ಮುಂಗಾರು ಬಿತ್ತನೆಗೆ ಮೊದಲು ಬೀಜೋಪಚಾರ; ಬೀಜಾಮೃತ ವಿಧಾನ ಅನುಸರಿಸಿ

ಫಸಲು ಸಂರಕ್ಷಣೆ, ಇಳುವರಿ ಹೆಚ್ಚಳ

Team Udayavani, May 21, 2020, 6:19 AM IST

ಮುಂಗಾರು ಬಿತ್ತನೆಗೆ ಮೊದಲು ಬೀಜೋಪಚಾರ; ಬೀಜಾಮೃತ ವಿಧಾನ ಅನುಸರಿಸಿ

ಕೋಟ: ರೈತ ಮುಂಗಾರುವಿನ ಸಿಂಚನಕ್ಕಾಗಿ ಕಾದು ಕುಳಿತಿದ್ದು ಕರಾವಳಿಯಲ್ಲಿ ಭತ್ತದ ಬೇಸಾಯದ ಚಟುವಟಿಕೆ ಇನ್ನು ಕೆಲವೇ ದಿನಗಳಲ್ಲಿ ಚುರುಕುಗೊಳ್ಳಲಿದೆ. ಆದರೆ ಭತ್ತದ ಬೇಸಾಯದಲ್ಲಿ ರೈತರಿಗೆ ಬಹುವಾಗಿ ಕಾಡುವ ಸಮಸ್ಯೆಗಳಲ್ಲಿ ರೋಗಬಾಧೆ, ಇಳುವರಿ ಕುಸಿತ, ಮಣ್ಣಿನ ಫಲವತ್ತತೆ ಕೊರತೆ ಪ್ರಮುಖವಾದದ್ದು. ಬೀಜದಿಂದ ಅನೇಕ ಹಾನಿಕಾರಕ ರೋಗಾಣುಗಳಾದ ಶಿಲೀಂಧ್ರ, ದುಂಡಾಣು ಮತ್ತು ನಂಜಾಣು ಸೂಕ್ಷ್ಮ ಜೀವಿಗಳು ಬೀಜಗಳ ಹೊರಮೈ ಹಾಗೂ ಒಳಮೈ ಆವರಿಸಿ ಬೀಜಗಳು ಮೊಳಕೆಯೊಡೆಯುವಾಗ ಸಸಿಗಳು ಬೆಳೆಯುವಾಗ ಜತೆಯಲ್ಲಿ ಬೆಳೆಯ ವಿವಿಧ ಬೆಳವಣಿಗೆಯ ಹಂತಗಳ‌ಲ್ಲಿ ರೋಗವು ಉಲ್ಬಣಿಸಿ ಇಳುವರಿ ಹಾನಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಸಾಯನಿಕವಾದ ಬೀಜೋಪಚಾರ ಅಥವಾ ಸಾವಯವದ ಬೀಜಾಮೃತ ವಿಧಾನಗಳನ್ನು ಬಳಸಿ ಅಧಿಕ ಇಳುವರಿ ಹಾಗೂ ರೋಗಗಳಿಂದ ಮುಕ್ತಿ ಪಡೆಯಬಹುದು ಹಾಗೂ ಬೀಜ ಮೊಳಕೆಯೊಡೆಯುವಿಕೆ ಹಾಗೂ ಸಸಿಗಳ ಬೆಳವಣಿಗೆ ಉತ್ತಮಗೊಳ್ಳಲು ಬೀಜಾಮೃತ ವಿಧಾನ ಅತ್ಯಂತ ಸಹಕಾರಿಯಾಗುತ್ತದೆ.

