ವಿಜಯನಗರ ಜಿಲ್ಲೆ ಉದ್ಘಾಟನೆ ವೈಭವಕ್ಕೆ ತೆರೆ
Team Udayavani, Oct 4, 2021, 5:38 AM IST
ಹೊಸಪೇಟೆ: ವಿಜಯನಗರ ಜಿಲ್ಲೆ ಉದ್ಘಾಟನೆ ಹಾಗೂ ವಿಜಯನಗರ ವೈಭವ ಉತ್ಸವಕ್ಕೆ ರವಿವಾರ ತೆರೆ ಬಿದ್ದಿತು.
ನಗರದ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಹಂಪಿ ಪ್ರಸಿದ್ಧ ಸ್ಮಾರಕಗಳನ್ನೊಳಗೊಂಡ ವಿದ್ಯಾರಣ್ಯ ವೇದಿಕೆಯಲ್ಲಿ ರವಿವಾರ ಜರಗಿದ ಸಮಾರೋಪ ಸಮಾರಂಭದಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದ ಸಿಂಗ್ ಮಾತನಾಡಿ, ಅಧಿಕಾರ ಶಾಶ್ವತ ವಲ್ಲ. ಅಧಿಕಾರದಲ್ಲಿದ್ದಾಗ ನಾವು ಮಾಡಿದ ಉತ್ತಮ ಕಾರ್ಯಗಳು ಇತಿಹಾಸದಲ್ಲಿ ಉಳಿಯುವಂತಾಗಬೇಕು. ಈ ಉದ್ದೇಶ ದಿಂದ ವಿಜಯನಗರ ಜಿಲ್ಲೆ ರಚನೆಗಾಗಿ ನಾನು ಅಧಿಕಾರ ತ್ಯಾಗ ಮಾಡಿದ್ದೆ ಎಂದರು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಮಾತನಾಡಿ, ಹೊಸ ಜಿಲ್ಲೆಯ ದೀರ್ಘ ಕಾಲದ ಕನಸನ್ನು ನನಸು ಮಾಡಿದ ಶ್ರೇಯ ಆನಂದ ಸಿಂಗ್ಗೆ ಸಲ್ಲುತ್ತದೆ ಎಂದರು.
ಸಚಿವರಾದ ಬಿ.ಸಿ.ಪಾಟೀಲ್, ಶಿವರಾಂ ಹೆಬ್ಟಾರ್, ಡಾ| ಕೆ.ಸಿ.ನಾರಾಯಣಗೌಡ, ಚಲನಚಿತ್ರ ನಟ ಅಜಯ ರಾವ್ ಮೊದಲಾದವರು ಮಾತನಾಡಿ ದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮೀಜಿ ವೀಡಿಯೋ ಸಂದೇಶದ ಮೂಲಕ ಶುಭ ಹಾರೈಸಿದರು. ಜಿಲ್ಲೆಯ ಹಿರಿಮೆ ಸಾರುವ ವಿಡಿಯೋ ಪ್ರದರ್ಶಿಸಲಾಯಿತು.
ಇದನ್ನೂ ಓದಿ:ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
ರಾಜಬೀದಿಯಲ್ಲಿ ಭವ್ಯ ಮೆರವಣಿಗೆ
ಡೊಳ್ಳು ಕುಣಿತ, ಪೂಜೆ ಕುಣಿತ, ಪಟ ಕುಣಿತ, ಕಂಸಾಳೆ ಕುಣಿತ, ಹಗಲುವೇಷಧಾರಿಗಳ ವಿಭಿನ್ನ ವೇಷ ಹಾಗೂ ಕಹಳೆ ನಾದಕ್ಕೆ ಸಾಕ್ಷಿಯಾಗಿ 101 ಜೋಡಿಗಳ ಎತ್ತಿನ ಬಂಡಿಯ ಮೆರವಣಿಗೆ ನಗರದ ರಾಜಬೀದಿಯಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