ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮಾಧ್ಯಮ ಸಂವಾದ

Team Udayavani, May 25, 2024, 12:12 AM IST

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮಂಗಳೂರು: ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು, ಅಂಗನವಾಡಿ, ಮೆಸ್ಕಾಂ, ಲೋಕೋಪಯೋಗಿ ಇಲಾಖೆ ಅಪಾಯಕಾರಿ ಮರಗಳ ಪಟ್ಟಿಮಾಡಿ ನೀಡಿದ್ದು, ಸುಮಾರು 2 ಸಾವಿರ ಅಪಾಯಕಾರಿ ಮರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ತೀರಾ ಅಗತ್ಯ ಎನ್ನುವ ಮರಗಳ ತೆರವಿಗೆ ಆದ್ಯತೆ ನೀರುವುದರೊಂದಿಗೆ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ಅರಣ್ಯ ಇಲಾಖೆ ವತಿಯಿಂದ ನಡೆಯಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ಮುಂಗಾರು ಎದುರಿಸಲು ಇಲಾಖೆ ಸಜ್ಜಾಗಿದೆ. ಈ ಬಾರಿ ತಾಲೂಕಿಗೆ ಒಬ್ಬರಂತೆ ಸಿಬಂದಿಯನ್ನು ತಾಲೂಕು ಮಟ್ಟದ ವಿಕೋಪ ನಿರ್ವಹಣ ಕಚೇರಿಯಲ್ಲಿ ನಿಯೋಜಿಸಲಾಗುವುದು. ಇದರಿಂದ ಮರ ಧರೆಗೆ ಉರುಳುವುದು, ಕೊಂಬೆಗಳು ಮುರಿದು ಬೀಳುವುದು ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರವಾಗಿ ಸಂಬಂಧಪಟ್ಟವರಿಗೆ ರವಾನಿಸಲು ನೆರವಾಗಲಿದೆ ಎಂದರು.

ಆನೆ ದಾಳಿ ತಡೆಗೆ ಕ್ರಮ
ಆನೆಗಳು ಊರಿಗೆ ಬರದಂತೆ ತಡೆಯುವ ನಿಟ್ಟಿನಲ್ಲಿ ಸೋಲಾರ್‌ ಬೇಲಿ, ಆನೆ ಕಂದಕ ನಿರ್ಮಾಣ ಮೊದಲಾದ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ರಸ್ತೆ ಮೊದಲಾದ ಕಾಮಗಾರಿಯ ಸಂದರ್ಭದಲ್ಲಿ ಆನೆಗಳ ಪಥ ಬದಲಾದರೆ ಅವು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ. ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ. 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ 1.4 ಕೋ.ರೂ. ಪರಿಹಾರ ನೀಡಲಾಗಿದೆ ಎಂದರು.

5 ಲಕ್ಷ ಗಿಡ ನಾಟಿ
2024-25ನೇ ಸಾಲಿನಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಇದರಲ್ಲಿ ಈ ಸಾಲಿನಲ್ಲಿ ರೈತರಿಗೆ 1.63 ಲಕ್ಷ ಗಿಡಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 3 ರೂ. ಮತ್ತು 7 ರೂ. ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದೆ. ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ ಎಂದರು.

1.70 ಲಕ್ಷ ಮರ ತೆರವು
ವಿವಿಧ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾಗುತ್ತದೆ. ಕಳೆದ ವರ್ಷ ಈ ರೀತಿ 1.70 ಲಕ್ಷ ಮರಗಳನ್ನು ತೆರವುಗೊಳಿಸ ಬೇಕಾಯಿತು. ಆದರೂ ಶೇ.33ರಷ್ಟು ಅರಣ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಹಾಯಕ ಅರಣ್ಯ ಸಂರಕ್ಷಣಾ ಕಾರಿ ಶ್ರೀಧರ್‌, ಅಕ್ಷಯ್‌ ಪ್ರಕಾಶ್ಕರ್‌, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ ಉಪಸ್ಥಿತರಿದ್ದರು.

ಕೆಪಿಟಿ-ನಂತೂರು ಕಾಮಗಾರಿ
ವಿಳಂಬಕ್ಕೆ ಅರಣ್ಯ ಇಲಾಖೆ ಕಾರಣವಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಮತ್ತು ನಂತೂರು ಜಂಕ್ಷನ್‌ ಫ್ಲೆ$çಓವರ್‌ ಕಾಮಗಾರಿ ವಿಳಂಬವಾಗಿರುವುದರಲ್ಲಿ ಅರಣ್ಯ ಇಲಾಖೆಯ ಯಾವುದೇ ಪಾತ್ರವಿಲ್ಲ. 8 ತಿಂಗಳ ಹಿಂದೆಯೇ ಸಾರ್ವಜನಿಕರು, ಪರಿಸರವಾದಿಗಳಿಂದ ಅಹವಾಲು ಸ್ವೀಕರಿಸಿ ಕೆಪಿಟಿಯಿಂದ ಪದವು ವರೆಗೆ ಮರಗಳನ್ನು ತೆರವುಗೊಳಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಕಡೆಯಿಂದ ಯಾವುದೋ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ ಎಂದರು.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.