ರುಚಿಕರವಾದ ಅಡುಗೆ…ಶುಂಠಿ ತಂಬುಳಿ, ಶುಂಠಿ ಬರ್ಫಿ ಮಾಡೋದು ಹೇಗೆ?


ಶ್ರೀರಾಮ್ ನಾಯಕ್, May 28, 2020, 8:07 PM IST

ಶುಂಠಿಯ ಸವಿರುಚಿ

ಶುಂಠಿಯ ರುಚಿ ಎಷ್ಟು ತೀಕ್ಷ್ಣವೋ ಪರಿಮಳವೂ ಅಷ್ಟೇ ಆಕರ್ಷಕ. ಆರೋಗ್ಯ ದೃಷ್ಟಿಯಿಂದ ಅಲ್ಲದೆ ಅಡುಗೆಯ ರುಚಿಯಲ್ಲೂ ವಿಶೇಷ ಸ್ಥಾನ ಪಡೆದ ಶುಂಠಿಯು ಬರೀ ಆಯುರ್ವೇದ ವೈದ್ಯರು ಮಾತ್ರವಲ್ಲ ಇಂದು ಅಲೋಪತಿ ವೈದ್ಯ ಪದ್ಧತಿಯಲ್ಲಿ ತನ್ನ ಛಾಪನ್ನು ಮೂಡಿಸಿದೆ. ಕ್ಯಾಲ್ಸಿಯಂ ಅಂಶ ಜಾಸ್ತಿ ಇರುವುದರಿಂದ ಬಾಣಂತಿಯರಿಗೂ ಇದು ತುಂಬಾನೇ ಒಳ್ಳೆಯದು. ಎಲ್ಲೆಂದರಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಶೀತಬಾಧೆ ಸರ್ವೆ ಸಾಮಾನ್ಯ ಇದನ್ನು ತಡೆಗಟ್ಟಲು ಹಾಗೂ ನಿವಾರಣೆಗೆ ದಿನನಿತ್ಯದ ಆಹಾರದಲ್ಲಿ ಅಡುಗೆಯ ಮೂಲಕ ಶುಂಠಿ ಬಳಕೆ ಒಳ್ಳೆಯದು. ಸಿಹಿತಿಂಡಿಯಲ್ಲೂ ಶುಂಠಿಯನ್ನು ಬಳಸುವುದು ನಮ್ಮ ಅಡುಗೆಯ ವಿಶೇಷತೆ. ಆದ್ದರಿಂದ ಶುಂಠಿ ಪ್ರಧಾನವಾಗಿರುವ ಕೆಲವೊಂದು ರುಚಿಕರವಾದ ಅಡುಗೆಯನ್ನು ನೀವೂ ಮನೆಯಲ್ಲೇ ಮಾಡಿ ನೋಡಿ ಸವಿಯಿರಿ.

ಶುಂಠಿ ತಂಬುಳಿ
ತುಂಬುಳಿ ನಮ್ಮ ದಿನನಿತ್ಯದ ಅಡುಗೆಗಳಲ್ಲಿ ಒಂದು. ಊಟದ ಮೊದಲಿಗೆ ಸ್ವಲ್ಪ ಅನ್ನದ ಜೊತೆಯಲ್ಲಿ ಸವಿದರೆ ಆರೋಗ್ಯಕ್ಕೆ ಒಳ್ಳೆಯದು .ಮನೆಯಲ್ಲಿ ಇರುವ ಸಾಮಗ್ರಿಗಳೊಂದಿಗೆ ಈ ತಂಬುಳಿ ತಯಾರಿಸಬಹುದು.

ಬೇಕಾಗುವ ಸಾಮಗ್ರಿಗಳು
ತೆಂಗಿನ ಕಾಯಿ ತುರಿ 1 ಕಪ್‌, ಹಸಿ ಶುಂಠಿ 1 ಸಣ್ಣ ತುಂಡು, ಮೊಸರು 1 ಕಪ್‌,ಜೀರಿಗೆ ಸ್ವಲ್ಪ, ಕರಿಬೇವು ಸೊಪ್ಪು 2ರಿಂದ 4, ಸಾಸಿವೆ ಸ್ವಲ್ಪ, ರುಚಿಗೆ ಉಪ್ಪು.

ತಯಾರಿಸುವ ವಿಧಾನ
ತೆಂಗಿನ ತುರಿ,ಶುಂಠಿಯನ್ನು ಸಣ್ಣಗೆ ರುಬ್ಬಿರಿ. ತದನಂತರ ಮೊಸರು ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಕರಿಬೇವು, ಜೀರಿಗೆ, ಸಾಸಿವೆ ಒಗ್ಗರಣೆ ಕೊಟ್ಟರೆ ರುಚಿಯಾದ ಆರೋಗ್ಯಕರ ಶುಂಠಿ ತಂಬುಳಿ ಅನ್ನದ ಜೊತೆ ಸವಿಯಲು ಸಿದ್ಧ.

ಶುಂಠಿ ಬರ್ಫಿ
ಬೇಕಾಗುವ ಸಾಮಗ್ರಿಗಳು
ಮೈದಾ ಅಥವಾ ಗೋಧಿ ಹಿಟ್ಟು 1 ಕಪ್‌, ತುಪ್ಪ 1/2 ಕಪ್‌,ಶುಂಠಿ ರಸ ಸ್ವಲ್ಪ, ಹಾಲಿನ ಕೆನೆ 1/4 ಕಪ್‌,ಸಕ್ಕರೆ 2 ಕಪ್‌

ತಯಾರಿಸುವ ವಿಧಾನ
ಮೈದಾ ಅಥವಾ ಗೋಧಿಯನ್ನು ತುಪ್ಪದಲ್ಲಿ ಪರಿಮಳ ಬರುವವರೆಗೆ ಹುರಿಯಿರಿ. ಸಕ್ಕರೆ ನೂಲು ಪಾಕ ಮಾಡಿಟ್ಟು ಕೊಳ್ಳಿ. ಅದಕ್ಕೆ ಶುಂಠಿ ರಸ, ಹಾಲಿನ ಕೆನೆ, ಹುರಿದಿಟ್ಟ ಮೈದಾ/ಗೋಧಿ ಹಿಟ್ಟನ್ನು ಹಾಕಿ ಮಿಕ್ಸ್‌ ಮಾಡಿ. ಬಾಣಲೆಯಿಂದ ತಳಬಿಡುತ್ತಾ ಬರುವಾಗ ತುಪ್ಪ ಸವರಿದ ತಟ್ಟೆಗೆ ಹಾಕಿ ಆರಿದ ಮೇಲೆ ಕತ್ತರಿಸಿ ಸವಿಯಿರಿ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.