ದಾಳಿಗೆ ಒಳಗಾದವರಿಗೆ ಕ್ಲಿನ್‌ಚಿಟ್‌ ಭರವಸೆ; ಎಸಿಬಿ ನೆಪದಲ್ಲಿ ಅಧಿಕಾರಿಗಳಿಗೆ ವಂಚನೆ


Team Udayavani, Mar 18, 2022, 9:34 AM IST

a-c-b

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಬಿಡಿಎ ಅಧಿಕಾರಿಗಳಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚಿಸಿದ ಮೂವರು ಹೈಗ್ರೌಂಡ್ಸ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬನಶಂಕರಿ ನಿವಾಸಿ ಪ್ರವೀಣ್‌ (27), ನಾಗರ ಭಾವಿ ನಿವಾಸಿ ಚೇತನ್‌(33) ಮತ್ತು ದೊಮ್ಮಲೂರು ನಿವಾಸಿ ಮನೋಜ್‌ ಕುಮಾರ್‌ (46) ಬಂಧಿತರು. ವಿಜಯ್‌ಕುಮಾರ್‌ ಎಂಬಾತ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಚೇತನ್‌ ಬಿಡಿಎ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದಾನೆ. ಇತರೆ ಆರೋಪಿಗಳು ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ಅಧಿಕಾರಿಗಳು, ಮಹದೇವಗೌಡ, ಮನೋಜ್‌ಎಂಬುವವರ ಮೇಲೆ ದಾಳಿ ನಡೆಸಿದ್ದರು. ಈ ವಿಚಾರ ತಿಳಿದ ಆರೋಪಿ ಚೇತನ್‌, ತನ್ನ ಸಹಚರರಿಗೆ ತಮ್ಮ ಕಚೇರಿಯ ಅಧಿಕಾರಿಗಳ ಮೊಬೈಲ್‌ ನೀಡಿ, ವಂಚನೆಗೆ ಸಂಚು ರೂಪಿಸಿದ್ದ. ಹೀಗಾಗಿ ಆರೋಪಿಗಳು ಕೆಲ ದಿನಗಳ ಹಿಂದೆ ಮೂವರು ದಾಳಿಗೊಳಗಾದ ಬಿಡಿಎ ಅಧಿಕಾರಿಗಳ ಪೈಕಿ ಅರವಿಂದ್‌ ಅವರನ್ನು ಸಂಪರ್ಕಿಸಿದ್ದು, ಎಸಿಬಿಯಲ್ಲಿ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ತಮ್ಮ ಮೇಲಿನ ಆರೋಪ ಮುಕ್ತಗೊಳಿಸುತ್ತೇವೆ.

ಅದಕ್ಕಾಗಿ 10 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಬಳಿಕ ಅರವಿಂದ್‌ ಇತರೆ ಇಬ್ಬರು ಅಧಿಕಾರಿಗಳ ಜತೆ ಚರ್ಚಿಸಿ, ಆರೋಪಿಗಳಿಗೆ ಸದಾಶಿವ ನಗರದ ಹೋಟೆಲ್‌ವೊಂದರಲ್ಲಿ 10 ಲಕ್ಷ ರೂ. ನೀಡಿದ್ದರು. ಕೆಲ ದಿನಗಳ ನಂತರ ಆರೋಪಿಗಳಿಗೆ ಎಸಿಬಿಯಲ್ಲಿ ಯಾವುದೇ ಅಧಿಕಾರಿಗಳು ಪರಿಚಯವಿಲ್ಲ ಎಂಬುದು ಗೊತ್ತಾಗಿದೆ. ಹಣ ವಾಪಸ್‌ಗೆ ಕರೆ ಮಾಡಿದಾಗ, ಬೆದರಿಕೆ ಹಾಕಿದ್ದಾರೆ. ನಂತರ ಫೋನ್‌ ಸ್ವಿಚ್‌x ಆಫ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಅರವಿಂದ್‌ ದೂರು ನೀಡಿದ್ದರು. ಮೂವರ ಬಂಧಿಲಾಗಿದೆ. ಮತ್ತೂಬ್ಬನಿಗಾಗಿ ಶೋಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಐಎಡಿಬಿ ಅಧಿಕಾರಿಗೂ ವಂಚನೆ

ಮತ್ತೂಂದು ಪ್ರಕರಣದಲ್ಲಿ ಎಸಿಬಿ ದಾಳಿಗೊಳಗಾಗಿದ್ದ ಕೆಐಎಡಿಬಿ ಅಧಿಕಾರಿಯೊಬ್ಬರಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಲಿ ಒಂದೂವರೆ ಲಕ್ಷ ರೂ. ಪಡೆದುಕೊಂಡಿದ್ದ ಆರೋಪಿ ಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಧರ್ಮೇಂದ್ರ (35) ಬಂಧಿತ. ಇತ್ತೀಚೆಗೆ ಕೆಐಎಡಿಬಿ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಲಾಗಿತ್ತು. ಅವರನ್ನು ಸಂಪರ್ಕಿಸಿದ ಧರ್ಮೇಂದ್ರ ಒಂದೂವರೆ ಲಕ್ಷ ರೂ. ನೀಡಿದರೆ ಆರೋಪ ಮುಕ್ತಗೊಳಿಸಲು ಸಹಾಯ ಮಾಡುತ್ತೇನೆ ಎಂದು ಹಣ ಪಡೆದುಕೊಂಡು ವಂಚಿಸಿದ್ದ ಎಂದು ಪೊಲೀಸರು ಹೇಳಿದರು.

ಹಣಕ್ಕೆ ಬೇಡಿಕೆ ಇಟ್ಟರೆ ಮಾಹಿತಿ ನೀಡಿ

ಈ ರೀತಿಯ ವಂಚನೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಎಸಿಬಿ ಮನವಿ ಮಾಡಿದೆ. ಇತ್ತೀಚೆಗೆ ಎಸಿಬಿ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಎಸಿಬಿ ದಾಳಿಗೊಳಗಾದ ಅಧಿಕಾರಿಗಳನ್ನು ಸಂಪರ್ಕಿಸಿ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಇಂತಹ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕು. ಯಾರಾದರೂ ಅಪರಿಚಿತ ವ್ಯಕ್ತಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಕಚೇರಿಗೆ ಮಾಹಿತಿ ನೀಡುವಂತೆ ಎಸಿಬಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಎಸಿಬಿಯಲ್ಲಿ ದೂರು ನೀಡುವುದಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ತಿಳಿಸಿದೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.