ವಿಧಾನಸಭಾ ಚುನಾವಣೆಗೆ ಗದಗ ಜಿಲ್ಲಾಡಳಿತ ಭರದ ಸಿದ್ಧತೆ

ಜಿಲ್ಲೆಯಲ್ಲಿದ್ದಾರೆ 8,52,498 ಮತದಾರರು-26,664 ಮತದಾರರು ಹೊಸದಾಗಿ ಸೇರ್ಪಡೆ-15,204 ಯುವ ಮತದಾರರು

Team Udayavani, Feb 6, 2023, 11:46 AM IST

vote

ಗದಗ: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಈಗಾಗಲೇ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, 4,27,624 ಪುರುಷರು, 4,24,817 ಮಹಿಳೆಯರು, 57 ಇತರೆ ಸೇರಿ ಜಿಲ್ಲೆಯಲ್ಲಿ 8,52,498 ಮತದಾರರಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 12,112 ಪುರುಷರು, 14,573 ಮಹಿಳೆಯರು, 9 ಇತರೆ ಸೇರಿ 26,664 ಮತದಾರರುಹೊಸದಾಗಿ ಸೇರ್ಪಡೆಯಾಗಿದ್ದಾರೆ. ಅದೇ ರೀತಿಯಾಗಿ ವರ್ಗಾವಣೆ, ಮರಣ, ಕ್ಷೇತ್ರ ಬದಲಾವಣೆ ಸೇರಿ 10,305 ಪುರುಷರು, 11,262 ಮಹಿಳೆಯರು ಸೇರಿ 21,567 ಮತದಾರರನ್ನು ಮತಪಟ್ಟಿಯಿಂದ
ಕೈಬಿಡಲಾಗಿದೆ. ಈ ಪೈಕಿ ಅತೀ ಹೆಚ್ಚು ಮತದಾರರನ್ನು ಕೈಬಿಟ್ಟಿರುವುದು ಗದಗ ವಿಧಾನಸಭಾ ಕ್ಷೇತ್ರದಲ್ಲಿ. 6,847 ಮತದಾರರನ್ನ ಮತಪಟ್ಟಿಯಿಂದ ಕೈಬಿಡಲಾಗಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಎಸ್‌ಸಿ ಮೀಸಲು ಕ್ಷೇತ್ರ ಶಿರಹಟ್ಟಿ(65) ವಿಧಾನಸಭಾ ಕ್ಷೇತ್ರದಲ್ಲಿ 1,11,800 ಪುರುಷರು, 1,10,794 ಮಹಿಳೆಯರು, 12 ಇತರೆ ಸೇರಿ ಒಟ್ಟು 2,22,606 ಮತದಾರರಿದ್ದಾರೆ. 3,200 ಪುರುಷರು, 3,977 ಮಹಿಳೆಯರು, 3 ಇತರೆ ಸೇರಿ 7,180 ಮತದಾರರುಹೊಸದಾಗಿ ಸೇರ್ಪಡೆಯಾಗಿದ್ದರೆ, 1,973 ಪುರುಷರು, 1,860 ಮಹಿಳೆಯರು ಸೇರಿ 3,833 ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಗದಗ(66) ವಿಧಾನಸಭಾ ಕ್ಷೇತ್ರದಲ್ಲಿ 1,08,640 ಪುರುಷರು, 1,10,205 ಮಹಿಳೆಯರು, 17 ಇತರೆ ಸೇರಿ ಒಟ್ಟು 2,18,862 ಮತದಾರರಿದ್ದಾರೆ. 3,291 ಪುರುಷರು, 3,986 ಮಹಿಳೆಯರು, 1 ಇತರೆ ಸೇರಿ 7,278 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದರೆ, 3,167 ಪುರುಷರು, 3,678 ಮಹಿಳೆಯರು ಸೇರಿ  6,847ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ರೋಣ(67) ವಿಧಾನಸಭಾ ಕ್ಷೇತ್ರದಲ್ಲಿ 1,14,202 ಪುರುಷರು, 1,13,636 ಮಹಿಳೆಯರು, 20 ಇತರೆ ಸೇರಿ ಒಟ್ಟು 2,27,858 ಮತದಾರರಿದ್ದಾರೆ. 3,466 ಪುರುಷರು, 4,038 ಮಹಿಳೆಯರು, 2 ಇತರೆ ಸೇರಿ 7,506 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದರೆ, 3,055 ಪುರುಷರು, 3,115
ಮಹಿಳೆಯರು ಸೇರಿ 6,170 ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ.ನರಗುಂದ(68) ವಿಧಾನಸಭಾ ಕ್ಷೇತ್ರದಲ್ಲಿ 92,982 ಪುರುಷರು, 90,182 ಮಹಿಳೆಯರು, 8 ಇತರೆ ಸೇರಿ ಒಟ್ಟು 1,83,172 ಮತದಾರರಿದ್ದಾರೆ. 2,155 ಪುರುಷರು, 2,572 ಮಹಿಳೆಯರು, 3 ಇತರೆ ಸೇರಿ 4,730 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದರೆ, 2,108 ಪುರುಷರು, 2,609 ಮಹಿಳೆಯರು ಸೇರಿ 4,717 ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ.

