ಡ್ರಾವಿಡ್, ಗಂಗೂಲಿ ವಿರುದ್ಧ ವೃದ್ಧಿಮಾನ್ ಅಸಮಾಧಾನ
Team Udayavani, Feb 21, 2022, 6:45 AM IST
ಕೋಲ್ಕತಾ: ಶ್ರೀಲಂಕಾ ಸರಣಿಯ ಟೆಸ್ಟ್ ತಂಡದಿಂದ ಹೊರ ಬಿದ್ದಿರುವ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ನಿವೃತ್ತಿ ತೆಗೆದುಕೊಳ್ಳುವಂತೆ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದನ್ನು ಬಹಿರಂಗಪಡಿಸಿದ್ದಾರೆ.
ಮುಂದಿನ ಸರಣಿಗೆ ನನ್ನನ್ನು ಆಯ್ಕೆ ಮಾಡುತ್ತಿಲ್ಲ ಎಂದು ಟೀಮ್ ಮ್ಯಾನೇಜ್ ಮೆಂಟ್ ಮೊದಲೇ ಹೇಳಿತ್ತು. ಹೀಗಾಗಿ ತಂಡ ಪ್ರಕಟವಾಗುವ ಮುನ್ನ ಈ ಬಗ್ಗೆ ನಾನು ಎಲ್ಲಿಯೂ ಮಾತನಾಡುವಂತಿರಲಿಲ್ಲ. ನನಗೆ ನಿವೃತ್ತಿ ತೆಗೆದುಕೊಳ್ಳುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದರು ಎಂದು ವೃದ್ಧಿಮಾನ್ ಸಾಹಾ ಹೇಳಿದ್ದಾರೆ.
ಭರವಸೆ ನೀಡಿದ್ದ ಗಂಗೂಲಿ
ಟೀಮ್ ಇಂಡಿಯಾದಲ್ಲಿ ಸ್ಥಾನದ ಬಗ್ಗೆ ಚಿಂತಿಸಬೇಡ ಎಂದಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧವೂ ಸಾಹಾ ವಾಗ್ಧಾಳಿ ನಡೆಸಿದ್ದಾರೆ. ಕಿವೀಸ್ ವಿರುದ್ಧ ನಡೆದ ಕಾನು#ರ ಟೆಸ್ಟ್ ಪಂದ್ಯದಲ್ಲಿ ನೋವಿನ ನಡುವೆಯೂ ಬ್ಯಾಟ್ ಮಾಡಿ ಅಜೇಯ 61 ರನ್ ಗಳಿಸಿದ ಸಂದರ್ಭದಲ್ಲಿ ಗಂಗೂಲಿ ನನಗೆ ವಾಟ್ಸಾಪ್ ಮೂಲಕ ಶುಭ ಕೋರಿದ್ದರು; ತಾನು ಬಿಸಿಸಿಐ ಪ್ರಧಾನ ಹುದ್ದೆಯಲ್ಲಿ ಇರುವ ವರೆಗೂ ಭಾರತ ತಂಡದಲ್ಲಿ ಸ್ಥಾನದ ಬಗ್ಗೆ ಚಿಂತಿಸಬೇಡ ಎಂದು ಭರವಸೆ ನೀಡಿದ್ದರು. ಅವರ ಈ ಮಾತುಗಳನ್ನು ಕೇಳಿ ನನ್ನ ಆತ್ಮವಿಶ್ವಾಸ ಹೆಚ್ಚಾಗಿತ್ತು. ಆದರೆ ಇವೆಲ್ಲವೂ ಶೀಘ್ರವೇ ಬದಲಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ವಿಫಲನಾದೆ ಎಂದು ಸಾಹಾ ಅಸಮಾಧಾನ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