ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ


Team Udayavani, Mar 30, 2023, 6:39 PM IST

sonda

ಶಿರಸಿ: ರಚನೆಯಾಗಿ ಎಂಟೇ ವರ್ಷದಲ್ಲಿ ತಾಲೂಕಿನ ಸೋಂದಾ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದೆ.
ಉದ್ಯೋಗ ಖಾತ್ರಿ, 15 ನೇ ಹಣಕಾಸು ಯೋಜನೆ , ಕರ ವಸೂಲಿ, ಕೋವಿಡ್ ನಿರ್ವಹಣೆ ಮುಂತಾದ ಕಾರ್ಯಕ್ರಮಗಳ ಪ್ರಗತಿಯನ್ನು ಆಧರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2021-22 ನೇ ಸಾಲಿನ ಪುರಸ್ಕಾರಕ್ಕೆ ಸೋಂದಾವನ್ನು ಆಯ್ಕೆ ಮಾಡಿದೆ.

ಹುಲೇಕಲ್ ಗ್ರಾಮ ಪಂಚಾಯಿತಿಯಿಂದ ಭಾಗವಾಗಿ 2015 ರಲ್ಲಿ ಪ್ರತ್ಯೇಕ ಸೋಂದಾ ಗ್ರಾಪಂ ರಚನೆಯಾಯಿತು. ಒಟ್ಟು 4 ಕಂದಾಯ ಗ್ರಾಮಗಳಿದ್ದು, 2800 ರಷ್ಟು ಜನಸಂಖ್ಯೆಯಿತಿದೆ. ಎಂಟು ಜನ ಚುನಾಯಿತ ಸದಸ್ಯರಿದ್ದಾರೆ. ಮಠ, ಮಂದಿರಗಳಂಥ ಧಾರ್ಮಿಕ ಕ್ಷೇತ್ರಗಳು, ಐತಿಹಾಸಿಕ, ನೈಸರ್ಗಿಕ ಪ್ರವಾಸಿ ತಾಣಗಳನ್ನು ಹೊಂದಿದ ಸುಂದರ ಗ್ರಾಮ ಇದಾಗಿದೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ, ಶಿರಸಿ ತಾಲೂಕು ಪಂಚಾಯಿತಿ ಮಾರ್ಗದರ್ಶನದಲ್ಲಿ ಸ್ವಚ್ಛ ಭಾರತ ಮಿಷನ್ ಸಹಾಯಧನದೊಂದಿಗೆ ಗ್ರಾಮದ ಸೋದೇ ವಾದಿರಾಜ ಮಠದಲ್ಲಿ ರಾಜ್ಯದ ಮೊದಲ ಸಮುದಾಯ ಗೋಬರ್‌ಧನ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿನ ಮಾದರಿಯನ್ನು ಆಧರಿಸಿ ಜಿಲ್ಲೆಯ ಹಾಗೂ ರಾಜ್ಯದ ಇತರೆಡೆ ಈ ಘಟಕಗಳು ಈಗ ನಿರ್ಮಾಣವಾಗುತ್ತಿವೆ. ವಾದಿರಾಜ ಮಠ ಹಾಗೂ ಸದಾಶಿವ ದೇವಸ್ಥಾನದಲ್ಲಿ ತಲಾ 3 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಶೌಚಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಹುಲೇಕಲ್ ಗ್ರಾಪಂ ಸಹಯೋಗದೊಂದಿಗೆ ಸಮರ್ಪಕ ಘನ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

2021-22 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 4 ಸಾವಿರ ಮಾನವದಿನಗಳ ಗುರಿ ಹೊಂದಲಾಗಿತ್ತು. 9200 ಮಾನವದಿನವನ್ನು ಬಳಸಿಕೊಳ್ಳುವ ಮೂಲಕ ಗ್ರಾಪಂ ಗುರಿ ಮೀರಿ ಸಾಧನೆ ಮಾಡಿದೆ. ಕೋವಿಡ್ ಸಂಕಷ್ಟ ಕಾಲದಲ್ಲೂ 5.6 ಲಕ್ಷ ರೂ. ಸಂಪೂರ್ಣ ತೆರಿಗೆ (ಶೇ.100) ರಷ್ಟು ವಸೂಲಿ ಮಾಡಲಾಗಿತ್ತು. ಅಲ್ಲದೆ, 15 ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಪಂ ತಾಲೂಕಿನ ಇತರ ಗ್ರಾಪಂಗಳಿಗೆ ಮಾದರಿಯಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮನೆಗಳಿಗೆ ತರಕಾರಿ, ಔಷಽಗಳನ್ನು ತಲುಪಿಸುವುದು, ಆರೋಗ್ಯ ಸೇವೆ ಒದಗಿಸಿದ್ದು, ಸೇರಿ ಉತ್ತಮ ನಿರ್ವಹಣೆಯನ್ನೂ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ.

ಉಪಾಧ್ಯಕ್ಷರು, ಎಲ್ಲ ಸದಸ್ಯರು, ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ಹಾಗೂ ಮುಖ್ಯವಾಗಿ ಜನರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಗಾಂಧಿ ಗ್ರಾಮ ಪುರಸ್ಕಾರದ ಮೂಲಕ ನಮ್ಮ ಕಾರ್ಯಕ್ಕೆ ಮನ್ನಣೆ ದೊರಕಿದಂತಾಗಿದೆ. ಎಲ್ಲರ ಸಹಕಾರದೊಂದಿಗೆ ಇನ್ನಷ್ಟು ಸಾಧನೆ ಮಾಡಲು ಹುಮ್ಮಸ್ಸು ಬಂದಿದೆ.
~ಮಮತಾ ಚಂದ್ರರಾಜ ಜೈನ್ , ಗ್ರಾ.ಗ್ರಾಪಂ ಅಧ್ಯಕ್ಷೆ

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.