ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ಹಣ ಮರಳಿಸಿ ವಿದ್ಯಾರ್ಥಿನಿಯರ ಪ್ರಾಮಾಣಿಕತೆ
Team Udayavani, Jan 6, 2022, 5:09 PM IST
ಕುಂದಾಪುರ : ತಾಲ್ಲೂಕಿನ ಕೋಣಿ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ರೂಪಾಯಿ ಹತ್ತು ಸಾವಿರ ಮೊತ್ತವನ್ನು ಕೋಣಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ಕಳೆದುಕೊಂಡವರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪ್ರೌಢ ಶಾಲಾ ಸಮೀಪ ರಸ್ತೆಯಲ್ಲಿ ಸಿಕ್ಕಿದ ಹಣವನ್ನು ಕುಮಾರಿ ಶ್ರಾವ್ಯಾ,ಐಶ್ವರ್ಯಾ ಜೆ, ಪ್ರಸ್ತುತಿ ಮತ್ತು ವೈಷ್ಣವಿ ಅವರು ಕೂಡಲೇ ಶಾಲೆಯ ಮುಖ್ಯ ಶಿಕ್ಷಕರಿಗೆ ತಂದು ನೀಡಿದ್ದಾರೆ.
ವಿದ್ಯಾರ್ಥಿಗಳು ತೋರಿದ ಒಳ್ಳೆಯ ಗುಣದಿಂದ ಹರ್ಷಗೊಂಡ ಮುಖ್ಯ ಶಿಕ್ಷಕರು ಈ ವಿಚಾರವನ್ನು ವಾಟ್ಸಾಪ್ನಲ್ಲಿ ವೈರಲ್ ಮಾಡಿದ್ದಾರೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅದೇ ಗ್ರಾಮದ ಸುಲೇಖಾ ಎಂಬುವರಿಗೆ ಸೇರಿದ ಹಣ ಇದಾಗಿತ್ತು.
ಹಣ ಕಳೆದುಕೊಂಡಿದ್ದ ಕುಮಾರಿ ಸುಲೇಖಾ ಅವರಿಗೆ ಶಾಲೆಯಲ್ಲಿ ಹಸ್ತಾಂತರಿಸಿ ವಿದ್ಯಾರ್ಥಿನಿಯರು ಭಾರಿ ಮೆಚ್ಚುಗೆಗೆ ಭಾಜನರಾದರು.
ಹಣ ಪಡೆದುಕೊಂಡ ಬಳಿಕ ಸುಲೇಖಾ ಎಲ್ಲಾ ವಿದ್ಯಾರ್ಥಿಗಳಗೆ ಸಿಹಿ ವಿತರಿಸಿ ಧನ್ಯವಾದ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!