Chhattisgarh: ಕಾರ್ಮಿಕರಿಗೆ ಹಣ 10 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: ರಾಹುಲ್
Team Udayavani, Oct 29, 2023, 11:07 PM IST
ಹೊಸದಿಲ್ಲಿ: ಛತ್ತೀಸ್ಗಢದಲ್ಲಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದರೆ ಬಡವರಿಗೆ 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯ ಒದಗಿಸುತ್ತೇವೆ ಮತ್ತು ಭೂರಹಿತ ಕಾರ್ಮಿಕರಿಗೆ ವರ್ಷಕ್ಕೆ 10 ಸಾವಿರ ರೂ.ಗಳ ಆರ್ಥಿಕ ನೆರವು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
2 ದಿನಗಳ ಛತ್ತೀಸ್ಗಢ ಪ್ರವಾಸದ ಲ್ಲಿರುವ ಅವರು ರವಿವಾರ ರಾಜನಂದ ಗಾಂವ್ನಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸನ್ನು ನೀವು ಮತ್ತೂಮ್ಮೆ ಆಶೀರ್ವದಿಸಿ. ಕಾಂಗ್ರೆಸ್ ಯಾವತ್ತೂ ಬಡವರು, ಕಾರ್ಮಿಕರು, ರೈತರು, ಹಿಂದುಳಿದ ವರ್ಗಗಳು, ಬುಡಕಟ್ಟು ಜನಾಂಗದವರು ಮತ್ತು ದಲಿತರ ಏಳ್ಗೆಗಾಗಿ ಕೆಲಸ ಮಾಡುತ್ತದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಕೇವಲ ಅದಾನಿಯಂಥ ಕೋಟ್ಯಧಿಪತಿ ಉದ್ಯಮಿಗಳಿಗಾಗಿ ಮಾತ್ರವೇ ಕೆಲಸ ಮಾಡುತ್ತದೆ ಎಂದರು. ಕೇಂದ್ರದಲ್ಲೂ ಕಾಂಗ್ರೆಸ್ಗೆ ಅಧಿಕಾರ ನೀಡಿದರೆ ದೇಶಾದ್ಯಂತ ಜಾತಿ ಗಣತಿ ನಡೆಸುತ್ತೇವೆ ಎಂಬ ಭರವಸೆಯನ್ನೂ ಅವರು ನೀಡಿದರು.
ಭತ್ತ ಕೊಯ್ಲು ಮಾಡಿದ ರಾಹುಲ್: ಛತ್ತೀಸ್ಗಢದಲ್ಲಿ ಚುನಾವಣ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ರಾಯು³ರ ಸಮೀಪದ ಹಳ್ಳಿಯೊಂದರಲ್ಲಿ ಅನ್ನದಾತರೊಂದಿಗೆ ಸೇರಿ ಭತ್ತ ಕೊಯ್ಲು ಮಾಡಿದ್ದಾರೆ.
“ಮಂದಿರಕ್ಕೆ 1.11 ಲಕ್ಷ ರೂ. ಕೊಟ್ಟಿದ್ದೇನೆ”
ನಾನು ಕೂಡ ಒಬ್ಬ ಒಳ್ಳೆಯ ಹಿಂದೂ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾನೂ 1.11 ಲಕ್ಷ ರೂ. ದೇಣಿಗೆ ನೀಡಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಭೋಪಾಲ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಸನಾತನ ಧರ್ಮವನ್ನು ಅನುಸರಿಸುತ್ತೇನೆ. ನಾನೊಬ್ಬ ಒಳ್ಳೆಯ ಹಿಂದೂ. ಆದರೆ ಚುನಾವಣೆಯಲ್ಲಿ ಧರ್ಮವನ್ನು ಬಳಸಬಾರದು. ರಾಮಮಂದಿರ ನಿರ್ಮಾಣಕ್ಕೆ ಬಿಜೆಪಿ ನಾಯಕರಾದ ಸಿಎಂ ಶಿವರಾಜ್ ಸಿಂಗ್ 1 ಲಕ್ಷ ರೂ. ಕೊಟ್ಟರು, ನಾನು 1.11 ಲಕ್ಷ ರೂ. ಕೊಟ್ಟಿದ್ದೇನೆ. ಚೆಕ್ ಅನ್ನು ನೇರವಾಗಿ ಪ್ರಧಾನಿ ಮೋದಿಯವರಿಗೇ ಕಳುಹಿಸಿಕೊಟ್ಟಿದ್ದೆ ಎಂದಿದ್ದಾರೆ. ಇದೇ ವೇಳೆ ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ಮತ್ತು ಕಮಲ್ನಾಥ್ ನಡುವೆ ಒಳಜಗಳ ತೀವ್ರಗೊಂಡಿದೆ ಎಂಬ ಸುದ್ದಿಗಳನ್ನು ಸಿಂಗ್ ತಳ್ಳಿಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