ಗಾಂಧಿ ಸಾಕ್ಷಿ ಕಾಯಕ ಮೊಬೈಲ್‌ ಆ್ಯಪ್‌ ವಿಸ್ತರಿಸಲು ತೀರ್ಮಾನ


Team Udayavani, Jul 23, 2019, 3:08 AM IST

gandhi

ಬೆಂಗಳೂರು: ಕಾಮಗಾರಿಗಳ ವಿವಿಧ ಹಂತದ ನಿಖರ ಫೋಟೋಗಳನ್ನು ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದಲ್ಲಿ ಅಳವಡಿಸಲು “ಮೊಬೈಲ್‌ ಆ್ಯಪ್‌’ ಅನುಷ್ಠಾನಕ್ಕೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಇಲಾಖೆ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಬಿಲ್‌ ಪಾವತಿಸಲು ಲೋಪರಹಿತ ಹಾಗೂ ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತಹ ವ್ಯವಸ್ಥೆ ತರುವ ಉದ್ದೇಶದಿಂದ ಮೊಬೈಲ್‌ ಆ್ಯಪ್‌ ಅನುಷ್ಠಾನಕ್ಕೆ ತರಲಾಗುತ್ತಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಿಂದ “ನ್ಯಾಷನಲ್‌ ಇನಾ#ರ್‌ವೆುಟಿಕ್‌ ಸೆಂಟರ್‌’ (ಎನ್‌ಐಸಿ) ಮೂಲಕ ಅಭಿವೃದ್ಧಿಪಡಿಸಿರುವ “ಜಿಎಸ್‌ಕೆ ಆ್ಯಪ್‌’ ಪ್ರಾಥಮಿಕ ಹಂತದಲ್ಲಿ ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತರಲಾಗಿತ್ತು. ಅಲ್ಲಿ ಯಶಸ್ವಿಯಾಗಿ ಜಾರಿಗೆ ತಂದ ಬಳಿಕ ಇದೀಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಮೊಬೈಲ್‌ ಆ್ಯಪ್‌ ಅನುಷ್ಠಾನಕ್ಕೆ ತರಲು ಇಲಾಖೆ ಮುಂದಾಗಿದೆ.

ಪ್ರಸ್ತುತ ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಾರಂಭಿಕ ಹಂತದ ಫೋಟೋ, ಪರಿಶೀಲನಾ ಹಂತದ ಫೋಟೋ ಹಾಗೂ ಅಂತಿಮ ಹಂತ ಅಥವಾ ಕಾಮಗಾರಿ ಪೂರ್ಣಗೊಂಡ ಫೋಟೋಗಳನ್ನು ಜಿಪಿಎಸ್‌ ಕೋಆರ್ಡಿನೇಟ್‌ಗಳನ್ನು ಹಸ್ತಚಾಲಿತ (ಮ್ಯಾನುಯೆಲ್‌) ಪದ್ಧತಿಯಲ್ಲಿ ಮಾಡಲಾಗುತ್ತಿತ್ತು. ಈವರೆಗೆ ಜಿಯೊ-ಸ್ಟಾಂಪಿಂಗ್‌ ಮಾಡಲಾಗುತ್ತಿರಲಿಲ್ಲ. ಹೀಗಾಗಿ, ಅಳವಡಿಸಲಾದ ಕಾಮಗಾರಿಗಳ ಫೋಟೋಗಳಲ್ಲಿ ಸಾಕಷ್ಟು ಲೋಪಗಳು ಕಂಡು ಬರುತ್ತಿದ್ದವು.

