ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಂಗಳೂರಿನ ರಸ್ತೆಗಳಿಗೆ ಎಲ್‌ಇಡಿ ಬೀದಿದೀಪ

Team Udayavani, Sep 26, 2021, 4:02 AM IST

ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಹಾನಗರ: ನಗರದಲ್ಲಿ ಈಗಿರುವ ಬೀದಿ ದೀಪಗಳನ್ನು ಎಲ್‌ಇಡಿ ಬೀದಿ ದೀಪಗಳಾಗಿ ಪರಿವರ್ತಿಸುವ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಬೀಚ್‌ ಪ್ರದೇಶದಿಂದ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ.

ನಗರದಲ್ಲಿ ಈಗಾಗಲೇ 2,500ಕ್ಕೂ ಹೆಚ್ಚಿನ ಎಲ್‌ಇಡಿ ಬೀದಿದೀಪ ಅಳವಡಿಕೆ ಕೆಲಸ ಪೂರ್ಣಗೊಂಡಿದೆ. ಸದ್ಯ ತಣ್ಣೀರುಬಾವಿ ಸುತ್ತಮುತ್ತ ಎಲ್‌ಇಡಿ ಬೀದಿ ದೀಪ ಅಳವಡಿಕೆ ಕಾರ್ಯ ನಡೆಯುತ್ತಿದೆ. ಮಂಗಳೂರಿನ ಬೀಚ್‌ ಪ್ರದೇಶದಲ್ಲಿರುವ ಬೀದಿ ದೀಪಗಳು ನಿರ್ವಹಣೆ ಸರಿಯಿಲ್ಲ ಎಂಬ ದೂರುಗಳು ಬರುತ್ತಿದ್ದವು. ಸಮುದ್ರದ ಉಪ್ಪಿನಾಂಶದಿಂದಾಗಿ ಬೀದಿ ದೀಪಗಳಲ್ಲಿ ತುಕ್ಕು ಹಿಡಿದು ಆಗಾಗ್ಗೆ ಸಮಸ್ಯೆ ಉಂಟಾಗುತ್ತಿತ್ತು. ಈ ನಿಟ್ಟಿನಲ್ಲಿ ಬೀಚ್‌ ಪ್ರದೇಶದಲ್ಲಿ ಎಲ್‌ಇಡಿ ಅಳವಡಿಸುವ ಕೆಲಸಕ್ಕೆ ಮೊದಲು ಆದ್ಯತೆ ನೀಡಲಾಗಿದೆ. ಅದೇ ರೀತಿ ಇತರ ವಾರ್ಡ್‌ಗಳಲ್ಲಿಯೂ ಕಾಮಗಾರಿ ಸಾಗುತ್ತಿದೆ.

ಒಟ್ಟು 67,000 ಎಲ್‌ಇಡಿ ಬೀದಿ ದೀಪ ಅಳವಡಿಕೆ
ಸ್ಮಾರ್ಟ್‌ಸಿಟಿ ವತಿಯಿಂದ ಮಂಗಳೂರು ನಗರದಲ್ಲಿ ಎಲ್ಲ ವಾರ್ಡ್‌ ಗಳಲ್ಲಿ ಸೇರಿ ಒಟ್ಟು 67,000 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಕಳೆದ ಮಾರ್ಚ್‌ನಿಂದ ಆರಂಭಗೊಂಡ ಕಂಬಗಳ ಸಮೀಕ್ಷೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಹೊಸದಾಗಿ ಅಳವಡಿಸಲಾಗುವ ಎಲ್‌ಇಡಿ ಬಲ್ಬ್ ಗಳನ್ನು ನಗರದ ರಸ್ತೆಗಳಿಗೆ ಅನುಗುಣವಾಗಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ನಗರದ ಜನನಿಬಿಡ ರಸ್ತೆ, ಒಳರಸ್ತೆ, ಸದಾ ವಾಹನ ಸಂಚಾರದ ರಸ್ತೆ ಹೀಗೆ ವಿವಿಧ ಪ್ರಾಕಾರಗಳಲ್ಲಿ ವಿಂಗಡಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ವೈಜ್ಞಾನಿಕ ರೀತಿಯಲ್ಲಿ ಸಾಮರ್ಥ್ಯಕ್ಕೆ ತಕ್ಕಂತೆ ಬಲ್ಬ್ ಗಳನ್ನು ಅಳವಡಿಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಎಲ್‌ಇಡಿ ಬೀದಿ ದೀಪ ಅಳವಡಿಕೆ ಪೂರ್ಣಗೊಳಿಸುವ ಇರಾದೆ ಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. 7 ವರ್ಷಗಳ ಕಾಲ ಬೀದಿ ದೀಪಗಳ ನಿರ್ವಹಣೆಯ ಈಗಾಗಲೇ ಟೆಂಡರ್‌ ವಹಿಸಿಕೊಂಡಿರುವ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ.

