ಈ ವರ್ಷದಿಂದಲೇ “ನಲಿ-ಕಲಿ’ಯಲ್ಲಿ ಇಂಗ್ಲಿಷ್‌ ಪ್ರಾಕ್ಟಿಕಲ್‌ ಕ್ಲಾಸ್‌


Team Udayavani, Jun 8, 2019, 3:06 AM IST

e-varha

ಮಂಗಳೂರು: ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸುವುದರ ಜತೆಗೆ ಆ ಶಾಲೆಗಳ ಕನ್ನಡ ಮಾಧ್ಯಮ ತರಗತಿಗಳಲ್ಲೂ “ನಲಿ-ಕಲಿ’ ಕಲಿಕಾ ವ್ಯವಸ್ಥೆಯಡಿ ಇಂಗ್ಲಿಷ್‌ ಬೋಧನೆಯನ್ನು ಪರಿಣಾಮಕಾರಿಯಾಗಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಈ ವರ್ಷ ಆಯ್ದ ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಆರಂಭಿಸಿದ ಆಂಗ್ಲ ಮಾಧ್ಯಮ ಬೇಡಿಕೆ ತೀರಾ ಹೆಚ್ಚಿದೆ. ಆದರೆ 30 ಮಕ್ಕಳ ಮಿತಿ ಇರುವುದರಿಂದ ಅನೇಕ ಮಕ್ಕಳು- ಹೆತ್ತವರಿಗೆ ನಿರಾಶೆಯಾಗಿದೆ. ಇದಕ್ಕೆ ಇಲಾಖೆ ಕಂಡುಕೊಂಡಿರುವ ಸಾಂತ್ವನ ಸೂತ್ರವೇ “ನಲಿ-ಕಲಿ’ಯಲ್ಲಿ ಆಟ – ಚಟುವಟಿಕೆಗಳ ಮೂಲಕ ಇಂಗ್ಲಿಷ್‌ ಭಾಷೆಯನ್ನು ಹೆಚ್ಚು ಚೆನ್ನಾಗಿ ಬೋಧಿಸುವುದು.

ಇಂಗ್ಲಿಷ್‌ ಮಾಧ್ಯಮ ತರಗತಿ ಆರಂಭವಾಗಿರುವ ಆಯ್ದ ಒಂದು ಸಾವಿರ ಶಾಲೆಗಳಲ್ಲಿಯೇ ಇದು ನಡೆಯಲಿದ್ದು, ಇದಕ್ಕಾಗಿ ಶೀಘ್ರವೇ ಆ್ಯಕ್ಟಿವಿಟಿ ಕಾರ್ಡ್‌ಗಳು ವಿತರಣೆಯಾಗಲಿವೆ. ಈ ವರ್ಷದ ಯಶಸ್ಸನ್ನು ಗಮನಿಸಿ ಮುಂದಿನ ವರ್ಷ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇದನ್ನು ಜಾರಿಗೊಳಿಸುವ ಯೋಚನೆ ಇಲಾಖೆಗಿದೆ.

“ನಲಿ-ಕಲಿ’ಯಲ್ಲಿ ಇಂಗ್ಲಿಷ್‌ ಪಠ್ಯ ಆಧಾರಿತ ಬೋಧನೆ ಈಗಾಗಲೇ ಇದೆ. ಇನ್ನು ಚಟುವಟಿಕೆ ಆಧಾರಿತ ಕಲಿಕೆ ಸೇರಿಕೊಳ್ಳಲಿದೆ. ಇನ್ನುಳಿದ ಅಧ್ಯಯನ ಕನ್ನಡ ಮಾಧ್ಯಮದಲ್ಲಿಯೇ ನಡೆಯುತ್ತದೆ.

ಆ್ಯಕ್ಟಿವಿಟಿ ಕಾರ್ಡ್‌: ರಾಜ್ಯದಲ್ಲಿ ಒಟ್ಟು 43 ಸಾವಿರ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲೆಗಳಿವೆ. ಇಂಗ್ಲಿಷ್‌ ಮಾಧ್ಯಮ ಆರಂಭವಾಗಿರುವ ಆಯ್ದ 1,000 ಸಾವಿರ ಶಾಲೆಗಳ ಕನ್ನಡ ಮಾಧ್ಯಮದ 1ರಿಂದ 3ನೇ ತರಗತಿಗಳಿಗೆ “ನಲಿ-ಕಲಿ’ಯ ಇಂಗ್ಲಿಷ್‌ ಪಠ್ಯದ ಜತೆಗೆ ಆ್ಯಕ್ಟಿವಿಟಿ ಕಾರ್ಡ್‌ ಕೂಡ ನೀಡಲಾಗುತ್ತದೆ. ಇದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ 43 ಸಾವಿರ ಶಾಲೆಗಳಿಗೆ ವಿಸ್ತರಿಸಲಾಗುತ್ತದೆ.

