ಘನ ತ್ಯಾಜ್ಯ ಘಟಕ ಸ್ಥಾಪನೆ ಎಂದು? ಸಂತೆಗೆ ಬರುವ ಗ್ರಾಮಸ್ಥರಿಗೆ ಗಬ್ಬು ವಾಸನೆ ಕಿರಿಕಿರಿ
Team Udayavani, Sep 29, 2020, 12:48 PM IST
ಶಿರೂರ: ಗ್ರಾಮಸ್ಥರು ಗ್ರಾಮದ ಹಲವಾರು ಕಡೆ ಬೇಕಾಬಿಟ್ಟಿ ಹಾಕಿದ ಕಸ ವಿಲೇವಾರಿ ಮಾಡಲು ಗ್ರಾಮಕ್ಕೆ ಘನ ತ್ಯಾಜ್ಯ ಘಟಕ ಅವಶ್ಯವಿದ್ದು, ಹಲವಾರು ಬಾರಿ ಸರಕಾರದ ಗಮನಕ್ಕೆ ತಂದರೂ ಸಹ ಇಲ್ಲಿನ ಸಮಸ್ಯೆ ಮಾತ್ರ ಕಾರ್ಯರೂಪಕ್ಕೆ ಬಾರದಂತಾಗಿದೆ.
ಹಿಂದಿನ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ ನೀಲಾನಗರ ರಸ್ತೆಗೆ ಹೊಂದಿಕೊಂಡಿರುವ ಸರಕಾರದ 1 ಎಕರೆ ಜಾಗದಲ್ಲಿ 25 ಲಕ್ಷ ವೆಚ್ಚದಲ್ಲಿ ಘನತ್ಯಾಜ್ಯ ಘಟಕ ಸ್ಥಾಪನೆ ಮಾಡಲು ಪಂಚಾಯತ್ ರಾಜ್ಯ ಇಲಾಖೆಗೆ ಮಂಜೂರಾತಿಗಾಗಿ ಪತ್ರ ಬರೆದಿದ್ದಾರೆ. ಗ್ರಾಮದ ಪ್ರತಿ ಮನೆಗಳಿಗೂ ಹಸಿ ಕಸ ಮತ್ತು ಒಣ ಕಸ ಹಾಕಲು ಡಬ್ಬಿಗಳನ್ನು ನೀಡುವುದರೊಂದಿಗೆ ಕಸ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡುವುದರ ಬಗ್ಗೆ ಈಗಾಗಲೇ ಸರಕಾರ ಗಮನಕ್ಕೆ ತಂದಿದ್ದಾರೆ. ಈ ಕಾರ್ಯ ಮಾತ್ರ ವಿಳಂಬವಾಗುತ್ತಿರುವುದರಿಂದ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಯಾವಾಗ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.
ಶಿರೂರ ಗ್ರಾಪಂ ಎದುರೆ ತಿಪ್ಪೆ ಗುಂಡಿ: ಗ್ರಾಪಂ ಎದುರಿನ ಜಾಗದಲ್ಲಿ ಗ್ರಾಮಸ್ಥರು ಹಾಕಿದ ಕಸದ ರಾಶಿ ಸುಮಾರು ವರ್ಷಗಳಿಂದ ಹಾಗೇ ಉಳಿದಿದೆ. ಪ್ರತಿ ಸೋಮವಾರ ಇದೇ ಸ್ಥಳದಲ್ಲಿ ವಾರದ ಸಂತೆ ನಡೆಯುತ್ತದೆ. ಸಂತೆಗೆ ಬರುವ ಗ್ರಾಮಸ್ಥರಿಗೆ ಗಬ್ಬು ವಾಸನೆ ಕಿರಿಕಿರಿ ಉಂಟು ಮಾಡುತ್ತಿದೆ. ಇದೇ ಜಾಗದಲ್ಲಿ ಜನರಿಗೆ ಅನುಕೂಲದ ದೃಷ್ಟಿಯಿಂದ ಸಂತೆ ಕಟ್ಟೆ ನಿರ್ಮಾಣ ಮಾಡಲು ಗ್ರಾಪಂ ಸಹ ಈ ಬಗ್ಗೆ ಠರಾವು ಮಾಡಿದ್ದರೂ ಜಾರಿಗೊಂಡಿಲ್ಲ. ಜನಪ್ರತಿನಿಧಿಗಳು, ಗ್ರಾಪಂ ಅ ಧಿಕಾರಿಗಳು ಗಮನಹರಿಸಿ ಅಲ್ಲಲ್ಲಿ ಬಿದ್ದಿರುವ ಕಸ ವಿಲೇವಾರಿ ಮಾಡುವುದರೊಂದಿಗೆ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!