Gastroenteritis: ಹೊಟ್ಟೆಗೆ ಜ್ವರ ಬಂದರೆ…!


Team Udayavani, Oct 8, 2023, 8:34 AM IST

2-health

ಗ್ಯಾಸ್ಟ್ರೊಎಂಟರೈಟಿಸ್‌ ಎಂಬುದನ್ನು ಸರಳವಾಗಿ ಹೊಟ್ಟೆಯ ಜ್ವರ ಎಂಬುದಾಗಿಯೂ ಹೇಳಬಹುದು; ಇದು ಕರುಳಿನಲ್ಲಿ ಉಂಟಾಗುವ ವೈರಾಣು ಸೋಂಕಿನಿಂದ ಕಾಣಿಸಿಕೊಳ್ಳುತ್ತದೆ. ಸೋಂಕುಪೀಡಿತ ವ್ಯಕ್ತಿಯ ಸಂಪರ್ಕ ಅಥವಾ ಕಲುಷಿತ ನೀರು, ಆಹಾರದಿಂದ ಇದು ಹರಡುತ್ತದೆ. ಮಳೆಗಾಲದಲ್ಲಿ ಕೊಳಕು ನೀರು ಕುಡಿಯುವ ನೀರಿನ ಜತೆಗೆ ಸೇರಿಕೊಳ್ಳುವುದರಿಂದಾಗಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಇದರ ಉಪದ್ರವ ಹೆಚ್ಚು.

ಸಾಮಾನ್ಯವಾಗಿ ಸರಿಯಾದ ಆರೈಕೆ ಒದಗಿಸಿದರೆ ಇದು ತಾನಾಗಿಯೇ ವಾಸಿಯಾಗುತ್ತದೆ. ಈ ಕಾಯಿಲೆಯ ಬಹಳ ಸಾಮಾನ್ಯವಾದ ಲಕ್ಷಣ ಎಂದರೆ ರಕ್ತಮಿಶ್ರಿತವಲ್ಲದ, ಆದರೆ ನೀರಾದ ಮಲವಿಸರ್ಜನೆಯ ಜತೆಗೆ ಹೊಟ್ಟೆ ತೊಳೆಸುವಿಕೆ ಮತ್ತು ವಾಂತಿ. ಇವುಗಳ ಜತೆಗೆ ಹೊಟ್ಟೆ ನೋವು ಮತ್ತು ಕರುಳು ಹಿಡಿದುಕೊಳ್ಳುವುದೂ ಇರಬಹುದು. ಕೆಲವರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ಆಗೀಗೊಮ್ಮೆ ತಲೆನೋವು ಮತ್ತು ಮೈಕೈ ನೋವು ಕೂಡ ಇರಬಹುದಾಗಿದೆ. ರೋಗಿಗಳು ಸಾಮಾನ್ಯವಾಗಿ ಒಂದೆರಡು ದಿನಗಳಲ್ಲಿ ಚೇತರಿಸಿಕೊಳ್ಳುತ್ತಾರೆ; ಆದರೆ ಕೆಲವೊಮ್ಮೆ ಲಕ್ಷಣಗಳು ಒಂದು ವಾರದವರೆಗೂ ಇರಬಹುದು.

ಆದರೆ ಸಣ್ಣ ಮಕ್ಕಳು ಮತ್ತು ವಯೋವೃದ್ಧರಲ್ಲಿ ಹಾಗೂ ರೋಗ ನಿರೋಧಕ ಶಕ್ತಿಯು ದುರ್ಬಲವಾಗಿರುವವರಲ್ಲಿ ಈ ಹೊಟ್ಟೆಯ ಜ್ವರವು ಅಪಾಯಕಾರಿಯಾಗಿದ್ದು, ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದ ತತ್‌ಕ್ಷಣ ವೈದ್ಯಕೀಯ ಆರೈಕೆಯನ್ನು ಪಡೆದುಕೊಳ್ಳಬೇಕು. ಲಕ್ಷಣಗಳು ತೀವ್ರವಾಗಿದ್ದು, ಸೂಕ್ತವಾದ ಆರೈಕೆಯನ್ನು ಪಡೆಯದೆ ಇದ್ದಲ್ಲಿ ಅದರಿಂದ ಮೂತ್ರಪಿಂಡ ವೈಫ‌ಲ್ಯ, ರಕ್ತದೊತ್ತಡ ಕಡಿಮೆಯಾಗುವಂತಹ ಪ್ರಾಣಾಪಾಯಕಾರಿ ಸಮಸ್ಯೆಗಳು ತಲೆದೋರಬಹುದಾಗಿದೆ. ಮಲದಲ್ಲಿ ರಕ್ತ, ವಾಂತಿಯಾಗುವುದು, ನಿರ್ಜಲೀಕರಣದ ಲಕ್ಷಣಗಳು (ಬಾಯಾರಿಕೆ ಹೆಚ್ಚುವುದು, ಮೂತ್ರ ವಿಸರ್ಜನೆ ಕಡಿಮೆಯಾಗುವುದು, ಗಾಢ ಬಣ್ಣದ ಮೂತ್ರ) ಇತ್ಯಾದಿ ಎಚ್ಚರಿಕೆಯ ಲಕ್ಷಣಗಳು ಕಾಣಿಸಿಕೊಂಡರೆ ಅಥವಾ ಬೇಧಿ ಒಂದೆರಡು ದಿನಗಳಿಗಿಂತ ಹೆಚ್ಚು ಕಾಲ ಇದ್ದಲ್ಲಿ ತತ್‌ಕ್ಷಣ ವೈದ್ಯಕೀಯ ಆರೈಕೆಗೆ ಒಳಗಾಗಬೇಕು.

