ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ


Team Udayavani, Aug 13, 2020, 2:27 PM IST

ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ

ಬಳ್ಳಾರಿ: ವಿಘ್ನಗಳ ನಿವಾರಕ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಲು ಜಿಲ್ಲಾಡಳಿತ, ರಾಜ್ಯ ಸರ್ಕಾರ ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸಂಜೀವ ಮರಡಿ ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಸಂಪ್ರದಾಯದಲ್ಲಿ ಗಣೇಶನನ್ನು ಪ್ರಥಮ ಪೂಜಾ ಆರಾಧಕ,
ವಿಘ್ನಗಳ ನಿವಾರಕ ಎಂದೇ ಕರೆಯಲಾಗುತ್ತದೆ. ಆ.22 ರಂದು ಗಣೇಶ ಹಬ್ಬವಿದ್ದು, ಕಳೆದ ನೂರಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಕೆಲವೊಂದು ಜಿಲ್ಲಾಡಳಿತಗಳು ಕೋವಿಡ್‌ ನೆಪವೊಡ್ಡಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ಹೇರುತ್ತಿವೆ. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಸಹ ಸಾರ್ವಜನಿಕ ಗಣೇಶ ಉತ್ಸವ ಆಚರಿಸಲು
ಅಧಿಸೂಚನೆ ಹೊರಡಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ. ರಂಜಾನ್‌, ಬಕ್ರೀದ್‌ ಹಬ್ಬದಂದು ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸಲು 50 ಜನರಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಸಾರ್ವಜನಿಕ ಗಣೇಶ ಹಬ್ಬ ಆಚರಿಸಲು ನಿರ್ಬಂಧ
ಹೇರುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದಲ್ಲಿ ಕೋವಿಡ್‌ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಸಹ ಕೈಗೊಳ್ಳುತ್ತೇವೆ ಎಂದವರು ಕೋರಿದರು.

ಸಾರ್ವಜನಿಕವಾಗಿ ಗಣೇಶನನ್ನು ಪ್ರತಿಷ್ಠಾಪಿಸುವ ಗಣಪತಿ ಮಂಡಳಿಯವರು ಕಡ್ಡಾಯವಾಗಿ ಸಾಮಾಜಿಕ ಅಂತರ (ಬಾಕ್ಸ್ಗಳನ್ನು ಹಾಕಬೇಕು) ಕಾಪಾಡಬೇಕು. ಮಾಸ್ಕ್ ಧರಿಸಬೇಕು. ದರ್ಶನದ ವೇಳೆ ಗಲಾಟೆ, ಗದ್ದಲವಾಗದಂತೆ ಸರತಿ ಸಾಲು ವ್ಯವಸ್ಥೆ ಮಾಡಬೇಕು. ದರ್ಶನಕ್ಕೆ ಬರುವ ಭಕ್ತರಿಗೆ ಮಂಡಳಿಯಿಂದಲೇ ಸ್ಯಾನಿಟೈಸರ್‌, ಥರ್ಮಲ್‌ ಸ್ಕಾನರ್‌ ವ್ಯವಸ್ಥೆ ಮಾಡಬೇಕು. ಈ ಕುರಿತು ಸೋಂಕಿತರ ಲಕ್ಷಣಗಳುಳ್ಳವರ ಮಾಹಿತಿಯನ್ನು ಅಲ್ಲಿ ನಿಯೋಜಿಸಲಾಗಿದ್ದ ಪೊಲೀಸ್‌, ಆಶಾ  ಕಾರ್ಯಕರ್ತೆಯರಿಗೆ ನೀಡಲಾಗುವುದು. ಜತೆಗೆ ಗಣೇಶ ವಿಸರ್ಜನಾ ಮೆರವಣಿಗೆಯನ್ನು ಅತ್ಯಂತ ಕಡಿಮೆ ಜನರಿಂದ ನೆರವೇರಿಸಲಾಗುವುದು.

ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರ, ಭಿತ್ತಿಪತ್ರಗಳನ್ನು ವಿತರಿಸಲಾಗುವುದು. ಈ ಮೊದಲಿನಂತೆ 7, 9, 11 ದಿನಗಳ ಬದಲಿಗೆ 5 ದಿನಗಳ ಕಾಲ ಪ್ರತಿಷ್ಠಾಪಿಸಲು ಅನುಮತಿ ನೀಡಬೇಕು ಎಂದವರು ಕೋರಿದ್ದಾರೆ. ಒಂದುವೇಳೆ ಅನುಮತಿ ನೀಡದಿದ್ದರೂ ಸಾರ್ವಜನಿಕ ಗಣೇಶಗಳನ್ನು ಪ್ರತಿಷ್ಠಾಪಿಸಲಾಗುವುದು. ಹಿಂದುತ್ವದ ಹೆಸರಿನಲ್ಲಿ ಜಯಗಳಿಸಿರುವ ಶಾಸಕರು, ಸಂಸದರು ಅನುಮತಿ ನೀಡುವಂತೆ ಜಿಲ್ಲಾಡಳಿತ, ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದವರು ಎಚ್ಚರಿಸಿದರು.

ನಾಗರಾಜ್‌ ಕುಂದಾಪುರ, ಬಸವರಾಜ್‌ ಬಿಸಿಲಹಳ್ಳಿ, ದರೂರು ಶಾಂತನಗೌಡ, ವೆಂಕಟೇಶ್‌ ಹೊಸಪೇಟೆ, ದುಗೇìಶ್‌, ಹೇಮಂತ್‌, ಭರತ್‌ ರಾಮ್‌ ಇತರರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.