ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ


Team Udayavani, Mar 30, 2023, 6:39 PM IST

sonda

ಶಿರಸಿ: ರಚನೆಯಾಗಿ ಎಂಟೇ ವರ್ಷದಲ್ಲಿ ತಾಲೂಕಿನ ಸೋಂದಾ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದೆ.
ಉದ್ಯೋಗ ಖಾತ್ರಿ, 15 ನೇ ಹಣಕಾಸು ಯೋಜನೆ , ಕರ ವಸೂಲಿ, ಕೋವಿಡ್ ನಿರ್ವಹಣೆ ಮುಂತಾದ ಕಾರ್ಯಕ್ರಮಗಳ ಪ್ರಗತಿಯನ್ನು ಆಧರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2021-22 ನೇ ಸಾಲಿನ ಪುರಸ್ಕಾರಕ್ಕೆ ಸೋಂದಾವನ್ನು ಆಯ್ಕೆ ಮಾಡಿದೆ.

ಹುಲೇಕಲ್ ಗ್ರಾಮ ಪಂಚಾಯಿತಿಯಿಂದ ಭಾಗವಾಗಿ 2015 ರಲ್ಲಿ ಪ್ರತ್ಯೇಕ ಸೋಂದಾ ಗ್ರಾಪಂ ರಚನೆಯಾಯಿತು. ಒಟ್ಟು 4 ಕಂದಾಯ ಗ್ರಾಮಗಳಿದ್ದು, 2800 ರಷ್ಟು ಜನಸಂಖ್ಯೆಯಿತಿದೆ. ಎಂಟು ಜನ ಚುನಾಯಿತ ಸದಸ್ಯರಿದ್ದಾರೆ. ಮಠ, ಮಂದಿರಗಳಂಥ ಧಾರ್ಮಿಕ ಕ್ಷೇತ್ರಗಳು, ಐತಿಹಾಸಿಕ, ನೈಸರ್ಗಿಕ ಪ್ರವಾಸಿ ತಾಣಗಳನ್ನು ಹೊಂದಿದ ಸುಂದರ ಗ್ರಾಮ ಇದಾಗಿದೆ.

ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ, ಶಿರಸಿ ತಾಲೂಕು ಪಂಚಾಯಿತಿ ಮಾರ್ಗದರ್ಶನದಲ್ಲಿ ಸ್ವಚ್ಛ ಭಾರತ ಮಿಷನ್ ಸಹಾಯಧನದೊಂದಿಗೆ ಗ್ರಾಮದ ಸೋದೇ ವಾದಿರಾಜ ಮಠದಲ್ಲಿ ರಾಜ್ಯದ ಮೊದಲ ಸಮುದಾಯ ಗೋಬರ್‌ಧನ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿನ ಮಾದರಿಯನ್ನು ಆಧರಿಸಿ ಜಿಲ್ಲೆಯ ಹಾಗೂ ರಾಜ್ಯದ ಇತರೆಡೆ ಈ ಘಟಕಗಳು ಈಗ ನಿರ್ಮಾಣವಾಗುತ್ತಿವೆ. ವಾದಿರಾಜ ಮಠ ಹಾಗೂ ಸದಾಶಿವ ದೇವಸ್ಥಾನದಲ್ಲಿ ತಲಾ 3 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಶೌಚಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಹುಲೇಕಲ್ ಗ್ರಾಪಂ ಸಹಯೋಗದೊಂದಿಗೆ ಸಮರ್ಪಕ ಘನ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

2021-22 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 4 ಸಾವಿರ ಮಾನವದಿನಗಳ ಗುರಿ ಹೊಂದಲಾಗಿತ್ತು. 9200 ಮಾನವದಿನವನ್ನು ಬಳಸಿಕೊಳ್ಳುವ ಮೂಲಕ ಗ್ರಾಪಂ ಗುರಿ ಮೀರಿ ಸಾಧನೆ ಮಾಡಿದೆ. ಕೋವಿಡ್ ಸಂಕಷ್ಟ ಕಾಲದಲ್ಲೂ 5.6 ಲಕ್ಷ ರೂ. ಸಂಪೂರ್ಣ ತೆರಿಗೆ (ಶೇ.100) ರಷ್ಟು ವಸೂಲಿ ಮಾಡಲಾಗಿತ್ತು. ಅಲ್ಲದೆ, 15 ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಪಂ ತಾಲೂಕಿನ ಇತರ ಗ್ರಾಪಂಗಳಿಗೆ ಮಾದರಿಯಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮನೆಗಳಿಗೆ ತರಕಾರಿ, ಔಷಽಗಳನ್ನು ತಲುಪಿಸುವುದು, ಆರೋಗ್ಯ ಸೇವೆ ಒದಗಿಸಿದ್ದು, ಸೇರಿ ಉತ್ತಮ ನಿರ್ವಹಣೆಯನ್ನೂ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ.

