ತೆರಿಗೆ ರಿಯಾಯ್ತಿ ಪಡೆಯಿರಿ; ವಾಹನ ಬೇರೆಯವರಿಗೆ ವರ್ಗಾಯಿಸಿರಿ!

15 ವರ್ಷ ಮೀರಿದ ವಾಹನಗಳನ್ನೆಲ್ಲಾ ಗುಜರಿಗೆ ಹಾಕಬೇಕೆಂದಿಲ್ಲ

Team Udayavani, Feb 3, 2023, 6:50 AM IST

Tax

ಬೆಂಗಳೂರು: ಗುಜರಿ ಹಾಕಿದ ವಾಹನಕ್ಕೆ ಪ್ರತಿಯಾಗಿ ದೊರೆಯುವ ತೆರಿಗೆ ರಿಯಾಯ್ತಿ ಪ್ರಮಾಣಪತ್ರವನ್ನು ಹೊಸ ವಾಹನ ಖರೀದಿಸುವ ಮತ್ತೂಬ್ಬ ವ್ಯಕ್ತಿಗೆ ವರ್ಗಾವಣೆಗೆ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗುಜರಿ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಗುಜರಿ ನೀತಿ ಜಾರಿಗೆ ಸಿದ್ಧತೆಗಳು ನಡೆದಿದ್ದು, ಅದರಂತೆ ಗುಜರಿಗೆ ಹಾಕಿದ ವಾಹನಕ್ಕೆ ಪಾವತಿಸುತ್ತಿದ್ದ ತೆರಿಗೆ ಪ್ರಮಾಣ ಆಧರಿಸಿ ರಿಯಾಯ್ತಿ ದೊರೆಯಲಿದೆ. ಉದಾಹರಣೆಗೆ ಗುಜರಿಗೆ ಹಾಕಿದ ವಾಹನಕ್ಕೆ ಮಾಲಿಕರು ಒಂದು ಲಕ್ಷ ರೂ. ತೆರಿಗೆ ಪಾವತಿಸಿದ್ದರು ಅಂದುಕೊಳ್ಳೋಣ. ಆ ಪೈಕಿ 25 ಸಾವಿರ ರೂ. ಹೊಸ ವಾಹನ ಖರೀದಿಸುವಾಗ ತೆರಿಗೆ ವಿನಾಯಿತಿ ಸಿಗಲಿದೆ. ಒಂದು ವೇಳೆ ಹಳೆಯ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸಲು ಇಚ್ಛಿಸದಿದ್ದರೆ, ಆ ಪ್ರಮಾಣಪತ್ರವನ್ನು ನೀವು (ಗುಜರಿಗೆ ಹಾಕಿದ ವ್ಯಕ್ತಿ) ಹೊಸ ವಾಹನ ಖರೀದಿಸುವ ಬೇರೆ ವ್ಯಕ್ತಿಗೆ ವರ್ಗಾಯಿಸಲು ಕೂಡ ಅವಕಾಶ ಇದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಅನುಮೋದಿತ ನೀತಿಯಂತೆ ಮುಖ್ಯವಾಗಿ 15 ವರ್ಷ ಮೀರಿದ ವಾಹನಗಳನ್ನೆಲ್ಲಾ ಗುಜರಿಗೆ ಹಾಕಬೇಕೆಂದಿಲ್ಲ. ಸ್ವಯಂಪ್ರೇರಿತವಾಗಿ ಬಂದವರು ನೇರವಾಗಿ ಗುಜರಿ ಕೇಂದ್ರಕ್ಕೆ ವಾಹನಗಳನ್ನು ಕೊಂಡೊಯ್ಯಬಹುದು. ಆದರೆ, ಅವಧಿ ಮೀರಿದ ವಾಹನಗಳನ್ನು ಫಿಟ್‌ನೆಸ್‌ ಸರ್ಟಿಫಿಕೇಟ್‌ಗಾಗಿ ನೀಡುವ ಸಂದರ್ಭದಲ್ಲಿ ಯಾವುದೇ ವಾಹನ ಸತತ ಎರಡು ಬಾರಿ ಫಿಟ್‌ನೆಸ್‌ ಸರ್ಟಿಫಿಕೇಟ್‌ ಪಡೆಯುವಲ್ಲಿ ವಿಫ‌ಲವಾದರೆ, ಆ ವಾಹನವನ್ನು ಗುಜರಿಗೆ ಹಾಕಲೇಬೇಕಾಗುತ್ತದೆ.

