ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ


Team Udayavani, Apr 22, 2024, 11:12 PM IST

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಕುಂಬಳೆ: ಎಣ್ಮಕಜೆ ಗ್ರಾಮ ಪಂಚಾಯತ್‌ನ ಹದಿನಾಲ್ಕನೇ ವಾರ್ಡ್‌ ವ್ಯಾಪ್ತಿಯ ಶೇಣಿ ಮಣಿಯಂಪಾರೆ ಸಮೀಪದ ಬಾರೆದಳ ಎಂಬಲ್ಲಿ ಜನ ವಾಸ ಇರುವ ಮನೆಯೊಂದಕ್ಕೆ ಸೋಮವಾರ ಮಧ್ಯಾಹ್ನದ ಬಳಿಕ ಆಕಸ್ಮಿಕವಾಗಿ ಬೆಂಕಿ ಹಿಡಿದು ಹೊತ್ತಿ ಉರಿದು ಸಂಪೂರ್ಣ ನಾಶವಾದ ಘಟನೆ ನಡೆದಿದೆ.

ದಿ| ಕುಟ್ಟಿ ನಾಯ್ಕ ಅವರ ಪುತ್ರ ಬಟ್ಯ ನಾಯ್ಕ ಅವರ ಹೆಂಚು ಹಾಸಿದ ಮನೆಗೆ ಬೆಂಕಿ ಹಿಡಿದು ನಾಶವಾಗಿದೆ. ಬಟ್ಯ ನಾಯ್ಕ ಹಾಗೂ ಇವರ ಪುತ್ರನ ಇಬ್ಬರು ಪುಟಾಣಿ ಮಕ್ಕಳು ಮಾತ್ರವೇ ಮನೆಯೊಳಗಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.

ಮಧ್ಯಾಹ್ನ ಬಳಿಕ ಮನೆಯಲ್ಲಿ ಸಾಕಿದ ದನದ ಹಾಲು ಕರೆದು ಸಮೀಪದ ಡೇರಿಗೆ ಕೊಡಲು ಇವರ ಪುತ್ರನ ಪತ್ನಿ ನಳಿನಿ ತೆರಳಿದ್ದು, ಅ ಬಳಿಕ ಅಲ್ಪ ಹೊತ್ತಿನಲ್ಲಿ ಮನೆಯ ಕೋಣೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳದಲ್ಲಿದ್ದ ಬಟ್ಯ ನಾಯ್ಕ ತಿಳಿಸಿದ್ದಾರೆ.

ತತ್‌ಕ್ಷಣ ಮಕ್ಕಳನ್ನು ಕರೆದುಕೊಂಡು ಸಮೀಪದಲ್ಲಿರುವವರಿಗೆ ವಿಷಯ ತಿಳಿಸುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಮರದ ಮಾಡನ್ನು ಸಂಪೂರ್ಣ ಅವರಿಸಿಕೊಂಡಿತ್ತು.

ಮನೆಯಲ್ಲಿದ್ದ ನಗ-ನಗದು,
ಸೊತ್ತುಗಳು ಬೆಂಕಿಗಾಹುತಿ
ಬೆಂಕಿಯನ್ನು ನಂದಿಸುವ ಪ್ರಯತ್ನದ ನಡುವೆ ಮನೆಯೊಳಗೆ ಇದ್ದ ನಗ-ನಗದು ಸಹಿತ ಸ್ಥಳದ ರೇಕಾರ್ಡ್‌, ಗಾದ್ರೆಜ್‌, ಟಿವಿ, ಫ್ರಿಡ್ಜ್ ಬೆಂಕಿಗೆ ಆಹುತಿಯಾಗಿದೆ. ತುಂಬಿಸಿಟ್ಟಿದ್ದ ಗ್ಯಾಸ್‌ ಸಿಲಿಂಡರ್‌ ಬೆಂಕಿ ಹಿಡಿದು ಸುಟ್ಟು ರಟ್ಟಿತ್ತು. ಇದರ ರಭಸಕ್ಕೆ ಮನೆಯ ಗೋಡೆಗಳು ಒಡೆದು ಹೋಗಿದೆ. ಸ್ಥಳೀಯರು ಹರಸಾಹಸ ಪಟ್ಟು ಮನೆಯ ಅಡುಗೆ ಕೋಣೆಯೊಳಗಿದ್ದ ಗ್ಯಾಸ್‌ ಸಿಲಿಂಡರ್‌ ಅನ್ನು ಹೊರ ತೆಗೆದು ಬೆಂಕಿ ಆರಿಸುವ ಕಾರ್ಯದಲ್ಲಿ ತೊಡಗಿದ್ದರು.

ತತ್‌ಕ್ಷಣ ಕಾಸರಗೋಡಿನಿಂದ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಸಹಕರಿಸಿದ್ದರು. ಮನೆಯೊಳಗಿದ್ದ ಮನೆಯ ರೇಕಾರ್ಡ್‌, ಐಡೆಂಟಿ ಕಾರ್ಡ್‌ ಶಾಲಾ ಸರ್ಟಿಫಿಕೇಟ್‌ ಸಹಿತ ಚಿನ್ನ ಹಣ ಇನ್ನಿತರ ವಸ್ತುಗಳು ಮನೆ ಸಂಪೂರ್ಣ ಹೊತ್ತಿ ನಾಶವಾಗಿದೆ. ಎಣ್ಮಕಜೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಸೋಮಶೇಖರ್‌ ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಸೇರಿಕೊಂಡು ಮನೆಯವರಿಗೆ ವಾಸಿಸಲು ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿದ್ದಾರೆ.

 

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.