ಶಿಕ್ಷಕರಿಗೆ ತರಬೇತಿ: ಈಗಾಗಲೇ ಆಂಗ್ಲ ಶಿಕ್ಷಣ ಬೋಧಿಸಲು ಆಯ್ಕೆಯಾದ ಒಬ್ಬ ಶಿಕ್ಷಕರಿಗೆ ಅಗತ್ಯವಿರುವ ಕೌಶಲಾಭಿವೃದ್ಧಿ ತರಬೇತಿ ನೀಡಲಾಗಿದೆ. ಅದೇ ಶಿಕ್ಷಕರು “ನಲಿ-ಕಲಿ’ಯಲ್ಲಿ ಚಟುವಟಿಕೆ ಆಧಾರಿತ ಇಂಗ್ಲಿಷ್‌ ಹೇಳಿಕೊಡಲಿದ್ದಾರೆ. ಕೆಲವು ಶಾಲೆಗಳಲ್ಲಿ 4 ಮತ್ತು 5ನೇ ತರಗತಿಯ ಆಂಗ್ಲ ಶಿಕ್ಷಕರನ್ನು ಇದಕ್ಕೆ ಗೊತ್ತುಪಡಿಸಲಾಗಿದೆ ಎಂದು ಸರ್ವ ಶಿಕ್ಷಾ ಅಭಿಯಾನದ ಪ್ರಮುಖರು ಮಾಹಿತಿ ನೀಡಿದ್ದಾರೆ.

ಏನಿದು ಆ್ಯಕ್ಟಿವಿಟಿ ಕಾರ್ಡ್‌?: ಇದು ಚಟುವಟಿಕೆ ಆಧಾರಿತ ಇಂಗ್ಲಿಷ್‌ ಕಲಿಕೆ ವಿಧಾನ. ಕಾರ್ಡ್‌ ಎಂಬುದು ಹೆಸರಷ್ಟೆ, ಕಿಟ್‌ ಎನ್ನಲಡ್ಡಿಯಿಲ್ಲ. 1ರಿಂದ 3ನೇ ತರಗತಿಗಳ ಮಕ್ಕಳನ್ನು ತಲಾ 30 ವಿದ್ಯಾರ್ಥಿಗಳ ಯೂನಿಟ್‌ಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಯೂನಿಟ್‌ಗೆ ಒಂದರಂತೆ ಕಲಿಕಾ ಸಾಮಗ್ರಿ ಮತ್ತು ಕಲಿಕಾ ವಿಧಾನ ಒಳಗೊಂಡ ಒಂದು ಸೆಟ್‌ ಆ್ಯಕ್ಟಿವಿಟಿ ಕಾರ್ಡ್‌ ನೀಡಲಾಗುತ್ತದೆ.

ಇದರಲ್ಲಿರುವ ಸೂಚನೆಗಳ ಅನುಸಾರ ಶಿಕ್ಷಕರು ಬೋಧಿಸಬೇಕು. ಮೊದಲ 3 ತಿಂಗಳಲ್ಲಿ ಪದ, ಉಚ್ಚಾರ, ಆಲಿಸುವಿಕೆ, ಸಂಭಾಷಣೆ, ಬರವಣಿಗೆ ಸಂಬಂಧಿತ ಆಟಗಳು, ವಿವಿಧ ಆಟಗಳ ಮೂಲಕ ಇಂಗ್ಲಿಷ್‌ ಕಲಿಕೆ; ಅನಂತರ ಓದುವುದು ಮತ್ತು ಬರವಣಿಗೆಗೆ ಒತ್ತು ನೀಡಲಾಗುತ್ತದೆ.

ಸರಕಾರಿ ಶಾಲೆಗಳಲ್ಲಿ ಕನ್ನಡದಷ್ಟೇ ಇಂಗ್ಲಿಷ್‌ಗೂ ಒತ್ತು ನೀಡಲು ಸರಕಾರ ಸೂಚಿಸಿದೆ. ಆಂಗ್ಲ ಮಾಧ್ಯಮ ಆರಂಭವಾಗಿರುವ 1 ಸಾವಿರ ಶಾಲೆಗಳಲ್ಲಿ “ನಲಿ-ಕಲಿ’ ವ್ಯವಸ್ಥೆಯಡಿ ಪರಿಣಾಮಕಾರಿ ಆಂಗ್ಲ ಶಿಕ್ಷಣ ಈ ವರ್ಷದಿಂದ ಆರಂಭವಾಗಲಿದೆ. ದಾಖಲಾತಿ ಪೂರ್ಣಗೊಂಡ ಬಳಿಕ ಮಕ್ಕಳ ಸಂಖ್ಯೆ ನೋಡಿಕೊಂಡು ಆ್ಯಕ್ಟಿವಿಟಿ ಕಾರ್ಡ್‌ ಹಂಚಲಾಗುತ್ತದೆ.
-ಗುಣವತಿ, ಜೂನಿಯರ್‌ ಪ್ರೋಗ್ರಾಂ ಆಫೀಸರ್‌, ನಲಿಕಲಿ ಯೋಜನೆ, ಸರ್ವ ಶಿಕ್ಷಾ ಅಭಿಯಾನ

“ನಲಿ-ಕಲಿ’ಯಲ್ಲಿ ಪರಿಚಯ ಭಾಷೆಯಾಗಿ ಇಂಗ್ಲಿಷ್‌ ಬೋಧನೆ ಇತ್ತು. ಆದರೆ ಪ್ರಸಕ್ತ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಆರಂಭವಾದ್ದರಿಂದ ದಾಖಲಾತಿ ಹೆಚ್ಚುತ್ತಿದೆ. ಅಂತಹ ಮಕ್ಕಳೂ ಇಂಗ್ಲಿಷನ್ನು ಪರಿಣಾಮಕಾರಿಯಾಗಿ ಕಲಿಯಬೇಕೆಂಬ ದೃಷ್ಟಿಯಿಂದ ಚಟುವಟಿಕೆ ಆಧಾರಿತ ಬೋಧನೆ ಆರಂಭವಾಗುತ್ತಿದೆ.
-ವೈ. ಶಿವರಾಮಯ್ಯ, ಡಿಡಿಪಿಐ ದ.ಕ.

* ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.