ಮಾರುಕಟ್ಟೆಯಲ್ಲಿ ಚೈತನ್ಯ ಮೂಡಿಸಿದ ಚೌತಿ; ಸರಳವಾಗಿ ಸಂಪ್ರದಾಯದಂತೆ ಆಚರಣೆಗೆ ಸಿದ್ಧತೆ


Team Udayavani, Aug 21, 2020, 9:20 PM IST

ಮಾರುಕಟ್ಟೆಯಲ್ಲಿ ಚೈತನ್ಯ ಮೂಡಿಸಿದ ಚೌತಿ; ಸರಳವಾಗಿ ಸಂಪ್ರದಾಯದಂತೆ ಆಚರಣೆಗೆ ಸಿದ್ಧತೆ

ಕುಂದಾಪುರ: ಕೋವಿಡ್ ಸಂಕಷ್ಟದ ನಡುವೆ ಆಚರಣೆಗೆ ಬಂದ ವಿನಾಯಕ ಚತುರ್ಥಿ ಮಾರುಕಟ್ಟೆಯಲ್ಲಿ ತುಸು ಚೈತನ್ಯ ಮೂಡಿಸಿದೆ. ಒಂದಷ್ಟು ಜನರ ಓಡಾಟ, ವ್ಯಾಪಾರ, ಖರೀದಿ ಎಂದು ಆಶಾದಾಯಕವಾಗಿ ವಹಿವಾಟು ಆರಂಭವಾಗಿದೆ. ಶನಿವಾರದ ಮೆರುಗು ಶುಕ್ರವಾರ ಗೌರಿ ಹಬ್ಬ, ಶನಿವಾರ ಚತುರ್ಥಿ ಬಂದಿದ್ದು, ರವಿವಾರ ರಜೆ ಇರುವುದರಿಂದ ದೂರದೂರಿಂದ ಬರುವವರು ಸರಣಿ ರಜೆಯಲ್ಲಿ ಬಂದಿದ್ದಾರೆ. ಅನೇಕರು ಹಬ್ಬದ ಸಲುವಾಗಿ ಊರಿಗೆ ಬಂದಿದ್ದಾರೆ. ಆದರೆ ಕೊರೊನಾ ಹಾಟ್‌ಸ್ಪಾಟ್‌ ಪ್ರದೇಶದಲ್ಲಿ ಇರುವವರು ಊರಿಗೆ ಬರುತ್ತಿಲ್ಲ.

ಆಚರಣೆ
ಗಣೇಶೋತ್ಸವ ಸಾರ್ವಜನಿಕವಾಗಿ ಪೆಂಡಾಲ್‌ ಹಾಕಿ ಆಚರಣೆಗೆ ಒಂದಷ್ಟು ವಿಘ್ನಗಳೇ ಬಂದರೂ ದೇವಾಲಯ ಹಾಗೂ ಮನೆಗಳಲ್ಲಿ ಆಚರಣೆಗೆ ಯಾವುದೇ ತೊಡಕು ಇಲ್ಲ. ಸರಕಾರ ಕೂಡಾ ಮಾರ್ಗಸೂಚಿ ಪ್ರಕಟಿಸಿ ಜನರ ಸಂಖ್ಯೆ ಮಿತಿಯಲ್ಲಿಟ್ಟುಕೊಂಡು ಆಚರಣೆಗೆ ಅನುವು ಮಾಡಿದೆ. ಕೆಲವೆಡೆ ಸಾರ್ವಜನಿಕ ಆಚರಣೆಗೆ ಸಿದ್ಧತೆಗಳು ನಡೆದಿವೆ. ಅಂತಹ ಕಡೆಗಳಲ್ಲಿ ತೀರ್ಥ ಪ್ರಸಾದ ವಿತರಣೆ ಇಲ್ಲ, ಅನ್ನದಾನ ಇಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ ಆಚರಣೆಗೆ ಯಾವುದೇ ತೊಂದರೆ ಇಲ್ಲ. ಆದ್ದರಿಂದ ಊರಿನಲ್ಲಿ ಹಬ್ಬದ ವಾತಾವರಣ ನಿಶ್ಚಿತವಾಗಿ ಇರಲಿದೆ. ದೇವಾಲಯಗಳಲ್ಲೂ ವಿಗ್ರಹ ಪ್ರತಿಷ್ಠೆ ನಡೆದು ಪೂಜೆ, ಅರ್ಚನೆ, ಆರಾಧನೆಗಳು ನಡೆಯಲಿವೆ.

