ಜಿಡಿಪಿ ಕುಸಿತ, ಉದ್ಯೋಗ ನಷ್ಟ, ಬಡತನ ಏಳು ವರ್ಷಗಳ ಮೋದಿ ಸಾಧನೆ: ಸಿದ್ದರಾಮಯ್ಯ


Team Udayavani, Aug 9, 2021, 10:00 PM IST

ಜಿಡಿಪಿ ಕುಸಿತ, ಉದ್ಯೋಗ ನಷ್ಟ, ಬಡತನ ಏಳು ವರ್ಷಗಳ ಮೋದಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು: ಅರವತ್ತು ತಿಂಗಳು ಅಧಿಕಾರ ಕೊಟ್ಟರೆ ದೇಶದ ಸಾಮಾಜಿಕ – ಆರ್ಥಿಕ ಚಿತ್ರಣ ಬದಲಾಯಿವುದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಏಳು ವರ್ಷಗಳ ಆಡಳಿತದಲ್ಲಿ ಐವತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕ್ವಿಟ್‌ ಇಂಡಿಯಾ ಚಳುವಳಿ ದಿನದ ಸ್ಮರಣಾರ್ಥ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಏಳು ವರ್ಷಗಳಲ್ಲಿ ಸಾಮಾನ್ಯ ಶೇ.23 ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ಹನ್ನೆರಡು ಕೋಟಿ ಉದ್ಯೋಗ ನಷ್ಟವಾಗಿದೆ, ದೇಶದ ಜಿ.ಡಿ.ಪಿ -7.7 ಕ್ಕೆ ಬಂದಿದೆ. ಇದು ದೇಶಕ್ಕೆ ಮೋದಿಯವರ ಕೊಡುಗೆ ಎಂದು ಟೀಕಿಸಿದರು.

ದೇಶದಲ್ಲಿ ಜನರ ಜೀವನ ನಿರ್ವಹಣಾ ವೆಚ್ಚ ದುಪ್ಪಟ್ಟಾಗಿದ್ದರೂ ಸುಳ್ಳು ಹೇಳಿಕೊಂಡು ಅಭಿವೃದ್ಧಿ ಎಂದು ನಂಬಿಸುತ್ತಿದ್ದಾರೆ. ಭಾರತದಲ್ಲಿ ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ ಎಂದು ಹೇಳಿದರು.

ಸಾವರ್ಕರ್‌ ಅವರಿಂದ ಹಿಡಿದು ಭಾರತೀಯ ಜನತಾ ಪಕ್ಷದ ಯಾವೊಬ್ಬ ನಾಯಕನೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ. ತ್ಯಾಗ ಬಲಿದಾನಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್‌ ಮಾತ್ರ. ಕಾಂಗ್ರೆಸ್‌ ತೊರೆದು ಹೋದವರು ಸೈದ್ಧಾಂತಿಕ ಬದ್ಧತೆಯಿಲ್ಲದವರು ಎಂದು ತಿಳಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಮಾಡಿದ್ದೆವು. ಟಿಪ್ಪುವಿನ ದಿವಾನರಾಗಿದ್ದ ಪೂರ್ಣಯ್ಯನವರು ಹಿಂದುವಲ್ಲವೇ, ಹಣಕಾಸು ಮಂತ್ರಿಯಾಗಿದ್ದ ಕೃಷ್ಣಸ್ವಾಮಿ ಹಿಂದುವಲ್ಲವೇ. ಮೊಘಲರ ಆಸ್ಥಾನದಲ್ಲಿ ಉನ್ನತ ಹುದ್ದೆಯಲ್ಲಿದ್ದವರ ಪೀಳಿಗೆಯವರೇ ಇಂದು ಆರ್‌ಎಸ್‌ಎಸ್‌ ನ ನಾಯಕರಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ ತಗ್ಗಿದ ಕೋವಿಡ್ : ಇಂದು 1186 ಪ್ರಕರಣ ಪತ್ತೆ| 24 ಜನರ ಸಾವು

ಕ್ವಿಟ್‌ ಇಂಡಿಯಾ ಚಳವಳಿ ದಿನ, ಗಣರಾಜ್ಯೋತ್ಸವ ದಿನ, ಸ್ವಾತಂತ್ರ್ಯ ದಿನಾಚರಣೆ ಮುಂತಾದ ಪ್ರಮುಖ ದಿನಗಳಂದು ನಾವೆಲ್ಲ ತ್ಯಾಗ ಬಲಿದಾನದ ಮನಸ್ಥಿತಿ ಬೆಳೆಸಿಕೊಳ್ಳುವ ಪ್ರತಿಜ್ಞೆ ಮಾಡಬೇಕಾಗುತ್ತದೆ. ಜೊತೆಗೆ ಬಿಜೆಪಿಯನ್ನು ತೊಲಗಿಸುವ ಕೆಲಸಕ್ಕೆ ಒಂದಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಆಹಮದ್‌, ರಾಮಲಿಂಗಾರೆಡ್ಡಿ,ಮಾಜಿ ಸಚಿವ ಆರ್‌.ವಿ.ದೇಶಪಾಂಡೆ, ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌, ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಮತ್ತಿತರರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಿಂದ ಕೆಪಿಸಿಸಿ ಕಚೇರಿವರೆಗೆ ಧ್ವಜ ಪಥ ಸಂಚಲನ ನಡೆಸಲಾಯಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.