ಅಲ್ಲದೇ ಒಂದೇ ಕಾಮಗಾರಿಗೆ ಒಂದಕ್ಕಿಂತ ಹೆಚ್ಚು ಫೋಟೋಗಳು ಅಳವಡಿಸಲಾಗುತ್ತಿತ್ತು. ಕಾಮಗಾರಿಗಳು ಪುನರಾವರ್ತನೆಗೊಳ್ಳುತ್ತಿದ್ದವು. ಇದರಿಂದ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಕಷ್ಟವಾಗುತ್ತಿತ್ತು. ಬಿಲ್‌ ಸೃಷ್ಟಿ ಹಾಗೂ ಬಿಲ್‌ ಪಾವತಿ ಎರಡರಲ್ಲೂ ವಿಳಂಬವಾಗುತ್ತಿತ್ತು. ಇದು ಹಣ ಅಪವ್ಯಯಕ್ಕೂ ಕಾರಣವಾಗುತ್ತಿತ್ತು. ಈ ಎಲ್ಲ ಲೋಪಗಳಿಗೆ ಪರಿಹಾರ ಕಂಡುಕೊಳ್ಳಲು ಜಿಎಸ್‌ಕೆ ಆ್ಯಪ್‌ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮತ್ತು ಅಧೀನ ಸಂಸ್ಥೆಗಳ ಕಾಮಗಾರಿಗಳ ವಿವಿಧ ಹಂತದ ಫೋಟೋಗಳನ್ನು ಅಳವಡಿಸಲು ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶ ಜಾರಿಗೆ ತರಲಾಗಿತ್ತು. ಇದರಲ್ಲಿ ಮೊಬೈಲ್‌ ಆ್ಯಪ್‌ ಅನುಷ್ಠಾನಕ್ಕೆ ತರುವ ಪ್ರಯತ್ನ 2016ರಲ್ಲಿ ಪ್ರಾರಂಭವಾಗಿತ್ತು. 2017ರಲ್ಲಿ ಇದಕ್ಕೊಂದು ರೂಪ ಕೊಟ್ಟು ಆಯ್ದ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ತರಲಾಗಿತ್ತು. ಬಳಿಕ ಅದರ ಸಾಧಕ-ಬಾಧಕಗಳನ್ನು ಗಮನಿಸಿ ಈಗ ಪೂರ್ಣ ಪ್ರಮಾಣದ ಮೊಬೈಲ್‌ ಆ್ಯಪ್‌ ಸಿದ್ಧಪಡಿಸಲಾಗಿದೆ.

ಜುಲೈ 25ರಿಂದ ಅನುಷ್ಠಾನ: ಈ ಜಿಎಸ್‌ಕೆ ಮೊಬೈಲ್‌ ಆ್ಯಪ್‌ಅನ್ನು ಪ್ರಾಥಮಿಕ ಹಂತದಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅನುಷ್ಠಾನಕ್ಕೆ ತರಲಾಗಿತ್ತು. ಅಲ್ಲಿ ಈ ಪ್ರಯೋಗ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ಅದರಂತೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಎಲ್ಲ ಜಿಪಂ, ತಾಪಂ, ಗ್ರಾಪಂ ಹಾಗೂ ಇತರೆ ಅಧೀನ ಇಲಾಖೆಗಳಾದ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ನಿಗಮ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ನಿರ್ಮಿತಿ ಕೇಂದ್ರಗಳಲ್ಲಿ ಇದೇ ತಿಂಗಳ 25ರಿಂದ ಕಡ್ಡಾಯವಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ.

ಏನಿದು ಜಿಎಸ್‌ಕೆ ಆ್ಯಪ್‌?: ಜಿಎಸ್‌ಕೆ ಮೊಬೈಲ್‌ ಆ್ಯಪ್‌ನಲ್ಲಿ ಜಿಯೋ ಸ್ಟಾಂಪಿಂಗ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಮೊಬೈಲ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡು, ಆ ಆ್ಯಪ್‌ ಮೂಲಕವೇ ಕ್ಯಾಮರಾ ಓಪನ್‌ ಮಾಡಿ ಕಾಮಗಾರಿಗಳ ಫೋಟೋ ತೆಗೆಯಬೇಕು. ಆಗ, ಆ ಫೋಟೋ ಯಾವ ಭೌಗೋಳಿಕ ಪ್ರದೇಶದ್ದು ಹಾಗೂ ಎಷ್ಟು ಸಮಯದಲ್ಲಿ ತೆಗೆಯಲಾಗಿದೆ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಇದರಿಂದ ಕಾಮಗಾರಿಗಳ ಪುನರಾವರ್ತನೆ ತಡೆಯಬಹುದು. ಒಂದು ಪ್ರದೇಶದ ಕಾಮಗಾರಿಯ ಫೋಟೋ ಹಾಕಿ ಇನ್ನೊಂದು ಪ್ರದೇಶದ ವಿವರಣೆ ಕೊಟ್ಟು ಬಿಲ್‌ ಮಂಜೂರು ಮಾಡಿಸಿಕೊಳ್ಳುವ ಪ್ರಯತ್ನಗಳಿಗೆ ಕೊನೆ ಬೀಳಲಿದೆ.

ಜಿಎಸ್‌ಕೆ ಆ್ಯಪ್‌ ಪ್ರಾಥಮಿಕ ಹಂತದಲ್ಲಿ ಎರಡು ತಿಂಗಳ ಹಿಂದೆ ತುಮಕೂರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿತ್ತು. ಅದರ ಯಶಸ್ಸು ಆಧರಿಸಿ ಈಗ ಎಲ್ಲ ಕಡೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಇದರಿಂದ ಕಾಮಗಾರಿಗಳ ಫೋಟೋಗಳನ್ನು ಅಳವಡಿಸುವಾಗ ಆಗುತ್ತಿದ್ದ ಗೊಂದಲಗಳಿಗೆ ಕೊನೆ ಬೀಳಲಿದೆ.
-ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.