ಸಾವಿರ ಕಿ.ಮೀ. ಬೆಂಕಿ ರೇಖೆ ನಿರ್ಮಾಣ, 140 ಸಿಬಂದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ರಕ್ಷಣೆಗೆ ಅರಣ್ಯ ಇಲಾಖೆ ಸನ್ನದ್ಧ

Team Udayavani, Jan 16, 2022, 6:15 AM IST

ಸಾವಿರ ಕಿ.ಮೀ. ಬೆಂಕಿ ರೇಖೆ ನಿರ್ಮಾಣ, 140 ಸಿಬಂದಿ

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನಗಳಲ್ಲಿ ಪ್ರತೀ ಜನವರಿಯಿಂದ ಎಪ್ರಿಲ್‌ ಅವಧಿಯಲ್ಲಿ ಕಾಳ್ಗಿಚ್ಚು ಹಬ್ಬಿ ಅರಣ್ಯ ಮತ್ತು ಪ್ರಾಣಿ, ಪಕ್ಷಿ ಸಂಕುಲದ ಹಾನಿಗೆ ಕಾರಣವಾಗುತ್ತಿದ್ದು, ಈ ಬಾರಿ ಅರಣ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ ಆರಂಭದಲ್ಲೇ ಕುದುರೆಮುಖ, ಸೋಮೇಶ್ವರ, ಮೂಕಾಂಬಿಕಾ ಉದ್ಯಾನವನದ ಅಂಚಿನಲ್ಲಿ 900ರಿಂದ 1,000 ಕಿ.ಮೀ. ಉದ್ದಕೆ ಬೆಂಕಿ ರೇಖೆ (ಫೈರ್‌ಲೈನ್‌) ನಿರ್ಮಿಸುತ್ತಿದೆ.

ಬೆಂಕಿ ತಡೆಗೆ 35 ಕ್ಯಾಂಪ್‌
ಕಾರ್ಕಳ, ಉಡುಪಿ, ಚಿಕ್ಕಮಗಳೂರು ವಿಭಾಗಕ್ಕೆ ಒಳಪಟ್ಟಂತೆ ಮೂಕಾಂಬಿಕಾ ವನ್ಯಜೀವಿ ಅಭಯಾ ಆರಣ್ಯ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ 1,000 ಕಿ.ಮೀ. ಪ್ರದೇಶದಲ್ಲಿ 35 ಕ್ಯಾಂಪ್‌ ರಚಿಸಿ ಪ್ರತೀ ಕ್ಯಾಂಪ್‌ಗೆ ನಾಲ್ವರಂತೆ ಒಟ್ಟು 140 ಸಿಬಂದಿಯನ್ನುನಿಯೋಜಿಸಲಾಗಿದೆ. ಅವರು ಜನವರಿಯಿಂದ ಎಪ್ರಿಲ್‌ ವರೆಗೆ ನಿಗಾ ವಹಿಸುತ್ತಾರೆ.

ಬಂಡೀಪುರ ದುರ್ಘ‌ಟನೆ
ಬಂಡೀಪುರದಲ್ಲಿ 2019ರಲ್ಲಿ ಕಾಳ್ಗಿಚ್ಚಿನಿಂದ 11 ಸಾವಿರ ಎಕ್ರೆಗೂ ಹೆಚ್ಚು ಅರಣ್ಯ ಸುಟ್ಟು ಹೋಗಿತ್ತು. ಎಚ್ಚೆತ್ತುಕೊಂಡ ಇಲಾಖೆ ಕಳೆದ ವರ್ಷ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿತ್ತು. ಇದರಿಂದಾಗಿ ಬಂಡೀಪುರ ಸಹಿತ ಇತರ ಎಲ್ಲೂ ದೊಡ್ಡಮಟ್ಟದ ಕಾಳಿYಚ್ಚು ಕಂಡು ಬಂದಿರಲಿಲ್ಲ.