ಈ ಅನಾರೋಗ್ಯದ ಸಮಯದಲ್ಲಿ ಆರೈಕೆಯ ಪ್ರಧಾನ ವಿಧಾನವೆಂದರೆ ಸಾಕಷ್ಟು ನೀರು ಕುಡಿಯುವ ಮೂಲಕ ದೇಹದಲ್ಲಿ ನೀರಿನಂಶ ಕುಸಿಯದಂತೆ ಕಾಪಾಡಿಕೊಳ್ಳುವುದು ಮತ್ತು ಜೀರ್ಣಗೊಳ್ಳಲು ಸುಲಭವಾದ ಲಘು-ಮೃದು ಆಹಾರ ಸೇವನೆ. ಕಾಫಿ, ಹಾಲು, ಸೋಡಾ ಪಾನೀಯಗಳು, ಮಸಾಲೆ ಹಾಗೂ ಎಣ್ಣೆಪದಾರ್ಥಗಳ ಸೇವನೆ ಕಡಿಮೆ ಮಾಡಿ. ಶಕ್ತಿಯ ತತ್‌ಕ್ಷಣದ ಮೂಲವಾಗಬಲ್ಲ ಹಣ್ಣಿನ ರಸಗಳು, ಪ್ರೊಬಯೋಟಿಕ್ಸ್‌ ಮೂಲವಾಗಿರುವ ಮಜ್ಜಿಗೆಯನ್ನು ಸೇವಿಸಬಹುದು. ಚೇತರಿಸಿಕೊಳ್ಳುವ ತನಕ ಸಾಕಷ್ಟು ವಿಶ್ರಾಂತಿ ಪಡೆಯಿರಿ ಮತ್ತು ದೇಹ ದಣಿಯುವಂತಹ, ದೇಹ ದಂಡಿಸುವ ಕೆಲಸಗಳಲ್ಲಿ ತೊಡಗಬೇಡಿ.

ರೋಗ ಬಂದ ಬಳಿಕ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ರೋಗ ಬಾರದಂತೆ ತಡೆಯುವುದೇ ಅತ್ಯಂತ ಸೂಕ್ತ. ಹಾಗಾಗಿ ಊಟ-ಉಪಾಹಾರ ಸೇವಿಸುವುದಕ್ಕೆ ಮುನ್ನ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವುದು, ಕುದಿಸಿ ಆರಿಸಿದ ನೀರನ್ನೇ ಕುಡಿಯುವುದು, ಆಹಾರವನ್ನು ಸರಿಯಾಗಿ ಬೇಯಿಸಿ, ಕುದಿಸಿ ಸೇವಿಸುವಂತಹ ವೈಯಕ್ತಿಕ ನೈರ್ಮಲ್ಯ ಕ್ರಮಗಳನ್ನು ಪಾಲಿಸುವುದು ಉತ್ತಮ.

-ಡಾ| ಅನುರಾಗ್‌ ಶೆಟ್ಟಿ,

ಮೆಡಿಕಲ್‌ ಗ್ಯಾಸ್ಟ್ರೊಎಂಟರಾಲಜಿ,

ಕೆಎಂಸಿ ಆಸ್ಪತ್ರೆ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಗ್ಯಾಸ್ಟ್ರೊಎಂಟರಾಲಜಿ ವಿಭಾಗ, ಕೆಎಂಸಿ ಆಸ್ಪತ್ರೆ, ಮಂಗಳೂರು)

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.