Gangolli ತ್ರಾಸಿ: ವ್ಯಕ್ತಿಯ ಮೃತದೇಹ ಪತ್ತೆ
Team Udayavani, Apr 4, 2024, 12:17 AM IST
ಗಂಗೊಳ್ಳಿ: ಇಲ್ಲಿನ ಠಾಣಾ ವ್ಯಾಪ್ತಿಯ ತ್ರಾಸಿ ಬೀಚ್ನಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಸಿಕ್ಕಿದ್ದು, ಅದರಲ್ಲಿದ್ದ ದಾಖಲೆಗಳನ್ನು ಪರಿಶೀಲಿಸಿದಾಗ ಮೃತಪಟ್ಟವರು ಕೋಟದ ಕಾವಾಡಿಯ ನಿವಾಸಿ ಸಂಜೀವ ಸುವರ್ಣ (67) ಎಂದು ತಿಳಿದು ಬಂದಿದೆ.
ಮದುವೆಯಾಗಿದ್ದು, ಮಕ್ಕಳಾಗಿರಲಿಲ್ಲ. ಇದಲ್ಲದೆ ಅನಾರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಆತ್ಮಹತ್ಯೆ ಏನಾದರೂ ಮಾಡಿಕೊಂಡಿರಬಹುದೇ ಎನ್ನುವ ಸಂಶಯ ವ್ಯಕ್ತವಾಗಿದೆ.