India-Myanmar ಗಡಿಯಲ್ಲಿ ಮುಕ್ತಸಂಚಾರ ರದ್ದು
ಭದ್ರತೆಯನ್ನು ಬಿಗಿಗೊಳಿಸಲು ಜನರ ಸಂಚಾರದ ಮೇಲೆ ನಿರ್ಬಂಧ: ಅಮಿತ್ ಶಾ
Team Udayavani, Feb 8, 2024, 8:11 PM IST
ನವದೆಹಲಿ: ದೇಶದ ಆಂತರಿಕ ಭದ್ರತೆಯ ಹಿತಾಸಕ್ತಿಗಾಗಿ, ಭಾರತ ಹಾಗೂ ಮ್ಯಾನ್ಮಾರ್ ನಡುವಿನ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಒಪ್ಪಂದ (ಎಫ್ಎಂಆರ್)ವನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಕೇಂದ್ರಸರ್ಕಾರ ಗುರುವಾರ ತಿಳಿಸಿದೆ. ಈ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ದೇಶದ ಆಂತರಿಕ ಭದ್ರತೆಯನ್ನು ಖಾತರಿ ಪಡಿಸಿಕೊಳ್ಳುವುದರ ಜತೆಗೆ ಈಶಾನ್ಯ ರಾಜ್ಯಗಳ ಜನಸಂಖ್ಯೆಯಲ್ಲಿ ಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ, ಮ್ಯಾನ್ಮಾರ್ ಗಡಿಯಲ್ಲಿ ಎಫ್ಎಂಆರ್ ಅನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಇದು ದೇಶದ ಗಡಿಗಳನ್ನು ಭದ್ರಪಡಿಸಲು ಪ್ರಧಾನಿ ಮೋದಿ ಅವರ ಸಂಕಲ್ಪವಾಗಿದೆ’ ಎಂದಿದ್ದಾರೆ.
ಭಾರತ ಹಾಗೂ ಮ್ಯಾನ್ಮಾರ್ ಗಡಿ ಭಾಗದಲ್ಲಿ ವಾಸಿಸುವ ಜನರು ಎರಡೂ ದೇಶಗಳ 16 ಕಿ.ಮೀ. ದೂರಗಳವರೆಗೆ ಯಾವುದೇ ದಾಖಲೆಗಳಿಲ್ಲದೇ (ವೀಸಾ, ಪಾಸ್ಪೋರ್ಟ್) ಸಂಚರಿಸಲು ಎಫ್ಎಂಆರ್ ಅನುಮತಿಸುತ್ತದೆ. ಕೇಂದ್ರ ಸರ್ಕಾರದ ಈ ನಿರ್ಣಯಕ್ಕೆ ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಧನ್ಯವಾದ ತಿಳಿಸಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಗಡಿಭದ್ರತೆ ಬಗ್ಗೆ ಹೊಂದಿರುವ ಬದ್ಧತೆಗೆ ಕೃತಜ್ಞನಾಗಿದ್ದೇನೆ. ಈ ನಿರ್ಣಯವು ಅಕ್ರಮ ವಲಸೆಯನ್ನು ನಿಯಂತ್ರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!