ವಾಹನದಲ್ಲಿನ ಕಬ್ಬಿಣದ ತೂಕ ಆಧರಿಸಿ ಬೆಲೆ ನಿಗದಿ ಮಾಡಲಾಗುತ್ತದೆ. ಅದರ ಮೊತ್ತ ನೇರವಾಗಿ ವಾಹನ ಮಾಲೀಕರ ಖಾತೆಗೆ ಜಮೆಯಾಗಲಿದೆ. ಅಲ್ಲಿಂದ ಪ್ರಮಾಣ ಪತ್ರ ಪಡೆದು ಹೊಸ ವಾಹನ ಖರೀದಿ ಮಾಡುವಾಗ ರಿಯಾಯಿತಿ ಪಡೆಯಬಹುದಾಗಿದೆ.

ಎರಡು ದಿನದಲ್ಲಿ ಅರ್ಜಿ ಆಹ್ವಾನ: ನೋಂದಾಯಿತ ವಾಹನ ಗುಜರಿ ಕೇಂದ್ರಗಳನ್ನು (ಆರ್‌ವಿಎಸ್‌ಎಫ್) ತೆರೆಯಲು ಸಾರಿಗೆ ಇಲಾಖೆ ತಯಾರಿ ನಡೆಸುತ್ತಿದ್ದು, 3 ತಿಂಗಳಲ್ಲಿ ಗುಜರಿ ಕೇಂದ್ರಗಳು ಅಸ್ತಿತ್ವಕ್ಕೆ ಬರಲಿವೆ. ಈ ಸಂಬಂಧ ಆಸಕ್ತರಿಂದ ಸಾರಿಗೆ ಇಲಾಖೆ ಎರಡು ದಿನಗಳಲ್ಲಿ ಅರ್ಜಿ ಸ್ವೀಕರಿಸಲಿದ್ದು, ಹತ್ತು ಕೋಟಿಗೂ ಹೆಚ್ಚು ವಹಿವಾಟು ನಡೆಸಿರುವ ಕಂಪನಿ ಅಥವಾ ವ್ಯಕ್ತಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಗುಜರಿಗೆ ಬರುವ ವಾಹನಗಳನ್ನು ನಿಲ್ಲಿಸಲು ಅಗತ್ಯ ಜಾಗ ಇರಬೇಕಾಗುತ್ತದೆ. ಜಾಗ ಸಿದ್ಧ ಇದ್ದವರು ಅರ್ಜಿ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಒಪ್ಪಿಗೆ ಪತ್ರ, ಕಾರ್ಮಿಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯಬೇಕು. ಗುಜರಿ ಕೇಂದ್ರಕ್ಕೆ ಬೇಕಿರುವ ಯಂತ್ರಗಳನ್ನು ಅಳವಡಿಕೆ ಮಾಡಿಕೊಂಡ ಬಳಿಕ ಸಾರಿಗೆ ಇಲಾಖೆಯಿಂದ ಪರವಾನಗಿ ನೀಡಲಾಗುತ್ತದೆ. ಆ ಕೇಂದ್ರದವರೇ ಆನ್‌ಲೈನ್‌ನಲ್ಲಿ ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಎನ್‌ಒಸಿ (ನಿರಾಕ್ಷೇಪಣ ಪತ್ರ) ಪಡೆದುಕೊಳ್ಳುತ್ತಾರೆ. ಪೊಲೀಸ್‌ ಅಥವಾ ಸಾರಿಗೆ ಇಲಾಖೆಗೆ ವಾಹನಗಳ ಮಾಲೀಕರು ಅರ್ಜಿ ಸಲ್ಲಿಸಬೇಕಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.