ಮಾರುಕಟ್ಟೆಯಲ್ಲಿ ಚಟುವಟಿಕೆ
ಹೆಚ್ಚಿನ ಮನೆಗಳಲ್ಲಿ ಹಬ್ಬದ ಆಚರಣೆ ಇರುವುದರಿಂದ ಮಾರುಕಟ್ಟೆಯಲ್ಲಿ ವ್ಯಾಪಾರ ಚುರುಕು ಪಡೆದಿದೆ. ನಿರೀಕ್ಷಿತವಾಗಿ ಅಲ್ಲದಿದ್ದರೂ ಭಾರೀ ಇಳಿಮುಖವೇನೂ ಅಲ್ಲ ಎನ್ನುತ್ತಾರೆ ವ್ಯಾಪಾರಿಗಳು. ಈ ಹಿಂದಿನ ಭೀತಿಯ ವಾತಾವರಣ ಇಲ್ಲ. ಹೂವಿನ ಮಾರುಕಟ್ಟೆ, ದಿನಸಿ ಅಂಗಡಿ ಗಳು, ತರಕಾರಿ ಅಂಗಡಿಗಳು, ಫ್ಯಾನ್ಸಿ ಅಂಗಡಿಗಳಲ್ಲಿ ವ್ಯಾಪಾರದ ಲಕ್ಷಣ ಇತ್ತು. ಗಣಪತಿ ವಿಗ್ರಹಗಳ ತಯಾರಿ ಕೂಡಾ ಭಾರೀ ಇಳಿಮುಖವಾಗಿಲ್ಲ. ಪೊಲೀಸ್‌ ಠಾಣೆಗೆ ಅನುಮತಿ ಕೋರಿ ಬಂದ ಅರ್ಜಿಗಳ ಸಂಖ್ಯೆಯೂ ಕಳೆದ ಬಾರಿಗಿಂತ ಕೇವಲ 6 ಕಡಿಮೆ. ತರಕಾರಿ, ಕಬ್ಬು, ಹೂವಿನ ದರದಲ್ಲಿ ಇಳಿಕೆಯಾಗಿಲ್ಲ. ಚೌತಿ ವ್ಯಾಪಾರ ಎಂದು ಏರಿಕೆಯೂ ಆಗಿಲ್ಲ.

ಪೇಟೆಯಲ್ಲಿ ಹಬ್ಬದ ಗೌಜಿ
ಕಾರ್ಕಳ: ಗೌರಿ-ಗಣೇಶ ಹಬ್ಬಕ್ಕೆ ಶುಕ್ರವಾರ ಕಾರ್ಕಳ ಪೇಟೆಯಲ್ಲಿ ವ್ಯಾಪಾರ ಆಶಾದಾಯಕವಾಗಿತ್ತು. ತಾಲೂಕಿನಲ್ಲಿ ವಿವಿಧೆಡೆ ಹಬ್ಬವನ್ನು ಆಚರಿಸಲಾಗುತ್ತಿದ್ದರೂ ಈ ಬಾರಿ ಸರಳವಾಗಿ ಆಚರಣೆಗೆ ಒತ್ತು ನೀಡಲಾಗಿದೆ. ಸರಕಾರದ ಮಾರ್ಗ ಸೂಚಿಗಳನ್ವಯ ಆಚರಣೆ ಮಾಡಬೇಕಿರು ವುದರಿಂದ ಸಾರ್ವಜನಿಕ ಸಮಿತಿಗಳು ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿವೆ. ಜನರೂ ಮನೆಗಳಲ್ಲಿ ಆಚರಣೆಗೆ ಹೆಚ್ಚು ಒತ್ತು ನೀಡಿರುವುದು ಕಂಡು ಬಂದಿದೆ. ಇನ್ನು ಮಾರುಕಟ್ಟೆಯಲ್ಲಿ ಖರೀದಿ ಆಶಾದಾಯಕವಾಗಿತ್ತು. ಹೂವು, ಹಣ್ಣುಗಳ ಬೆಲೆ ಏರಿಕೆಯಾಗಿತ್ತು. ಸಂಪ್ರದಾಯ ಪ್ರಕಾರ ಜನರು ಹಬ್ಬಕ್ಕೆ ಪೂರಕ ಖರೀದಿ ನಡೆಸಿದರು. ಮೂರು ಮಾರ್ಗದ ಹೂವಿನ ಅಂಗಡಿ ಮುಂತಾದ ಸ್ಥಳಗಳಲ್ಲಿ ಹೂವು, ಹಣ್ಣಿನ ಅಂಗಡಿಗಳಲ್ಲಿ ಶುಕ್ರವಾರ ವ್ಯಾಪಾರ ನಡೆದಿತ್ತು.

ಕಾರ್ಕಳ: ಸರಳ ಆಚರಣೆ
ಗಣೇಶೋತ್ಸವ ನಿಯಮದಂತೆ ನಡೆಸ ಬೇಕಾದ ಅನಿವಾರ್ಯ ಇರುವುದರಿಂದ ಗಣೇಶೋತ್ಸವ ಸಮಿತಿಗಳು ಸರಳ ಆಚರಣೆಗೆ ನಿರ್ಧರಿಸಿವೆ. ಕಾರ್ಕಳದ ಜೋಡುಕಟ್ಟೆ. ಬಸ್‌ಸ್ಟಾಂಡ್‌, ಅಜೆಕಾರು. ಎಣ್ಣೆಹೊಳೆ ಗಣೇಶ ಮಂದಿರ ಸಾಣೂರು, ಬೈಲೂರು, ಮಾಳ ಮುಂತಾದ ಕಡೆಗಳಲ್ಲಿ ಸರಳ ಆಚರಣೆ ನಡೆಯಲಿದೆ. ದೇವಸ್ಥಾನಗಳಲ್ಲಿ ಕೂಡ ಪೂರ್ವ ಸಂಪ್ರದಾಯದಂತೆ ಆಚರಣೆ ನಡೆಯಲಿದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.