ಬೀಜೋಪಚಾರ
ಮಾಡುವುದು ಹೇಗೆ ?
ಇದು ರಾಸಾಯನಿಕ ವಿಧಾನವಾಗಿದ್ದು ಪ್ರತಿ ಎಕ್ರೆಗೆ 25 ರಿಂದ 30 ಕೆ.ಜಿ ಭತ್ತದ ಬೀಜಕ್ಕೆ 1:4 ಪ್ರಮಾಣದ ಉಪ್ಪಿನ ದ್ರಾವಣದಲ್ಲಿ (4 ಲೀ. ನೀರಿಗೆ 1 ಕೆ.ಜಿ ಉಪ್ಪು) ಅದ್ದಿ ಜೊಳ್ಳು ಬೀಜಗಳನ್ನು ಬೇರ್ಪಡಿಸಿ ಗಟ್ಟಿಯಾದ ಬೀಜಗಳನ್ನು ಬೇರ್ಪಡಿಸಿದ ನಂತರ 2 ರಿಂದ 3 ಬಾರಿ ತಣ್ಣೀರಿನಲ್ಲಿ ತೊಳೆದು 24 ಗಂಟೆಗಳ ಕಾಲ ನೀರಿನಲ್ಲಿ ನೆನಸಿ ಹೊರತೆಗೆದು ಎಕರೆಗೆ ಬೇಕಾದ 25 ರಿಂದ 30 ಕೆ.ಜಿ ಬಿತ್ತನೆ ಬೀಜಕ್ಕೆ 50 ರಿಂದ 60 ಗ್ರಾಂ ಕಾರ್ಬೆಂಡೆಜಿಮ್‌ (ಪ್ರತಿ ಕೆ.ಜಿ ಬಿತ್ತನೆ ಬೀಜಕ್ಕೆ 2ಗ್ರಾಂ) ಎಂಬ ಶಿಲೀಂಧ್ರ ನಾಶಕವನ್ನು ಚೆನ್ನಾಗಿ ಮಿಶ್ರಣ ಮಾಡಿ, ನೆರಳಿನಲ್ಲಿ ಒಣಗಿಸಿ.ಬೀಜೋಪಚಾರ ಮಾಡಿದ ಬಿತ್ತನೆ ಬೀಜವನ್ನು ಚೀಲದಲ್ಲಿ ಗಟ್ಟಿಯಾಗಿ ಕಟ್ಟಿ, ಮೊಳಕೆಯೊಡೆಯಲು ಇಟ್ಟು ಬಿತ್ತನೆ ಮಾಡಬೇಕು. ಈ ಸಂದರ್ಭದಲ್ಲಿ ಶಿಫಾರಸು ಮಾಡಿದ ಶಿಲೀಂಧ್ರನಾಶಕವನ್ನು ನಿರ್ದಿಷ್ಟ ಪ್ರಮಾಣದಲ್ಲಿ ಉಪಯೋಗಿಸಬೇಕು ಹಾಗೂ ಬೀಜೋಪಚಾರ ಮಾಡಿದ ಬಿತ್ತನೆ ಬೀಜಗಳನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಬಿತ್ತನೆ ಮಾಡಬೇಕು.