ಇದನ್ನೂ ಓದಿ:ಚಾಲಕನಿಗೆ ಪೀಡ್ಸ್‌ ; ಬರೋಬ್ಬರಿ 10ಕಿ.ಮೀ. ಬಸ್ ಚಲಾಯಿಸಿದ ಪ್ರಯಾಣಿಕ ಮಹಿಳೆ! ವಿಡಿಯೋ ವೈರಲ್‌

ಕುದುರೆಮುಖ ರಾ. ಉದ್ಯಾನವನ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಅತ್ಯಪರೂಪದ ಹುಲ್ಲುಗಾವಲುಗಳಿದ್ದು ಶೋಲಾ ಕಾಡುಗಳು ಆವರಿಸಿವೆ. ವಿಶೇಷ ಪ್ರಬೇಧಗಳ ಸರೀಸೃಪಗಳು, ಸಸ್ಯರಾಶಿ, ಪ್ರಾಣಿ ಪಕ್ಷಿಗಳ ಆವಾಸ ಸ್ಥಾನವಾಗಿರುವುದರಿಂದ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಕುದುರೆಮುಖ ಉದ್ಯಾನವನ ವ್ಯಾಪ್ತಿಯ ಕಾರ್ಕಳ ವಿಭಾಗದಲ್ಲಿ ಚಾರ್ಮಾಡಿ ಯಿಂದ ನಾರಾವಿ ವರೆಗೆ, ಉಡುಪಿ ವಿಭಾಗದಲ್ಲಿ ಈದು-ಕೊಲ್ಲೂರು, ಕೊಡಚಾದ್ರಿ ವರೆಗೆ, ಚಿಕ್ಕಮಗಳೂರು ವಿಭಾಗದ ಕುದುರೆಮುಖದಿಂದ ಕೆರೆಕಟ್ಟೆ ವರೆಗೆ ಒಟ್ಟು 125 ಕಿ.ಮೀ. ಬೆಂಕಿ ರೇಖೆ ನಿರ್ಮಿಸುತ್ತಿದೆ. ಸಂಸೆಯ ಎಳನೀರು, ದಿಡುಪೆಯ ಮಲ್ಲ, ಸವಣಾಲು, ಗುಂಡಲ್‌ ಪಾದೆ, ಮಲೆಕ್ಕಿಲದಲ್ಲಿ ಫೈರ್‌ ಕ್ಯಾಂಪ್‌ ರಚಿಸಿ 25 ಕಾವಲುಗಾರರನ್ನು ನಿಯೋಜಿಸಲಾಗಿದೆ.

ಏನಿದು ಬೆಂಕಿ ರೇಖೆ ?
ಕಾಳ್ಗಿಚ್ಚು ಸಂಭವಿಸಬಹುದಾದ ಪ್ರದೇಶಗಳ ಅರಣ್ಯದಂಚಿನಲ್ಲಿ ನಿರ್ದಿಷ್ಟ ಅಗಲಕೆ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸಿ ಬೆಂಕಿ ವ್ಯಾಪಿಸದಂತೆ ತಡೆಯುವುದೇ ಬೆಂಕಿ ರೇಖೆ.

ಕಾಳ್ಗಿಚ್ಚು ತಪ್ಪಿಸಲು ಇಲಾಖೆಯು ಬೆಂಕಿ ರೇಖೆ ನಿರ್ಮಿಸುವುದಲ್ಲದೆ ಕಾವಲುಗಾರರನ್ನೂ ಇರಿಸಿದೆ.
ಆದರೂ ಕಾಳ್ಗಿಚ್ಚಿನ ವಿಚಾರದಲ್ಲಿ ಸ್ಥಳೀಯರು ಮತ್ತು ಪ್ರವಾಸಿಗರ ಮುತುವರ್ಜಿ ಅತ್ಯಗತ್ಯ.
– ರುದ್ರೇನ್‌ ಪಿ., ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.