Mangaluru;ಗಿಫ್ಟ್ ಪಾರ್ಸೆಲ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು
Team Udayavani, Jun 20, 2023, 6:55 AM IST
ಮಂಗಳೂರು: ಗಿಫ್ಟ್ ಪಾರ್ಸೆಲ್ ಬಂದಿರುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ. 15ರಂದು ದೂರುದಾರರಿಗೆ ಗಿಫ್ಟ್ ಪಾರ್ಸೆಲ್ ಬಂದಿರುವುದಾಗಿ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಬಂದಿತ್ತು. ಮರುದಿನ ಬ್ರಾಡ್ವೇ ಶಿಪ್ಪಿಂಗ್ ಕಂಪೆನಿ ಹೆಸರಿನಲ್ಲಿ 447760437507 ನಂಬರ್ನಿಂದ ವಾಟ್ಸ್ ಆ್ಯಪ್ ಸಂದೇಶ ಬಂದಿತ್ತು. ಆ ಸಂದೇಶದಲ್ಲಿ ಪಾರ್ಸೆಲ್ ಬಂದಿರುವ ಬಗ್ಗೆ ಹೇಳಿ ಮುಂದಿನ ಪಾರ್ಸೆಲ್ ಪ್ರೊಸೆಸ್ಗಾಗಿ 45,000 ರೂ. ನೀಡಲು ತಿಳಿಸಲಾಗಿತ್ತು.
ಅದರಂತೆ ದೂರುದಾರರು ಹಣ ವರ್ಗಾಯಿಸಿದ್ದರು. ಆ ಬಳಿಕ 447432476463 ನಂಬರ್ನಿಂದ ಸಂದೇಶಗಳನ್ನು ಕಳುಹಿಸಿದ ಇನ್ನೋರ್ವ ಅಪರಿಚಿತ ವ್ಯಕ್ತಿ “ಉಡುಗೊರೆ ಜತೆಗೆ ಹಣವನ್ನು ಇಟ್ಟು ನಿಯಮ ಉಲ್ಲಂಘನೆಯಾಗಿದೆ’ ಎಂದು ಬೆದರಿಸಿ 1.61 ಲ.ರೂ.ಗಳನ್ನು ನೀಡಬೇಕೆಂದು ಒತ್ತಾಯಿಸಿದ್ದ.
ಈ ಬಗ್ಗೆ ದೂರುದಾರರು ವಂಚನೆಯಾಗಿರುವ ಕುರಿತು ದೂರು ನೀಡಿದ್ದಾರೆ. ಸಂದೇಶ ಬಂದಿದ್ದ ಎರಡೂ ಸಂಖ್ಯೆಯೂ 12 ಡಿಜಿಟ್ ಅನ್ನು ಹೊಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