ಬೀಜಾಮೃತ ವಿಧಾನ
ಇದು ಸಾವಯವ ವಿಧಾನವಾಗಿದ್ದು ಇಳುವರಿ ಹೆಚ್ಚಿಸುವ ಸಲುವಾಗಿ ಅತ್ಯಂತ ಅಗತ್ಯವಾದದ್ದು. ಬೀಜ ಮೊಳಕೆಯೊಡೆಯುವಿಕೆ ಹಾಗೂ ಸಸಿಗಳ ಬೆಳವಣಿಗೆ ಉತ್ತಮಗೊಳ್ಳಲು ಈ ವಿಧಾನ ಸಹಕಾರಿ 5 ಕೆ.ಜಿ ದೇಸಿ ಹಸುವಿನ ಸೆಗಣಿಯನ್ನು ಒಂದು ಬಟ್ಟೆಯಲ್ಲಿ ಮೂಟೆ ಕಟ್ಟಿ. ಇದನ್ನು 20 ಲೀಟರ್‌ ನೀರಿನಲ್ಲಿ 12 ಗಂಟೆಗಳ ಕಾಲ ಇಳಿಬಿಡಬೇಕು. ಒಂದು ಲೀಟರ್‌ ನೀರಿಗೆ 50 ಗ್ರಾಂ ಸುಣ್ಣವನ್ನು ಬೆರೆಸಿ, ಇದನ್ನು ರಾತ್ರಿ ಪೂರ್ತಿ ನೆನೆಯಲು ಬಿಟ್ಟು ಮರುದಿನ ಬೆಳಿಗ್ಗೆ, ಹಸುವಿನ ಸಗಣಿಯ ಮೂಟೆಯನ್ನು ಮೂರು ಬಾರಿ ನೀರಿನಲ್ಲಿ ಚೆನ್ನಾಗಿ ಕುಲುಕಿಸಿ, ಇದರಿಂದ ಸಗಣಿಯ ಸತ್ವವು ಆ ನೀರಿನಲ್ಲಿ ಸಂಗ್ರಹವಾಗುವಂತೆ ಮಾಡಿ ತಯಾರಿಸಿದ ನೀರಿನ ದ್ರಾವಣದಲ್ಲಿ ಸ್ವಲ್ಪ ಮಣ್ಣನ್ನು ಸೇರಿಸಿ ಮತ್ತು ಅದನ್ನು ಚೆನ್ನಾಗಿ ಕುಲುಕಿಸಿ. ಕೊನೆಯದಾಗಿ ತಯಾರಿಸಿದ ದ್ರಾವಣದಲ್ಲಿ 5 ಲೀಟರ್‌ ದೇಶಿ ಹಸುವಿನ ಮೂತ್ರ ಸೇರಿಸಿ ಸುಣ್ಣದ ನೀರನ್ನು ಸೇರಿಸಿ ಚೆನ್ನಾಗಿ ಕಲಿಕಿದರೆ ಬೀಜಾಮೃತ ಸಿದ್ಧವಾಗುತ್ತದೆ.

ಉತ್ತಮ ಫಸಲು ಹಾಗೂ ರೋಗವನ್ನು ತಡೆಗಟ್ಟುವ ಸಲುವಾಗಿ ಬಿತ್ತನೆಗೆ ಮೊದಲು ರೈತರು ಬೀಜೋಪಚಾರ ಅಥವಾ ಬೀಜಾಮೃತ ವಿಧಾನವನ್ನು ತಪ್ಪದೆ ಪಾಲಿಸುವುದು ಅತ್ಯಂತ ಸೂಕ್ತವಾಗಿದೆ.

ಕಡ್ಡಾಯವಾಗಿ ಅನುಸರಿಸಿ
ಬೀಜವನ್ನು ಸಂಸ್ಕೃರಿಸದೆ ಬಿತ್ತನೆ ಮಾಡುವುದರಿಂದ ರೋಗಬಾಧೆ, ಇಳುವರಿ ಕುಸಿತ, ಮಣ್ಣಿನ ಫಲವತ್ತತೆ ಕೊರತೆ ಮುಂತಾದ ಸಮಸ್ಯೆಗಳು ಕಾಡುತ್ತವೆ. ಹೀಗಾಗಿ ಬೀಜೋಪಚಾರ ಅಥವಾ ಬೀಜಾಮೃತವನ್ನು ಬಳಕೆ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ರೋಗ ಬಾಧೆಯಿಂದ ದೂರವಾಗಬಹುದು ಮತ್ತು ಮಣ್ಣಿನ
ಫಲವತ್ತತೆ ಕೂಡ ಹೆಚ್ಚಿಸಬಹುದು. ಎಲ್ಲ ರೈತರು ಇದನ್ನು ಕಡ್ಡಾಯವಾಗಿ ಅನುಸರಿಸುವ ಅಗತ್ಯವಿದೆ.
-ಡಾ| ಸುಧೀರ್‌ ಕಾಮತ್‌, ಪ್ರಾಂಶುಪಾಲರು
ಕೃಷಿ ಡಿಪ್ಲೋಮಾ ಕಾಲೇಜು ಬ್ರಹ್ಮಾವರ

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.