ಉಪಾಧ್ಯಕ್ಷರು, ಎಲ್ಲ ಸದಸ್ಯರು, ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ಹಾಗೂ ಮುಖ್ಯವಾಗಿ ಜನರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಗಾಂಧಿ ಗ್ರಾಮ ಪುರಸ್ಕಾರದ ಮೂಲಕ ನಮ್ಮ ಕಾರ್ಯಕ್ಕೆ ಮನ್ನಣೆ ದೊರಕಿದಂತಾಗಿದೆ. ಎಲ್ಲರ ಸಹಕಾರದೊಂದಿಗೆ ಇನ್ನಷ್ಟು ಸಾಧನೆ ಮಾಡಲು ಹುಮ್ಮಸ್ಸು ಬಂದಿದೆ.
~ಮಮತಾ ಚಂದ್ರರಾಜ ಜೈನ್ , ಗ್ರಾ.ಗ್ರಾಪಂ ಅಧ್ಯಕ್ಷೆ

ಟಾಪ್ ನ್ಯೂಸ್

jagadeesh shettar

ಪರಿಷತ್ತಿಗೆ ಜಗದೀಶ್‌ ಶೆಟ್ಟರ್‌?

china flag

China ರಫ್ತು ಪ್ರಮಾಣ ಶೇ.7.5ರಷ್ಟು ಇಳಿಕೆ

police karnataka

PSI ಗಳಿಗೆ ಸಿಗುವುದೇ ವರ್ಗಾವಣೆ ಭಾಗ್ಯ?

TRAIN

Railway : ರೈಲ್ವೇ ಮುಂಗಾರು ಸೀಸನ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

UDAYAVANI MLA SANMVADA

Udayavani ಕಚೇರಿಯಲ್ಲಿ ಜಿಲ್ಲೆಯ ಹೊಸ ಶಾಸಕರೊಂದಿಗೆ ಅಭ್ಯುದಯ ಸಂವಾದ

THUNDER LIGHTENING

Rain Update: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ

SCHOOL TEA-STUDENTS

ಸಮಗ್ರ ಶಿಕ್ಷಣ ಯೋಜನೆಯಡಿ 60 ತಾ. ಪಂ.ಗೆ 483 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

SSLC Revaluation ; ಶಿರಸಿಯ ಅವಳಿ ಮಕ್ಕಳಿಗೆ 7 ಮತ್ತು 9 ನೇ ರ‍್ಯಾಂಕ್‌

3-dandeli

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

1-sdd–dsad

Dandeli: ಗೆಳೆಯರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

1-adsasad

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡೋಣ: ಹುಕ್ಕೇರಿ ಶ್ರೀ

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

jagadeesh shettar

ಪರಿಷತ್ತಿಗೆ ಜಗದೀಶ್‌ ಶೆಟ್ಟರ್‌?

china flag

China ರಫ್ತು ಪ್ರಮಾಣ ಶೇ.7.5ರಷ್ಟು ಇಳಿಕೆ

police karnataka

PSI ಗಳಿಗೆ ಸಿಗುವುದೇ ವರ್ಗಾವಣೆ ಭಾಗ್ಯ?

TRAIN

Railway : ರೈಲ್ವೇ ಮುಂಗಾರು ಸೀಸನ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

UDAYAVANI MLA SANMVADA

Udayavani ಕಚೇರಿಯಲ್ಲಿ ಜಿಲ್ಲೆಯ ಹೊಸ ಶಾಸಕರೊಂದಿಗೆ ಅಭ್ಯುದಯ ಸಂವಾದ