ಇದನ್ನೂ ಓದಿ:ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ಸ್ಮಾರ್ಟ್‌ ಮೀಟರ್‌ ಅಳವಡಿಕೆ
ಮಂಗಳೂರಿನ ಎಲ್‌ಇಡಿ ಬೀದಿ ದೀಪಗಳುಳ್ಳ ವಿದ್ಯುತ್‌ ಕಂಬಗಳಿಗೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಸಲು ಚಿಂತನೆ ನಡೆಯುತ್ತಿದೆ. ಈ ರೀತಿ ಸ್ಮಾರ್ಟ್‌ ಮೀಟರ್‌ ಅಳವಡಿಸಿದರೆ ಎಲ್‌ಇಡಿ ಬಲ್ಬ್ಗಳ ಮೇಲ್ವಿಚಾರಣೆ ನಡೆಸಲು ಸುಲಭವಾಗುತ್ತದೆ. ಮೀಟರ್‌ ರೀಡಿಂಗ್‌, ಯಾವ ಪ್ರದೇಶದಲ್ಲಿ ಲೈಟ್‌ ಉರಿಯುತ್ತಿಲ್ಲ, ಯಾವ ಕಂಬದಲ್ಲಿ ಬಲ್ಬ್ ಸರಿಯಿಲ್ಲ ಎಂಬಿತ್ಯಾದಿ ಮಾಹಿತಿಯನ್ನು ಜಿಪಿಎಸ್‌ ಆಧಾರಿತವಾಗಿ ಮೊಬೈಲ್‌ನಲ್ಲಿಯೇ ಪಡೆಯಲು ಸಾಧ್ಯವಾಗುತ್ತದೆ. ಸ್ಮಾರ್ಟ್‌ ಮೀಟರ್‌ ಅಳವಡಿಸುವ ಕುರಿತು ಸ್ಮಾರ್ಟ್‌ಸಿಟಿ, ಸ್ಥಳೀಯಾಡಳಿತದಿಂದ ಮೆಸ್ಕಾಂನ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ.

ಮತ್ತಷ್ಟು ವೇಗ
ನಗರದಲ್ಲಿ ಈಗಾಗಲೇ ಅಳವಡಿಸಿದ ಬೀದಿ ದೀಪಗಳನ್ನು ಎಲ್‌ಇಡಿ ಬೀದಿದೀಪಗಳಾಗಿ ಬದಲಾಯಿಸುವ ಕೆಲಸ ಸ್ಮಾರ್ಟ್‌ಸಿಟಿ ವತಿಯಿಂದ ನಡೆಯುತ್ತಿದೆ. ಈಗಾಗಲೇ ನಗರದಲ್ಲಿ 2,500 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟ ವೇಗ ನೀಡಲಾಗುತ್ತದೆ. ಎಲ್‌ಇಡಿ ಬೀದಿ ದೀಪ ಅಳವಡಿಕೆಯಿಂದ ವಿದ್ಯುತ್‌ ದರದ ಹೊರೆ ಕಡಿಮೆಯಾಗಲಿದೆ.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

 

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.