France: ಭಾರತದ ವಿದ್ಯಾರ್ಥಿಗಳ ವೀಸಾ ಪ್ರಕ್ರಿಯೆ ಸರಳಗೊಳಿಸಲು ಕ್ರಮ: ಮ್ಯಾಕ್ರನ್‌

ವಿದ್ಯಾರ್ಥಿಗಳಿಗೆ ಫ್ರಾನ್ಸ್‌ ಅಧ್ಯಕ್ಷರ ಆಹ್ವಾನ

Team Udayavani, Jan 27, 2024, 12:30 AM IST

modi france prez

ಹೊಸದಿಲ್ಲಿ: 2030ರ ಒಳಗೆ ಭಾರತದ 30 ಸಾವಿರ ವಿದ್ಯಾರ್ಥಿಗಳನ್ನು ಫ್ರಾನ್ಸ್‌ ಸ್ವಾಗತಿಸುವ ಗುರಿ ಹೊಂದಿದೆ ಎಂದು ಗುರಿ ಹೊಂದಿದೆ ಎಂದು ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುವಲ್‌ ಮ್ಯಾಕ್ರನ್‌ ಹೇಳಿದ್ದಾರೆ. ಈ ಮೂಲಕ ದೇಶದ ವಿದ್ಯಾರ್ಥಿಗಳಿಗೆ ಫ್ರಾನ್ಸ್‌ ಅಧ್ಯಕ್ಷರು ಆಹ್ವಾನ ನೀಡಿದ್ದಾರೆ.

ಜೈಪುರದಲ್ಲಿ ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ಜತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಈ ಅಂಶವನ್ನು ತಿಳಿಸಿದ್ದಾರೆ. ಜತೆಗೆ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿಕೊಂಡಿದ್ದಾರೆ. ಕ್ಯೂಎಸ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 35, ಟೈಮ್‌ ಹೈಯರ್‌ ಎಜುಕೇಶನ್‌ ರ್‍ಯಾಂಕಿಂಗ್‌ನಲ್ಲಿ 15 ಶ್ರೇಯಾಂಕ ಪಡೆದ ವಿವಿಗಳಿವೆ. ಫ್ರಾನ್ಸ್‌, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವದ ಅಚ್ಚುಮೆಚ್ಚಿನ ದೇಶಗಳಲ್ಲಿ ಒಂದಾಗಿದೆ. ಅತೀ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ, ತರಬೇತಿಯನ್ನು ನೀಡುವ ವಿಶ್ವದರ್ಜೆಯ ವಿ.ವಿ.ಗಳು ಫ್ರಾನ್ಸ್‌ನಲ್ಲಿವೆ. ಆದರೆ ಭಾಷೆ ವಿದೇಶಿ ವಿದ್ಯಾರ್ಥಿಗಳಿಗೆ ಬಲುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇದನ್ನು ಬಗೆಹರಿಸಲು ಇಲ್ಲಿನ ಪಬ್ಲಿಕ್‌ ಸ್ಕೂಲ್‌ಗ‌ಳಲ್ಲಿ ಫ್ರೆಂಚ್‌ ಭಾಷೆಯನ್ನು ಕಲಿಸಲು, ಫ್ರಾನ್ಸ್‌ನ ವಿವಿಗಳಲ್ಲಿ ಶಿಕ್ಷಣ ಪಡೆಯುವವರಿಗೆ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ನೀಡಲು ಫ್ರಾನ್ಸ್‌ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ವೀಸಾ ಪ್ರಕ್ರಿಯೆ ಸುಲಭ: ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಪ್ರಕ್ರಿಯೆಯನ್ನು ಸುಲಭ ಗೊಳಿಸುತ್ತಿದ್ದೇವೆ. ಪರಸ್ಪರ ಸಹಕಾರ, ನಂಬಿಕೆಯಿಂದ ನಾವು ನಮ್ಮ ಗುರಿಯನ್ನು ಸಾಧಿಸಲಿದ್ದೇವೆ ಎಂದು ಮ್ಯಾಕ್ರನ್‌ ಹೇಳಿದ್ದಾರೆ.

ಟಾಟಾ- ಏರ್‌ಬಸ್‌ ಒಪ್ಪಂದ: ಟಾಟಾ ಮತ್ತು ಏರ್‌ಬಸ್‌ ಸ್ವದೇಶಿ ಸಾಧನ, ಉಪಕರಣಗಳೊಂದಿಗೆ ಎಚ್‌ 125 ಹೆಲಿಕಾಪ್ಟರ್‌ ತಯಾರಿಕ ಘಟಕವನ್ನು ಆರಂಭಿ ಸಲು ಫ್ರಾನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ ಕ್ವಾಟ್ರಾ ಹೇಳಿದ್ದಾರೆ. ಉಭಯ ನಾಯಕರ ಮಾತುಕತೆ ವಿವರ ನೀಡಿದ ಅವರು, ರಕ್ಷಣ ಕೈಗಾರಿಕ ಪಾಲು ದಾರಿಕೆಗೆ ಮಾರ್ಗಸೂಚಿಯನ್ನು ಅಂತಿಮಗೊಳಿಸಿದೆ. ಮುಂದಿನ ದಿನಗಳಲ್ಲಿ ಫ್ರಾನ್ಸ್‌ ಭಾರತಕ್ಕೆ ರಕ್ಷಣ ಕ್ಷೇತ್ರದಲ್ಲಿ ಹಾರ್ಡ್‌ವೇರ್‌ ಉತ್ಪಾದನೆಯಲ್ಲಿ ಸಹಕಾರ ನೀಡಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾಟ್ರಾ ತಿಳಿಸಿದರು.

ಅತೀದೊಡ್ಡ ಗೌರವ ಸಿಕ್ಕಿದೆ: ಮ್ಯಾಕ್ರನ್‌
75ನೇ ಗಣರಾಜ್ಯೋತ್ಸವಕ್ಕೆ ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್‌ ಮ್ಯಾಕ್ರನ್‌ ಶುಕ್ರವಾರ ಕರ್ತವ್ಯಪಥದಲ್ಲಿ ನಡೆದ ಅದ್ದೂರಿ ಸಂಭ್ರಮಾಚರಣೆಯನ್ನು ಕಣ್ತುಂಬಿಕೊಂಡಿದ್ದಾರೆ. ಜತೆಗೆ ಕೃತಜ್ಞತೆಯನ್ನೂ ವ್ಯಕ್ತಪಡಿಸಿದ್ದಾರೆ. ಆತ್ಮೀಯ ಸ್ನೇಹಿತರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಭಾರತದ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು. ಆಹ್ವಾನದ ಮೂಲಕ ಫ್ರಾನ್ಸ್‌ಗೆ ನೀಡಿರುವ ಈ ಬಹುದೊಡ್ಡ ಗೌರವಕ್ಕೆ ಧನ್ಯವಾದಗಳು. ಈ ಮೂಲಕ ಭಾರತದ ಗಣರಾಜ್ಯೋತ್ಸವಕ್ಕೆ 6ನೇ ಬಾರಿಗೆ ಫ್ರಾನ್ಸ್‌ನ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಆಗಮಿಸಿದಂತಾಗಿದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.