ಹಿಜಾಬ್‌ ವಿಷಯದಲ್ಲಿ ಕೋರ್ಟ್‌ ತೀರ್ಪು ಪಾಲಿಸಿ- ಸಚಿವ ಬಿ.ಸಿ. ನಾಗೇಶ

ಆದೇಶ ಪಾಲಿಸದವರಿಗೆ ಶಾಲೆಗೆ ಪ್ರವೇಶ ಇಲ್ಲ; ಅಶಾಂತಿ ಮೂಡಿಸಲು ಕಾಂಗ್ರೆಸ್‌ ಯತ್ನ

Team Udayavani, May 29, 2022, 12:36 PM IST

13

ಕೊಪ್ಪಳ: ಶಾಲೆಗೆ ಯಾವುದೇ ಕಾರಣಕ್ಕೂ ಹಿಜಾಬ್‌ ಧರಿಸಿ ಬರಲು ಅವಕಾಶವಿಲ್ಲ. ಈ ವಿಚಾರದಲ್ಲಿ ಹೈಕೋರ್ಟ್‌ ಈಗಾಗಲೇ ತೀರ್ಪು ಕೊಟ್ಟಿದೆ. ಈ ದೇಶದ ಎಲ್ಲ ಪ್ರಜೆಗಳು ಕೋರ್ಟ್‌ ಆದೇಶ ಪಾಲನೆ ಮಾಡಬೇಕು. ಪಾಲಿಸದವರಿಗೆ ಶಾಲೆಯೊಳಗೆ ಪ್ರವೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಾಲೆಯೊಳಗೆ ಹಿಜಾಬ್‌ ಧರಿಸಿ ಪ್ರವೇಶಿಸಲು ಅವಕಾಶವಿಲ್ಲ. ಈ ದೇಶವನ್ನು ಅಶಾಂತಿಯತ್ತ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯೋಲ್ಲ. ಕೋವಿಡ್‌ನಿಂದ ಶಾಲೆಯಲ್ಲಿ ಮಕ್ಕಳ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿತ್ತು. ಅದರ ಸುಧಾರಣೆಗೆ ಒತ್ತು ಕೊಡುವ ವೇಳೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿ ಮೂಡಿಸುವ ದುರುದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ಕೋರ್ಟ್‌ ತೀರ್ಪಿನ ನಂತರವೂ ಹಿಜಾಬ್‌ ಪರವಾಗಿ ರಸ್ತೆಯಲ್ಲಿ ನಿಂತು, ಅಧಿವೇಶನದಲ್ಲಿ ನಿಂತು ವಿರೋಧ ಪಕ್ಷಗಳು ಮಾತನಾಡಿದವು. ವಿರೋಧ ಪಕ್ಷದ ರೀತಿ ನೀತಿ ಏನೆಂಬುದು ರಾಜ್ಯದ ಜನತೆಗೆ ಗೊತ್ತಿದೆ. ಶಿಕ್ಷಣ ಕಾಯ್ದೆ ವಿರುದ್ಧವೂ ಮಾತನಾಡಿದ್ದಾರೆ. ವಿರೋಧ ಪಕ್ಷಗಳು ಎಲ್ಲ ವಿಚಾರದಲ್ಲೂ ಮತ ಬ್ಯಾಂಕ್‌ ರಾಜಕೀಯ ಮಾಡಲು ಮುಂದಾಗಿವೆ ಎಂದರು.

ದೇವನೂರು ಜತೆ ಮಾತನಾಡುವೆ: ಪಠ್ಯದಿಂದ ಯಾವುದೇ ವಿಷಯವನ್ನು ತೆಗೆದಿಲ್ಲ. ಬಸವಣ್ಣ, ಭಗತ್‌ ಸಿಂಗ್‌, ನಾರಾಯಣಗುರು ಸೇರಿ ಹಲವು ಹೋರಾಟಗಾರರ ಯಾವ ವಿಷಯವನ್ನೂ ಕೈಬಿಡಲಾಗಿಲ್ಲ. ದೇವನೂರು ಮಹಾದೇವ ಒಳ್ಳೆಯ ಸಾಹಿತಿಗಳು. ತುಂಬ ತಿಳಿದವರು. ಅವರು ಬರೆದ ವಿಷಯ ಇರಲಿ ಎಂದು ಪಠ್ಯದಲ್ಲಿ ಮುದ್ರಣ ಮಾಡಿದ್ದೇವೆ. ಪಠ್ಯ ಪುಸ್ತಕ ಶೇ.90ರಷ್ಟು ಮುದ್ರಣವಾಗಿವೆ. ಈ ಬಗ್ಗೆ ದೇವನೂರು ಅವರ ಜೊತೆ ಮಾತನಾಡುವೆ ಎಂದರು.

ಬ್ರಿಟಿಷರ ಇತಿಹಾಸವನ್ನು ತೆಗೆದು ಹಾಕಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ದೇಶದಲ್ಲಿ ಸೋಲಿನ ಇತಿಹಾಸ ಬರೆಯಲಾಗಿದೆ. ಬ್ರಿಟಿಷರು ತಂದ ಪಠ್ಯ ವಿಷಯವನ್ನೇ ಕಾಂಗ್ರೆಸ್‌ನವರು ಇಟ್ಟುಕೊಂಡು ಕುಳಿತಿದ್ದರು. ದೇಶದ ಪ್ರಗತಿಗೆ ಬಿಜೆಪಿ ಜನ್ಮ ತಾಳಿದೆ. ಬಿಜೆಪಿ ಬಂದ ಮೇಲೆ ದೇಶದಲ್ಲಿ ಬದಲಾವಣೆಯಾಗುತ್ತದೆ ಎಂದು ದೇವನೂರು ಮಹಾದೇವ ಅವರೇ ಬರೆದಿದ್ದಾರೆ.

ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ರಸ್ತೆ ಸೇರಿ ಹಲವು ಅಭಿವೃದ್ಧಿ ನಡೆದಿದೆ. ನಾವು ಹೊರಟಿರೋದೇ ಪರಿವರ್ತನೆ ಮಾಡಲು ಎಂದರು. ಶಾಲೆಯಲ್ಲಿ ಪಠ್ಯ ಆರಂಭಿಸಲು ಇನ್ನೊಂದು ತಿಂಗಳು ಆಗುತ್ತೆ. ಶೇ. 90ರಷ್ಟು ಪಠ್ಯಪುಸ್ತಕ ಸಿದ್ಧವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಬಿಇಒ ಕಚೇರಿಗೆ ಪೂರೈಕೆಯಾಗಲಿವೆ. ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳಿಗೆ ಏನು ಬೇಕೋ ಆ ತರದ ಶಿಕ್ಷಣ ಕೊಡುತ್ತೇವೆ ಎಂದಿದ್ದೇವೆ. ಅದರಂತೆ ಜಾರಿ ಮಾಡುತ್ತೇವೆ ಎಂದರು.

ಆರ್‌ಎಸ್‌ಎಸ್‌ನವರು ಭಾರತದವರಲ್ಲ ಎನ್ನುವ ಸಿದ್ದರಾಮಯ್ಯರಿಗೆ 70 ವರ್ಷ ವಯಸ್ಸಾಗಿದೆ ಎಂದುಕೊಂಡಿದ್ದೆ. ಆದರೆ 74 ವರ್ಷವಾಗಿದೆ ಎಂದು ಈಗ ತಾನೇ ಕೇಳಿದ್ದೇನೆ. ಹಿರಿಯರು, ಅನುಭವಿಗಳು, ಅವರ ಬಗ್ಗೆ ಏನು ಹೇಳ್ಳೋಣ ಎಂದೇ ತಿಳಿಯುತ್ತಿಲ್ಲ. ಈ ದೇಶದ ವಿಜ್ಞಾನಿಗಳೇ ಕಟ್ಟಕಡೆಯ ಡಿಎನ್‌ಎ ಟೆಸ್ಟ್‌ ಮಾಡಿ, ಇದು ಕಾಮನ್‌ ಡಿಎನ್‌ಎ ಇದೆ ಎಂದು ಹೇಳಿದ್ದಾರೆ. ವಿಜ್ಞಾನಿಗಳಿಗೆ ಇದು ಅರ್ಥವಾಗುತ್ತದೆ.ಆದರೆ ಇವರಿಗೆ ಆಗುತ್ತಿಲ್ಲ ಎಂದರು.

ನೆಹರು ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ. ನರೇಂದ್ರ ಮೋದಿ ಅವರು ಪ್ರಪಂಚ ಮಟ್ಟಕ್ಕೆ ಹೋಗಿದ್ದಾರೆ. ನೆಹರು ಕೇವಲ ರಾಷ್ಟ್ರಮಟ್ಟದಲ್ಲಿದ್ದರು. ಅವರನ್ನು ಇವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಆರ್‌ಎಸ್‌ ಎಸ್‌ ಇಟಲಿ ಮೂಲದ್ದಲ್ಲ ಎಂದು ಕುಟುಕಿದರು.

ಈ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸುವುದರಲ್ಲಿ ಯಡವಟ್ಟಾಗಿದೆ ಎಂದೆನಿಸಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಗ್ರಾಮಗಳಿಂದ ಭಾಗಿಯಾಗಿದ್ದಾರೆ. ಅವುಗಳನ್ನು ಈಗ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್‌ ರಾಷ್ಟ್ರೀಯತೆ, ಹಿಂದುತ್ವ ಸಹಿಸಲ್ಲ. ಹೀಗಾಗಿ ಇದೀಗ ಪಠ್ಯ ಪುಸ್ತಕ ವಿಚಾರದಲ್ಲೂ ವಿವಾದ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಗೆ ಏನೂ ವಿಷಯ ಇರದಿದ್ದರೆ ಜಾತಿ ಬಗ್ಗೆ ಮಾತಾಡ್ತಾರೆ. ಈ ದೇಶದ ಜನತೆಗೆ ಯಾವುದು ನಿಜ, ಯಾವುದು ಸುಳ್ಳು ಎನ್ನುವುದು ಗೊತ್ತಿದೆ. ಜನತೆಗೆ ಸುಳ್ಳು ಹೇಳಿ ಹಿಂದೂ ಸಮಾಜ ಒಡೆಯುವ ಕೆಲಸ ನಡೆದಿದೆ. ಬ್ರಿಟಿಷರಿಂದ ಅಧಿಕಾರ ವಹಿಸಿಕೊಂಡ ಬಳಿಕ ಕಾಂಗ್ರೆಸ್‌ ಇದನ್ನೇ ಮಾಡುತ್ತಿದೆ. –ಬಿ.ಸಿ. ನಾಗೇಶ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.