ಬೈಕ್ ಢಿಕ್ಕಿ: ಉದ್ಯಮಿ ಪ್ರಭಾಕರ ಕಾಮತ್ಗೆ ಗಾಯ
Team Udayavani, Oct 29, 2021, 10:20 PM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಐಡಿಯಲ್ ಐಸ್ಕ್ರೀಂ ಸಂಸ್ಥೆಯ ಸ್ಥಾಪಕ ಎಸ್. ಪ್ರಭಾಕರ ಕಾಮತ್ ಯಾನೆ ಪಬ್ಟಾ ಮಾಮ್ (79) ಅವರು ಗಾಯಗೊಂಡಿದ್ದಾರೆ.
ಪ್ರಭಾಕರ ಕಾಮತ್ ಅವರು ಗುರುವಾರ ರಾತ್ರಿ 8.45ರ ಸುಮಾರಿಗೆ ಬಿಜೈ ಕಾಪಿಕಾಡ್ನ 1ನೇ ಅಡ್ಡರಸ್ತೆಯಲ್ಲಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೆಎಸ್ಆರ್ಟಿಸಿ ಕಡೆಯಿಂದ ಬಿಜೈ ಕಾಪಿಕಾಡ್ ಕಡೆಗೆ ಅತಿ ವೇಗದಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾಮತ್ ಅವರು ರಸ್ತೆಗೆ ಬಿದ್ದು ಎಡಕಣ್ಣಿನ ಹುಬ್ಬು, ಮೂಗು ಮತ್ತು ಕೈಗಳಿಗೆ ಗಾಯವಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮತ್ ಅವರು ನಗರದ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!