ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್ಸಿಪಿ; ಕಾಂಗ್ರೆಸ್ ಇಲ್ಲ
Team Udayavani, Jan 19, 2022, 8:04 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಯಾಗುತ್ತಿದ್ದು, ಬುಧವಾರ ಶಿವಸೇನೆ ಮತ್ತು ಎನ್ಸಿಪಿ ಮೈತ್ರಿ ಘೋಷಿಸಿದೆ.
ಶಿವಸೇನೆ ಸಂಸದ ಸಂಜಯ ರಾವುತ್ ಮತ್ತು ಎನ್ಸಿಪಿ ಸಂಸದ ಪ್ರಫುಲ್ ಪಟೇಲ್ ರವರು ಪಣಜಿಯಲ್ಲಿ ಜಂಟಿ ಸುದ್ಧಿಗೋಷ್ಠಿಯಲ್ಲಿ, ನಮ್ಮದು ಸ್ಥಾನಕ್ಕಾಗಿ ಯಾವುದೇ ವಿವಾದವಿಲ್ಲ. ಸಮಯ ಬಂದರೆ ಶಿವಸೇನೆ ಒಂದು ಹೆಜ್ಜೆ ಹಿಂದೆ ಸರಿಯುತ್ತದೆ ಅಥವಾ ಎನ್ಸಿಪಿ ಒಂದು ಹೆಜ್ಜೆ ಹಿಂದೆ ಸರಿಯುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆಯ ಸಂಜಯ್ ರಾವುತ್, ಪಕ್ಷ ಸಂಘಟನೆಯು ಆಯಾ ರಾಮ್ ಗಯಾರಾಮ್ ಮಾಡಿದರೆ ಸಾಧ್ಯವಿಲ್ಲ. ಅದಕ್ಕಾಗಿ ದುಡಿಯಬೇಕು ಎಂದು ಹೇಳಿ ಪಕ್ಷಾಂತರ ಮಾಡುವ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ಗೋವಾದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ನಾವು ಸ್ಫರ್ಧಿಸುವುದಿಲ್ಲ. ಮಹಾರಾಷ್ಟ್ರದಂತೆ ಗೋವಾದಲ್ಲಿಯೂ ಮಹಾಘಟಬಂಧನ ಸ್ಥಾಪಿಸುವ ಕುರಿತಂತೆ ಶಿವಸೇನೆಯ ಸಂಜಯ ರಾವುತ್ ಇಂಗಿತ ವ್ಯಕ್ತಪಡಿಸಿದರು.
ಕಾಂಗ್ರೆಸ್ ಇಲ್ಲ
ಮಹಾರಾಷ್ಟ್ರದಲ್ಲಿ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಇದೆ ಆದರೆ ಗೋವಾದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಮೈತ್ರಿಕೂಟವನ್ನು ಸೇರಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?