ಜಿಲ್ಲೆಯಲ್ಲಿ 15,204 ಯುವ ಮತದಾರರು

ಜಿಲ್ಲಾ ಸ್ವೀಪ್‌ ಸಮಿತಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಹೆಚ್ಚಿನ ರೀತಿಯಲ್ಲಿ ಅರಿವು  ಮೂಡಿಸಿದ ಪರಿಣಾಮ ಜಿಲ್ಲೆಯಲ್ಲಿ 7,897 ಯುವಕರು, 7,303 ಯುವತಿಯರು ಹಾಗೂ 4 ಇತರೆ ಸೇರಿ 15,204 ಯುವ ಮತದಾರರು ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಮೊದಲ ಮತ ಚಲಾಯಿಸಲಿದ್ದಾರೆ. ಇನ್ನು ಕ್ಷೇತ್ರವಾರು ಶಿರಹಟ್ಟಿಯಲ್ಲಿ 2,070 ಯುವಕರು, 1,887 ಯುವತಿಯರು, 1 ಇತರೆ ಸೇರಿ 3,958 ಯುವ ಮತದಾರರಿದ್ದಾರೆ. ಗದಗ ಕ್ಷೇತ್ರದಲ್ಲಿ 2,173 ಯುವಕರು, 2,163 ಯುವತಿಯರು, 2 ಇತರೆ ಸೇರಿ 4,338 ಯುವ ಮತದಾರರಿದ್ದಾರೆ. ರೋಣ ಕ್ಷೇತ್ರದಲ್ಲಿ 2,082 ಯುವಕರು, 1,858 ಯುವತಿಯರು, 1 ಇತರೆ ಸೇರಿ 3,941 ಯುವ ಮತದಾರರಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ 1,572 ಯುವಕರು, 1,395 ಯುವತಿಯರು ಸೇರಿ 2,967 ಯುವ ಮತದಾರರು ತಮ್ಮ ಮೊದಲ ಮತ ಚಲಾಯಿಸಲಿದ್ದಾರೆ.

ಅರ್ಹ ಮತದಾರರು ಚಲಾಯಿಸುವ ಮತ ತಾವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿ ಪಡಿಸಿಕೊಳ್ಳಲು ವಿ.ವಿ. ಪಾಟ್ಟ್ ಯಂತ್ರ ಸಹಕಾರಿಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ
ಮತದಾನದಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ.-ವೈಶಾಲಿ ಎಂ.ಎಲ್‌, ಜಿಲ್ಲಾಧಿಕಾರಿ, ಗದಗ

ಮಾದರಿ ನೀತಿಸಂಹಿತಿ ತಂಡ ರಚನೆ

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ವಿಧಾನಸಭಾ ಕ್ಷೇತ್ರಗಳಲ್ಲಿ 3 ತಂಡಗಳಂತೆ ಜಿಲ್ಲೆಯಲ್ಲಿ 12 ಸಂಚಾರಿ ಹಾಗೂ ವಿಡಿಯೋ ಸರ್ವಲೆನ್ಸ್‌ ತಂಡಗಳನ್ನು ರಚಿಸಲಾಗಿದೆ. ಉಳಿದಂತೆ ವಿಧಾನಸಭಾ ಕ್ಷೇತ್ರಕ್ಕೊಂದರಂತೆ 4 ವಿಡಿಯೋ ಪರಿಶೀಲನಾ ತಂಡಗಳನ್ನು ಕೂಡ ರಚಿಸಲಾಗಿದ್ದು, ತರಬೇತಿಯಲ್ಲಿ ನಿರತರಾಗಿದ್ದಾರೆ.

92 ಸೆಕ್ಟರ್‌ ಅಧಿಕಾರಿಗಳಿಂದ ಕಾರ್ಯಾಚರಣೆ

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ 46 ಸೆಕ್ಟರ್‌ ಅಧಿಕಾರಿಗಳ ಎರಡು ತಂಡಗಳು ಜಿಲ್ಲೆಯಲ್ಲಿ ಮತದಾನದ ಮಹತ್ವ ಹಾಗೂ ಅರಿವು ಮೂಡಿಸುವಲ್ಲಿ ನಿರತರಾಗಿವೆ. ಓರ್ವ  ಸೆಕ್ಟರ್‌ ಅ ಧಿಕಾರಿ 10ರಿಂದ 12 ಮತಗಟ್ಟೆಗಳ ನಿಯಂತ್ರಣ ಮಾಡುತ್ತಿದ್ದು, ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಮತದಾರರಲ್ಲಿರುವ ಗೊಂದಲಗಳನ್ನು ಪರಿಹರಿಸುತ್ತಿದ್ದಾರೆ. ಮತದಾರರ, ಮತಗಟ್ಟೆಗಳ ಪರಿಶೀಲನೆ ನಡೆದಿದ್ದು, ದುರಸ್ತಿಗಾಗಿ ಕಾದಿರುವ ಮತಗಟ್ಟೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

ಜಿಲ್ಲೆಯಲ್ಲಿ 956 ಮತಗಟ್ಟೆಗಳು

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 956 ಮತಗಟ್ಟೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಜೊತೆಗೆ 1,876 ಬ್ಯಾಲೆಟ್‌ ಯುನಿಟ್‌ಗಳು, 1,314 ಕಂಟ್ರೋಲ್‌ ಯುನಿಟ್‌ಗಳು, 1,404 ವಿವಿ ಪ್ಯಾಟ್‌ ಮಶಿನ್‌ಗಳು ಲಭ್ಯವಿದ್ದು, ಜಿಲ್ಲಾ ಚುನಾವಣಾಧಿ  ಕಾರಿಗಳ ಸುಪರ್ದಿಯಲ್ಲಿವೆ. ಜೊತೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ ಬ್ಯಾಲೆಟ್‌ ಯೂನಿಟ್‌ಗಳು, ಕಂಟ್ರೋಲ್‌ ಯೂನಿಟ್‌ಗಳು, ವಿವಿ ಪ್ಯಾಟ್‌ ಮಶಿನ್‌ಗಳೊಂದಿಗೆ ಅಧಿಕಾರಿಗಳು ಮತದಾರರಿಗೆ ಅರಿವು ಮೂಡಿಸುತ್ತಿದ್ದಾರೆ.

„ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.