ಸಹಕಾರ ಕ್ಷೇತ್ರಕ್ಕೆ ಕೇಂದ್ರದ ಪೂರ್ಣ ಸಹಕಾರ!

ಸಹಕಾರಿ ಸಂಘಗಳನ್ನು ಉತ್ತೇಜಿಸಲು ಹಲವು ಕ್ರಮಗಳ ಘೋಷಣೆ

Team Udayavani, Feb 2, 2023, 6:40 AM IST

ಸಹಕಾರ ಕ್ಷೇತ್ರಕ್ಕೆ ಕೇಂದ್ರದ ಪೂರ್ಣ ಸಹಕಾರ!

ಕೇಂದ್ರ ಸರ್ಕಾರ ಸಹಕಾರಿ ಸಂಸ್ಥೆಗಳ ಮೇಲೆ ಹೆಚ್ಚಿನ ನಿಗಾವಹಿಸಿದೆ. ಇತ್ತೀಚೆಗೆ ಸಹಕಾರಿ ಸಂಸ್ಥೆಗಳಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಆಗಾಗ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಣಕ್ಕೆ ತರುವ ಉದ್ದೇಶವನ್ನೂ ಹೊಂದಿದೆ. ಮಾತ್ರವಲ್ಲ ಆಕರ್ಷಕ ತೆರಿಗೆಗಳನ್ನು ಘೋಷಿಸುವ ಮೂಲಕ ಸಹಕಾರ ವಲಯವನ್ನು ಉತ್ತೇಜಿಸುವ ಗುರಿಯನ್ನೂ ಹೊಂದಿದೆ.

ಬುಧವಾರ ನಿರ್ಮಲಾ ಸೀತಾರಾಮನ್‌ ಮಾಡಿದ ಬಜೆಟ್‌ ಭಾಷಣದಲ್ಲಿ ಸಹಕಾರ ಕ್ಷೇತ್ರಕ್ಕೆ ಹಲವು ಸಹಕಾರಗಳನ್ನು ಪ್ರಕಟಿಸಿದ್ದಾರೆ.

ಮುಂದಿನ ವರ್ಷ ಮಾರ್ಚ್‌ 31ರವರೆಗೆ ಉತ್ಪಾದನಾ ಚಟುವಟಿಕೆ ಆರಂಭಿಸುವ ಹೊಸ ಸಹಕಾರಿ ಸಂಸ್ಥೆಗಳಿಗೆ ಕಡಿಮೆ ತೆರಿಗೆಯಿರುತ್ತದೆ. ಅಂದರೆ ಶೇ.15 ತೆರಿಗೆ ಹಾಕಲಾಗುತ್ತದೆ. ಪ್ರಸ್ತುತ ಈ ಸೌಲಭ್ಯವನ್ನು ಹೊಸ ಉತ್ಪಾದನಾ ಕಂಪನಿಗಳಿಗೆ ಮಾತ್ರ ನೀಡಲಾಗಿತ್ತು.

2016-17ರ ವಿತ್ತೀಯವರ್ಷಕ್ಕೂ ಹಿಂದಿನ ಅವಧಿಗೆ ಸೇರಿದಂತೆ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡಿದರೆ, ಅದನ್ನು ವೆಚ್ಚದ ಲೆಕ್ಕಕ್ಕೆ ಸೇರಿಸಿಕೊಳ್ಳಲು ಸಕ್ಕರೆ ಸಹಕಾರಿ ಸಂಘಗಳಿಗೆ ಅವಕಾಶ ನೀಡುವ ಉದ್ದೇಶವಿದೆ. ಇದರಿಂದ ಈ ವಲಯಕ್ಕೆ 10,000 ಕೋಟಿ ರೂ.ಗಳಷ್ಟು ಉಳಿತಾಯವಾಗಬಹುದು ಎನ್ನುವುದು ನಿರ್ಮಲಾ ಅಭಿಮತ.

ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ (ಪ್ಯಾಕ್ಸ್‌), ಪ್ರಾಥಮಿಕ ಕೃಷಿ ಸಹಕಾರ ಸಂಘಗಳು-ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಲ್ಲಿ (ಪಿಸಿಎಆರ್‌ಡಿಬಿಎಸ್‌), 2 ಲಕ್ಷ ರೂ.ವರೆಗೆ ನಗದನ್ನು ಠೇವಣಿಯಾಗಿ ಪಾವತಿಸುವ, ಅಷ್ಟೇ ಮೊತ್ತದ ಸಾಲವನ್ನು ನಗದಿನ ರೂಪದಲ್ಲಿ ಪಡೆಯುವ ಅವಕಾಶ ನೀಡಲಾಗುತ್ತದೆ.

ಹಾಗೆಯೇ ಟಿಡಿಎಸ್‌ ಪಾವತಿಸಿ 3 ಕೋಟಿ ರೂ.ವರೆಗೆ ನಗದನ್ನು ಪಡೆದುಕೊಳ್ಳಲು ಸಹಕಾರಿ ಸಂಘಗಳಿಗೆ ಅವಕಾಶ ನೀಡಲಾಗಿದೆ.

ಸಹಕಾರಿ ಸಂಸ್ಥೆಗಳ ಪಕ್ಕಾ ಮಾಹಿತಿಗೆ ಕ್ರಮ
ರಾಷ್ಟ್ರೀಯ ಸಹಕಾರಿ ಸಂಸ್ಥೆಗಳ ಪಕ್ಕಾ ಮಾಹಿತಿಯನ್ನು ಸಿದ್ಧಪಡಿಸಲು ಕೇಂದ್ರ ತೀರ್ಮಾನಿಸಿದೆ. ಎಲ್ಲೆಲ್ಲಿ ಎಷ್ಟು ಸಂಸ್ಥೆಗಳಿವೆ ಎಂದು ಲೆಕ್ಕವಿಡುವುದು ಇಲ್ಲಿನ ಉದ್ದೇಶ. ಸದ್ಯದ ಮಾಹಿತಿ ಪ್ರಕಾರ ದೇಶದಲ್ಲಿ 8.6 ಲಕ್ಷ ಸಹಕಾರಿ ಸಂಸ್ಥೆಗಳಿವೆ. ಈ ಪೈಕಿ ಮೂಲಭೂತ ಕೃಷಿ ಸಂಸ್ಥೆಗಳು 63,000.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.