![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ
ಮಾಧ್ಯಮ ಸಂವಾದ
Team Udayavani, May 25, 2024, 12:12 AM IST
![ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ](https://www.udayavani.com/wp-content/uploads/2024/05/Forest-department-620x298.jpg)
ಮಂಗಳೂರು: ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು, ಅಂಗನವಾಡಿ, ಮೆಸ್ಕಾಂ, ಲೋಕೋಪಯೋಗಿ ಇಲಾಖೆ ಅಪಾಯಕಾರಿ ಮರಗಳ ಪಟ್ಟಿಮಾಡಿ ನೀಡಿದ್ದು, ಸುಮಾರು 2 ಸಾವಿರ ಅಪಾಯಕಾರಿ ಮರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ತೀರಾ ಅಗತ್ಯ ಎನ್ನುವ ಮರಗಳ ತೆರವಿಗೆ ಆದ್ಯತೆ ನೀರುವುದರೊಂದಿಗೆ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ಅರಣ್ಯ ಇಲಾಖೆ ವತಿಯಿಂದ ನಡೆಯಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.
ಮುಂಗಾರು ಎದುರಿಸಲು ಇಲಾಖೆ ಸಜ್ಜಾಗಿದೆ. ಈ ಬಾರಿ ತಾಲೂಕಿಗೆ ಒಬ್ಬರಂತೆ ಸಿಬಂದಿಯನ್ನು ತಾಲೂಕು ಮಟ್ಟದ ವಿಕೋಪ ನಿರ್ವಹಣ ಕಚೇರಿಯಲ್ಲಿ ನಿಯೋಜಿಸಲಾಗುವುದು. ಇದರಿಂದ ಮರ ಧರೆಗೆ ಉರುಳುವುದು, ಕೊಂಬೆಗಳು ಮುರಿದು ಬೀಳುವುದು ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರವಾಗಿ ಸಂಬಂಧಪಟ್ಟವರಿಗೆ ರವಾನಿಸಲು ನೆರವಾಗಲಿದೆ ಎಂದರು.
ಆನೆ ದಾಳಿ ತಡೆಗೆ ಕ್ರಮ
ಆನೆಗಳು ಊರಿಗೆ ಬರದಂತೆ ತಡೆಯುವ ನಿಟ್ಟಿನಲ್ಲಿ ಸೋಲಾರ್ ಬೇಲಿ, ಆನೆ ಕಂದಕ ನಿರ್ಮಾಣ ಮೊದಲಾದ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ರಸ್ತೆ ಮೊದಲಾದ ಕಾಮಗಾರಿಯ ಸಂದರ್ಭದಲ್ಲಿ ಆನೆಗಳ ಪಥ ಬದಲಾದರೆ ಅವು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ. ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ. 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ 1.4 ಕೋ.ರೂ. ಪರಿಹಾರ ನೀಡಲಾಗಿದೆ ಎಂದರು.
5 ಲಕ್ಷ ಗಿಡ ನಾಟಿ
2024-25ನೇ ಸಾಲಿನಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಇದರಲ್ಲಿ ಈ ಸಾಲಿನಲ್ಲಿ ರೈತರಿಗೆ 1.63 ಲಕ್ಷ ಗಿಡಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 3 ರೂ. ಮತ್ತು 7 ರೂ. ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದೆ. ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ ಎಂದರು.
1.70 ಲಕ್ಷ ಮರ ತೆರವು
ವಿವಿಧ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾಗುತ್ತದೆ. ಕಳೆದ ವರ್ಷ ಈ ರೀತಿ 1.70 ಲಕ್ಷ ಮರಗಳನ್ನು ತೆರವುಗೊಳಿಸ ಬೇಕಾಯಿತು. ಆದರೂ ಶೇ.33ರಷ್ಟು ಅರಣ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಸಹಾಯಕ ಅರಣ್ಯ ಸಂರಕ್ಷಣಾ ಕಾರಿ ಶ್ರೀಧರ್, ಅಕ್ಷಯ್ ಪ್ರಕಾಶ್ಕರ್, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.
ಕೆಪಿಟಿ-ನಂತೂರು ಕಾಮಗಾರಿ
ವಿಳಂಬಕ್ಕೆ ಅರಣ್ಯ ಇಲಾಖೆ ಕಾರಣವಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಮತ್ತು ನಂತೂರು ಜಂಕ್ಷನ್ ಫ್ಲೆ$çಓವರ್ ಕಾಮಗಾರಿ ವಿಳಂಬವಾಗಿರುವುದರಲ್ಲಿ ಅರಣ್ಯ ಇಲಾಖೆಯ ಯಾವುದೇ ಪಾತ್ರವಿಲ್ಲ. 8 ತಿಂಗಳ ಹಿಂದೆಯೇ ಸಾರ್ವಜನಿಕರು, ಪರಿಸರವಾದಿಗಳಿಂದ ಅಹವಾಲು ಸ್ವೀಕರಿಸಿ ಕೆಪಿಟಿಯಿಂದ ಪದವು ವರೆಗೆ ಮರಗಳನ್ನು ತೆರವುಗೊಳಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಕಡೆಯಿಂದ ಯಾವುದೋ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ ಎಂದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.