ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ


Team Udayavani, May 25, 2024, 12:30 AM IST

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಸಹಿತ ಗಡಾಯಿಕಲ್ಲು, ಪಶ್ಚಿಮ ಘಟ್ಟದುದ್ದಕ್ಕೂ ಶುಕ್ರವಾರ ಮೋಡ ಕವಿದ ವಾತಾವರಣದ ನಡುವೆ ದಿನವಿಡೀ ಮಂಜಿನ ವಾತಾವರಣ ಕಂಡು ಬಂದಿತು.

ಚಾರ್ಮಾಡಿ ಘಾಟಿ ಪರಿಸರದ 25 ಕಿ.ಮೀ. ವ್ಯಾಪ್ತಿಯಲ್ಲಿನ ಮಂಜು ಮುಸುಕಿದ ವಾತಾವರಣದ ಹಿನ್ನೆಲೆ ವಾಹನ ಸವಾರರು ಫಾಗ್‌ ಲ್ಯಾಂಪ್‌ ಹಾಗೂ ಹೆಡ್‌ಲೈಟ್‌ ಬಳಸಿ ವಾಹನ ಚಲಾಯಿಸಿದರು. ಬೆಳಗ್ಗಿನಿಂದಲೇ ಭಾರಿ ಮಂಜು ಕವಿದ ವಾತಾವರಣವಿತ್ತು.

ಒಂದು ವಾರದಿಂದ ಘಾಟಿ ಪರಿಸರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಶುಕ್ರವಾರವೂ ಆಗಾಗ ತುಂತುರು ಮಳೆಯಾಗಿದೆ. ಪ್ರಸ್ತುತ ಶಾಲಾ ರಜಾ ದಿನಗಳಾದ ಕಾರಣ ಅನೇಕ ಪ್ರಯಾಣಿಕರು ಘಾಟಿಯಲ್ಲಿ ಸಂಚರಿಸುವುದು ಕಂಡುಬಂದಿತು.

ಚಿಕ್ಕಮಗಳೂರು ವಿಭಾಗದಲ್ಲಿ ಘಾಟಿಯ ತಡೆಗೋಡೆ ಕಟ್ಟುವ ಕಾಮಗಾರಿ ಪೂರ್ಣಗೊಳ್ಳದೆ ಅಲ್ಲಲ್ಲಿ ಕೆಲವು ಅಪಾಯಕಾರಿ ಜಾಗಗಳಿವೆ. ಈ ಪರಿಸರದಲ್ಲಿ ಅತಿ ಹೆಚ್ಚಿನ ಮಂಜು ಕವಿದಿತ್ತು. ಇಲ್ಲೆಲ್ಲ ತೀರಾ ಎಚ್ಚರಿಕೆಯಿಂದ ವಾಹನಗಳನ್ನು ಮುನ್ನಡೆಸಬೇಕಾಗಿದೆ.

ಕಾಮಗಾರಿಗೆ ಆಧ್ಯತೆ
ದ. ಕ. ಘಾಟಿ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲದ ನಿರ್ವಹಣೆ ಕಾಮಗಾರಿ ಆರಂಭವಾಗಿದ್ದು ರಸ್ತೆಯ ಇಕ್ಕೆಲಗಳ ಚರಂಡಿಗಳ ಹೂಳೆತ್ತುವ ಕೆಲಸ ನಡೆಯುತ್ತಿದೆ. ಜೆಸಿಬಿ ಮೂಲಕ ಕಾಮಗಾರಿ ನಡೆಯುತ್ತಿದ್ದು ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಘಾಟಿಯ ಕೆಲವು ಭಾಗಗಳಲ್ಲಿ ರಸ್ತೆಯು ಜಾರುತ್ತಿದೆ. ರಸ್ತೆ ಬದಿಯಲ್ಲಿ ಮಣ್ಣು ಕೆಸರು ತುಂಬಿದ್ದು ಆ ಪರಿಸರಗಳಲ್ಲಿ ಕಾಮಗಾರಿ ಇನ್ನಷ್ಟೇ ನಡೆಯಬೇಕಿದೆ.

ಘಾಟಿ ಪರಿಸರದ ಮಳೆಗಾಲದ ನಿರ್ವಹಣೆ ಕಾಮಗಾರಿ ಆರಂಭಿಸಲಾಗಿದೆ ಘಾಟಿಯಲ್ಲಿ ಚರಂಡಿ ದುರಸ್ತಿ ಹಾಗೂ ಇನ್ನಿತರ ಅಗತ್ಯ ಕಾಮಗಾರಿಗಳನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ. ಘಾಟಿಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ-ಚಾರ್ಮಾಡಿ ಮಧ್ಯೆ ರಸ್ತೆ ಅಭಿವೃದ್ಧಿ ಹೊಂದುತ್ತಿದ್ದು, ಮಳೆಗಾಲಕ್ಕೆ ತೊಂದರೆಯಾಗದಂತೆ ಡಾಮರೀಕರಣ ನಡೆಸಲಾಗುತ್ತಿದೆ.
-ಶಿವಪ್ರಸಾದ್‌ ಅಜಿಲ, ಕಾರ್ಯನಿರ್ವಾಹಕ ಅಭಿಯಂತರ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.