: ದೆಹಲಿಗೆ “ಮಂಜಿನ ಹೊದಿಕೆ”: ಗಂಭೀರ ಸ್ಥಿತಿಗೆ ತಲುಪಿದ ಮಾಲಿನ್ಯ

 10 ವಿಮಾನಗಳ ಪಥ ಬದಲು, 100 ವಿಮಾನಗಳ ಸಂಚಾರ ವಿಳಂಬ - ಅನಗತ್ಯ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ನಿಷೇಧ

Team Udayavani, Jan 14, 2024, 9:44 PM IST

delhi pollluu

ನವದೆಹಲಿ: ವಿಪರೀತ ಚಳಿಯು ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತವಾಗಿಸಿದೆ. ಭಾನುವಾರ ನವದೆಹಲಿಯಲ್ಲಿ 3.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದ್ದು, ತೀವ್ರ ಚಳಿಯ ಪರಿಣಾಮವೆಂಬಂತೆ, ದಟ್ಟ ಮಂಜಿನ ಹೊದಿಕೆ ದೆಹಲಿಯನ್ನು ಮುಚ್ಚಿಬಿಟ್ಟಿದೆ.

ಮಂಜಿನಿಂದಾಗಿ ಗೋಚರತೆ ಸಮಸ್ಯೆ ಉಂಟಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ 10 ವಿಮಾನಗಳ ಪಥ ಬದಲಿಸಲಾಗಿದ್ದು, ಸುಮಾರು 100 ವಿಮಾನಗಳ ಸಂಚಾರ ವಿಳಂಬವಾಗಿದೆ. ಇನ್ನೂ ಕೆಲವು ವಿಮಾನಗಳ ಸಂಚಾರವನ್ನೇ ರದ್ದು ಮಾಡಲಾಗಿದೆ. ಇನ್ನೊಂದೆಡೆ, ಚಳಿಗಾಲದ ರಜೆ ಭಾನುವಾರಕ್ಕೆ ಮುಗಿದಿದ್ದು, ಸೋಮವಾರದಿಂದ ದೆಹಲಿಯಲ್ಲಿ ಶಾಲೆಗಳು ಆರಂಭವಾಗಲಿವೆ. ಆದರೆ, ಶೀತ ಗಾಳಿ ಹೆಚ್ಚಿರುವ ಕಾರಣ ಬೆಳಗ್ಗೆ 9 ಗಂಟೆಯ ನಂತರವೇ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ.

ಸರಣಿ ಅಪಘಾತ:

ಇದೇ ವೇಳೆ, ಗ್ರೇಟರ್‌ ನೋಯ್ಡಾದ ಪೂರ್ವ ಪೆರಿಫೆರಲ್‌ ಎಕ್ಸ್‌ಪ್ರಸ್‌ವೇನಲ್ಲಿ ಮಂಜಿನಿಂದಾಗಿ ಮುಂದಿರುವ ವಾಹನಗಳು ಕಾಣದೇ ಹಲವು ಟ್ರಕ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ, ಒಬ್ಬ ವ್ಯಕ್ತಿ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಬೆಚ್ಚಗಾದ ಕಾಶ್ಮೀರಕ್ಕೆ “ಹಿಮದ ಪಟ್ಟ” ಕಳೆದುಕೊಳ್ಳುವ ಭೀತಿ!

ಚಳಿಗಾಲದಲ್ಲಿ “ಹಿಮ ನಗರಿ’ಯಾಗಿ ಬದಲಾಗುವ ಕಾಶ್ಮೀರ ಈ ಬಾರಿ ಅಚ್ಚರಿಯ ಹವಾಗುಣಕ್ಕೆ ಸಾಕ್ಷಿಯಾಗಿದೆ. ಜನವರಿ ತಿಂಗಳಲ್ಲಿ ಬೀಳುವ ಹಿಮ ಮಳೆಯಲ್ಲಿ ಈ ಬಾರಿ ಶೇ.100ರಷ್ಟು ಕೊರತೆ ಕಂಡುಬಂದಿದೆ. ಶ್ರೀನಗರದಲ್ಲಿ ಭಾನುವಾರ ಗರಿಷ್ಠ ತಾಪಮಾನ 15 ಡಿ.ಸೆ. ದಾಖಲಾಗಿದ್ದು, ಕಳೆದ 20 ವರ್ಷಗಳಲ್ಲೇ ಜನವರಿಯಲ್ಲಿ ದಾಖಲಾದ ಅತಿ ಗರಿಷ್ಠ ತಾಪಮಾನ ಇದಾಗಿದೆ. ಕಣಿವೆಯ ಹಲವು ಭಾಗಗಳಲ್ಲಿ ತಾಪಮಾನ ವಾಡಿಕೆಗಿಂತ 6-8 ಡಿ.ಸೆ. ಹೆಚ್ಚಾಗಿದೆ. ಇದು ಕಾಶ್ಮೀರದಲ್ಲಿ ಪ್ರವಾಸೋದ್ಯಮದ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ.

 

ಬಾಕ್ಸ್‌

ದೆಹಲಿಯಲ್ಲಿ ನಿರ್ಮಾಣ ಕಾಮಗಾರಿಗೆ ನಿರ್ಬಂಧ

ದೆಹಲಿ ಮತ್ತು ಎನ್‌ಸಿಆರ್‌ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಭಾನುವಾರ ನಿರ್ಬಂಧ ಹೇರಿದೆ. ಜತೆಗೆ, ಬಿಎಸ್‌-3 ಮತ್ತು ಬಿಎಸ್‌-4 ಡೀಸೆಲ್‌ ವಾಹನಗಳ ಸಂಚಾರಕ್ಕೂ ನಿಷೇಧ ಹೇರಿದೆ. ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (458) “ಗಂಭೀರ’ ಮಟ್ಟಕ್ಕೆ ತಲುಪಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. 2024ರಲ್ಲಿ ವಾಯು ಗುಣಮಟ್ಟ ಗಂಭೀರ ಸ್ಥಿತಿಗೆ ತಲುಪಿರುವುದು ಇದೇ ಮೊದಲು.

 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.