ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ


Team Udayavani, Oct 21, 2021, 4:28 PM IST

23

ಸಿಂದಗಿ: ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಕೈಗೆ ಬಂದ ಬೆಳೆಗಳು ಒಣಗುತ್ತಿವೆ. ವಿದ್ಯುತ್ ನೀಡಿ ಇಲ್ಲವೆ, ಕ್ರೀಮಿನಾಶಕ ಸೇವಿಸಿ ಕಚೇರಿ ಎದುರು ಸಾಯುತ್ತೇವೆ ಎಂದು ತಾಲೂಕಿನ ಬ್ಯಾಕೋಡ, ಬನ್ನೆಟ್ಟಿ ಪಿ.ಎ. ಗ್ರಾಮದ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು, ಕೈಯಲ್ಲಿ ಕ್ರೀಮಿನಾಶಕ ಬಾಟಲ್ ಹಿಡಿದು ಗುರುವಾರ ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮಾರ್ಗವಾಗಿ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಚುನಾವಣೆ ಇದೆ, ಯಾವುದೇ ಪ್ರತಿಭಟನೆ ಮಾಡಬೇಡಿ, ನಿಮ್ಮ ಮನವಿಯನ್ನು ಅಧಿಕಾರಿಗಳಿಗೆ ನೀಡಿ ಎಂದು ಪೊಲೀಸರು ಪ್ರತಿಭಟನಾ ನಿರತ ರೈತರಿಗೆ ಮನವರಿಕೆ ಮಾಡಿದರೂ, ರೈತರು ಪ್ರತಿಭಟನೆ ಮುಂದುವೆರೆಸಿದರು.

ಇದನ್ನೂ ಓದಿ: ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ತಾಲೂಕಿನ ಬ್ಯಾಕೋಡ, ಬನ್ನಟ್ಟಿ ಪಿ.ಎ ಗ್ರಾಮ ಹೊಲಗಳಿಗೆ ಕಳೆದ 8 ದಿನಗಳಿಂದ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. 350 ವೋಲ್ಟೆಜ್ ವಿದ್ಯುತ್ ನೀಡುವ ಬದಲಾಗಿ 150ಕ್ಕಿಂತ ಕಡಿಮೆ ವೋಲ್ಟೆಜ್ ವಿದ್ಯುತ್ ನೀಡಲಾಗುತ್ತಿದೆ. ವಿದ್ಯುತ್ ಸರಬರಾಜು ಮಾಡುವ ವಯರ್ ಹಿಡಿದರೂ ಸಾಯುವುದಿಲ್ಲ. ಅಷ್ಟು ಕಳಪೆ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಜಮೀನುಗಳಲ್ಲಿನ ಬಾವಿ, ಕೊಳವೆ ಬಾವಿಗಳ ಮೋಟರ್‌ಗಳು ಹೇಗೆ ಪ್ರಾರಂಭವಾಗುತ್ತವೆ. 8 ದಿನಗಳಿಂದ ವಿದ್ಯುತ್ ನೀಡದೇ ಇರುವುದರಿಂದ ಬೆಳೆದ ಬೆಳೆಗೆ ನೀರು ಬಿಡಲಾಗದೆ ಬೆಳೆಗಳು ಒಣಗುತ್ತಿವೆ.  ನಮಗೆ ವಿದ್ಯುತ್ ನೀಡಿ ಇಲ್ಲವೇ ವಿಷ ಕುಡಿಯಲು ಅನುಮತಿ ನೀಡಿ. ದಿನಾ ಸಾಯುವ ಬದಲು ನಿಮ್ಮ ಕಚೇರಿ ಮುಂದೆ ಕ್ರೀಮಿನಾಶಕ ಕುಡಿದು ಸಾಯುತ್ತೇವೆ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಕೋಡ ಮತ್ತು ಬನ್ನೆಟ್ಟಿ ಪಿ.ಎ. ಗ್ರಾಮದ ರೈತರಾದ ನಾನಾಗೌಡ ಬಿರಾದಾರ, ಶಂಕರಗೌಡ ಪಾಟೀಲ, ಐಯ್ಯನಗೌಡ ಬಿರಾದಾರ, ವಿಶ್ವನಾಥ ರೆಡ್ಡಿ, ಲಕ್ಷ್ಮಣ ಚಲವಾದಿ, ಆನಂದ ಹರನಾಳ, ಗೌಡಪ್ಪಗೌಡ ಬಿರಾದಾರ, ಮದನಗೋಪಾಲ ಸಾಲೋಟಗಿ, ವಿಶ್ವನಾಥ ರೆಡ್ಡಿ, ಮಲ್ಲನಗೌಡ ಮೇಲಿನಮನಿ, ಮುನ್ನಾ ವಾಲಿಕಾರ, ಮುತ್ತಣ್ಣ ಪೂಜಾರಿ, ಗುರೆಡ್ಡಿ ಬಿರಾದಾರ ಸೇರಿದಂತೆ ನೂರಾರು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

 

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.