ಜಿ.ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ


Team Udayavani, Feb 1, 2023, 12:01 AM IST

ಜಿ.ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ

ಉಡುಪಿ: ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದೊಂದಿಗೆ ಜಿ. ಶಂಕರ್‌ ಮಣಿಪಾಲ್‌ ಆರೋಗ್ಯ ಸುರûಾ ಕಾರ್ಡ್‌ ಯೋಜನೆ ಬಡಜನರ ಆರೋಗ್ಯ ಸುರಕ್ಷೆಗಾಗಿ ಹಮ್ಮಿಕೊಂಡ ಮಹತ್ವದ ಯೋಜನೆಯಾಗಿದ್ದು, ನೋಂದಣಿಯ ಅವಧಿಯನ್ನು ಫೆ. 10ರ ವರೆಗೆ ವಿಸ್ತರಿಸಲಾಗಿದೆ.

ಜ. 31ರೊಳಗೆ ನೋಂದಣಿ ಮಾಡಿಕೊಂಡ ಫಲಾನುಭವಿಗಳು ಫೆ. 1ರಿಂದ ಕಾರ್ಡ್‌ನ ಸೌಲಭ್ಯ ಪಡೆಯುವುದಕ್ಕೆ ಅರ್ಹರಾಗುತ್ತಾರೆ. ಈ ಕಾರ್ಡ್‌ನ ಸೌಲಭ್ಯ 1 ವರ್ಷಕ್ಕೆ ಸೀಮಿತವಾಗಿದ್ದು, ಮುಂದಿನ ವರ್ಷದಿಂದ ಕಾರ್ಡ್‌ನ ನವೀಕರಣ ಮತ್ತು ಹೊಸ ನೋಂದಣಿ ಇರುವುದಿಲ್ಲ. ಕಾರ್ಡ್‌ಗಳನ್ನು ಜಿಲ್ಲಾ ಮೊಗವೀರ ಯುವ ಸಂಘಟನೆ ಹಾಗೂ ವಿವಿಧ ಘಟಕಗಳ ಮೂಲಕ ನೋಂದಣಿಗೊಳಿಸಿ ವಿತರಿಸಲಾಗುವುದು. ಈ ಯೋಜನೆಯು ಮಣಿಪಾಲ ಸಮೂಹ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದೆ.

ಯೋಜನೆಯಲ್ಲಿ ಜನರಲ್‌ ವಾರ್ಡ್‌ಗಳಿಗೆ ಒಳರೋಗಿಗಳಾಗಿ ದಾಖಲಾಗುವ ಯಾವುದೇ ಕಾಯಿಲೆಗಳ ರೋಗಿಯ ಆಸ್ಪತ್ರೆಯ ಒಟ್ಟು ಬಿಲ್‌ನ ಮೊತ್ತದಲ್ಲಿ ಶೇ. 35 ರಿಯಾಯಿತಿ ದೊರೆಯಲಿದೆ. ಕಾರ್ಡ್‌ದಾರರು ಮಣಿಪಾಲ ಸಮೂಹ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗದಲ್ಲಿ ರಿಯಾಯಿತಿ ಪಡೆಯಬಹುದು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಟಿಎಂಎ ಪೈ ಆಸ್ಪತ್ರೆ ಉಡುಪಿ, ಕೆಎಂಸಿ ಆಸ್ಪತ್ರೆ ಅತ್ತಾವರ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು, ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಸೌಲಭ್ಯ ಪಡೆಯಬಹುದು.

ಷರತ್ತುಗಳಿಲ್ಲದೆ ಎಲ್ಲರಿಗೂ ಹೊಸದಾಗಿ ಕಾರ್ಡ್‌ ಪಡೆಯಲು ಅವಕಾಶವಿದೆ. ಹಿಂದೆ ಕಾರ್ಡ್‌ ಹೊಂದಿದ್ದ ಯಾವುದೇ ಕುಟುಂಬ/ಸದಸ್ಯರು ಹೊಸ ಕಾರ್ಡ್‌ ಪಡೆಯಬಹುದು. ನೋಂದಣಿಗೆ ಒಳಪಡುವ ಎಲ್ಲ ಸದಸ್ಯರ ಆಧಾರ್‌ ಕಾರ್ಡ್‌, ಕುಟುಂಬದ ರೇಷನ್‌ ಕಾರ್ಡ್‌ ಪ್ರತಿಯೊಂದಿಗೆ ಫೆ. 10ರೊಳಗೆ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕಚೇರಿ, ಅಂಬಲಪಾಡಿ ಶ್ಯಾಮಿಲಿ ಸಭಾಂಗಣ ಎದುರಿನ ಮಂಗಲ ಸಮುದಾಯ ಭವನ ಅಥವಾ ಮೊಗವೀರ ಯುವ ಸಂಘಟನೆಯ ಘಟಕಗಳನ್ನು ಸಂಪರ್ಕಿಸಿ ನೋಂದಾಯಿಸಿ ಕೊಳ್ಳಬಹುದು.

ಒಂದು ಕುಟುಂಬ ಅಥವಾ ಕುಟುಂಬದ ಸದಸ್ಯರು ಯಾವುದೇ ಘಟಕದಲ್ಲಿ ರಿಯಾಯಿತಿ ಸೌಲಭ್ಯ ಯೋಜನೆಯನ್ನು ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯ ಸವಲತ್ತುಗಳು ಜನರಲ್‌ ವಾರ್ಡ್‌ಗಳಿಗೆ ಮಾತ್ರ ಸೀಮಿತವಾಗಿದೆ. ಇಲ್ಲಿ ರೋಗಿ ಮರುದಾಖಲಾದರೂ ಸೌಲಭ್ಯ ಪಡೆಯುವುದಕ್ಕೆ ಅವಕಾಶವಿದೆ ಎಂದು ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.